ಬ್ರೇಕಿಂಗ್ ನ್ಯೂಸ್
25-03-21 03:13 pm Mangaluru correspondent ಕರಾವಳಿ
ಉಳ್ಳಾಲ, ಮಾ.25 : ಎದೆ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ತೊಕ್ಕೊಟ್ಟಿನ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ್ದ ಸಂದರ್ಭದಲ್ಲೇ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ.

ಕುಂಪಲ ಕೃಷ್ಣ ನಗರ ನಿವಾಸಿ ವಿಶ್ವಾಸ್ ಕುಲಾಲ್ (43) ಮೃತ ವ್ಯಕ್ತಿ. ವಿದೇಶದಲ್ಲಿ ನೌಕರಿಯಲ್ಲಿದ್ದ ವಿಶ್ವಾಸ್ ಅವರು ಕಳೆದ ಲಾಕ್ ಡೌನ್ ಸಂದರ್ಭದಲ್ಲಿ ಊರಿಗೆ ಮರಳಿ ಜೀವನ ನಿರ್ವಹಣೆಗಾಗಿ ಮಾಡೂರಿನಲ್ಲಿ ಫಿಟ್ಟರ್ ಕೆಲಸ ಮಾಡುತ್ತಿದ್ದರು.

ವಿಶ್ವಾಸ್ ಅವರಿಗೆ ನಿನ್ನೆ ರಾತ್ರಿಯೇ ಎದೆ ನೋವು ಕಾಣಿಸಿ ಕೊಂಡಿತ್ತಂತೆ. ಇಂದು ಬೆಳಗ್ಗೆ ತೊಕ್ಕೊಟ್ಟಿನ ಓವರ್ ಬ್ರಿಡ್ಜ್ ನಲ್ಲಿರುವ ಕ್ಲಿನಿಕ್ ಒಂದಕ್ಕೆ ಭೇಟಿ ನೀಡಿ ತಪಾಸಣೆ ನಡೆಸಿದ್ದು ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದಾರೆ. ನೇತಾಜಿ ಆಸ್ಪತ್ರೆಗೆ ನಡೆದುಕೊಂಡೇ ಬಂದ ವಿಶ್ವಾಸ್ ಅವರು ಆಸ್ಪತ್ರೆಯಲ್ಲಿ ಇಸಿಜಿ ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಮೃತರು ಪತ್ನಿ ಮತ್ತು ಎರಡು ಪುಟ್ಟ ಹೆಣ್ಮಕ್ಕಳನ್ನು ಅಗಲಿದ್ದಾರೆ. ವಿಶ್ವಾಸ್ ಅವರ ಅಕಾಲಿಕ ಅಗಲಿಕೆಯಿಂದ ಪತ್ನಿ, ಕುಟುಂಬ, ಸ್ನೇಹಿತ ವರ್ಗದವರು ಶೋಕ ತಪ್ತರಾಗಿದ್ದಾರೆ.

ಈ ತಿಂಗಳಲ್ಲಿ ಕುಂಪಲ ಪರಿಸರದಲ್ಲಿ ಯುವತಿ ಪ್ರೇಕ್ಷಾ ನಿಗೂಢ ಸಾವು ಬಳಿಕ ವಿಶ್ವಾಸ್ ಅವರ ನಾಲ್ಕನೇ ಅಕಾಲಿಕ ಮರಣವಾಗಿದ್ದು ಕುಂಪಲ ನಿವಾಸಿಗಳಲ್ಲಿ ಆತಂಕ ಮೂಡುವಂತಾಗಿದೆ.
Mangalore Man dies of heart attack in kumpala. The deceased has been identified as Vishwas Kulal.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 10:45 am
HK News Staffer
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm