ಬ್ರೇಕಿಂಗ್ ನ್ಯೂಸ್
25-03-21 03:13 pm Mangaluru correspondent ಕರಾವಳಿ
ಉಳ್ಳಾಲ, ಮಾ.25 : ಎದೆ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ತೊಕ್ಕೊಟ್ಟಿನ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ್ದ ಸಂದರ್ಭದಲ್ಲೇ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಕುಂಪಲ ಕೃಷ್ಣ ನಗರ ನಿವಾಸಿ ವಿಶ್ವಾಸ್ ಕುಲಾಲ್ (43) ಮೃತ ವ್ಯಕ್ತಿ. ವಿದೇಶದಲ್ಲಿ ನೌಕರಿಯಲ್ಲಿದ್ದ ವಿಶ್ವಾಸ್ ಅವರು ಕಳೆದ ಲಾಕ್ ಡೌನ್ ಸಂದರ್ಭದಲ್ಲಿ ಊರಿಗೆ ಮರಳಿ ಜೀವನ ನಿರ್ವಹಣೆಗಾಗಿ ಮಾಡೂರಿನಲ್ಲಿ ಫಿಟ್ಟರ್ ಕೆಲಸ ಮಾಡುತ್ತಿದ್ದರು.
ವಿಶ್ವಾಸ್ ಅವರಿಗೆ ನಿನ್ನೆ ರಾತ್ರಿಯೇ ಎದೆ ನೋವು ಕಾಣಿಸಿ ಕೊಂಡಿತ್ತಂತೆ. ಇಂದು ಬೆಳಗ್ಗೆ ತೊಕ್ಕೊಟ್ಟಿನ ಓವರ್ ಬ್ರಿಡ್ಜ್ ನಲ್ಲಿರುವ ಕ್ಲಿನಿಕ್ ಒಂದಕ್ಕೆ ಭೇಟಿ ನೀಡಿ ತಪಾಸಣೆ ನಡೆಸಿದ್ದು ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದಾರೆ. ನೇತಾಜಿ ಆಸ್ಪತ್ರೆಗೆ ನಡೆದುಕೊಂಡೇ ಬಂದ ವಿಶ್ವಾಸ್ ಅವರು ಆಸ್ಪತ್ರೆಯಲ್ಲಿ ಇಸಿಜಿ ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಮೃತರು ಪತ್ನಿ ಮತ್ತು ಎರಡು ಪುಟ್ಟ ಹೆಣ್ಮಕ್ಕಳನ್ನು ಅಗಲಿದ್ದಾರೆ. ವಿಶ್ವಾಸ್ ಅವರ ಅಕಾಲಿಕ ಅಗಲಿಕೆಯಿಂದ ಪತ್ನಿ, ಕುಟುಂಬ, ಸ್ನೇಹಿತ ವರ್ಗದವರು ಶೋಕ ತಪ್ತರಾಗಿದ್ದಾರೆ.
ಈ ತಿಂಗಳಲ್ಲಿ ಕುಂಪಲ ಪರಿಸರದಲ್ಲಿ ಯುವತಿ ಪ್ರೇಕ್ಷಾ ನಿಗೂಢ ಸಾವು ಬಳಿಕ ವಿಶ್ವಾಸ್ ಅವರ ನಾಲ್ಕನೇ ಅಕಾಲಿಕ ಮರಣವಾಗಿದ್ದು ಕುಂಪಲ ನಿವಾಸಿಗಳಲ್ಲಿ ಆತಂಕ ಮೂಡುವಂತಾಗಿದೆ.
Mangalore Man dies of heart attack in kumpala. The deceased has been identified as Vishwas Kulal.
23-10-24 12:41 pm
Bangalore Correspondent
Bangalore Rain, School holiday: ಬೆಂಗಳೂರಿನಲ್ಲಿ...
22-10-24 11:13 pm
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
Kengari body found, Bangalore: ಬಿಂದಿಗೆ ಎತ್ತಿಕ...
22-10-24 08:27 pm
ಬೆಂಗಳೂರಿನಲ್ಲಿ 6 ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡ ಮ...
22-10-24 07:19 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
23-10-24 03:15 pm
Mangalore Correspondent
Mangalore News, Ashok Leyland: ಬಡಾ ದೋಸ್ತ್ ವಾಹ...
22-10-24 10:26 pm
'ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ' ; ಅ.25ರ...
22-10-24 09:44 pm
Mangalore college, News: ಸರಕಾರಿ ಪ್ರಥಮ ದರ್ಜೆ ಕ...
22-10-24 07:28 pm
Mangalore, Ullal, railway track stone: ರೈಲು ಹ...
22-10-24 05:29 pm
22-10-24 02:49 pm
HK News Desk
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm
ಸಿಸಿಬಿ ಪೊಲೀಸರ ಭರ್ಜರಿ ಬೇಟೆ ; ಪೋಸ್ಟ್ ಆಫೀಸ್ನಲ್ಲ...
18-10-24 03:11 pm