ಬ್ರೇಕಿಂಗ್ ನ್ಯೂಸ್
21-08-20 04:15 pm Mangalore Reporter ಕರಾವಳಿ
ಮಂಜೇಶ್ವರ, ಆಗಸ್ಟ್ 21: ಕಡಿದು ಬಿದ್ದ ವಿದ್ಯುತ್ ತಂತಿಯನ್ನು ತುಳಿದು ತಾಯಿ ಮತ್ತು ಮಗು ಮೃತಪಟ್ಟ ಘಟನೆ ವರ್ಕಾಡಿ ಪಂಚಾಯತ್ ವ್ಯಾಪ್ತಿಯ ಬೋಳಂತಕೋಡಿಯಲ್ಲಿ ನಡೆದಿದೆ.
ಮಳೆ, ಗಾಳಿಗೆ ವಿದ್ಯುತ್ ತಂತಿ ತುಂಡಾಗಿ ಮನೆಯ ಹಿಂಭಾಗದಲ್ಲಿ ಬಿದ್ದಿತ್ತು. ಇದನ್ನು ಗಮನಿಸದೆ 5 ವರ್ಷದ ಮಗು ಆಶ್ರಯ್ ಆ ದಾರಿಯಲ್ಲಿ ಸಾಗಿದ್ದ. ತಂತಿ ತುಳಿಯುತ್ತಿದ್ದಂತೆ ವಿದ್ಯುತ್ ಶಾಕ್ ಹೊಡೆದಿದ್ದು ಮನೆ ಒಳಗಿದ್ದ ತಾಯಿ ವಿಜಯಾ(35) ಹೊರಗೆ ಓಡಿ ಬಂದು ಮಗುವನ್ನು ಎತ್ತಲು ಮುಂದಾಗಿದ್ದಾರೆ. ಆದರೆ, ಮಗು ಮತ್ತು ತಾಯಿ ಇಬ್ಬರೂ ವಿದ್ಯುತ್ ಶಾಕ್ ತಗಲಿ ಮೃತಪಟ್ಟಿದ್ದಾರೆ.

ಹಿರಿಯ ಮಗಳು ಸಾನಿಕ ಕೂಡ ಅದೇ ದಾರಿಯಿಂದ ಓಡಿಕೊಂಡು ಹೋಗಿದ್ದಳು. ಆದರೆ ಸಾನಿಕ ಅದೃಷ್ಟದಿಂದ ತಂತಿಯನ್ನು ತುಳಿಯದೆ ಮುಂದಕ್ಕೆ ಹೋಗಿದ್ದಾಳೆ. ಹಿಂದಿನಿಂದ ಓಡಿಬಂದ ತಮ್ಮ ತಂತಿಯನ್ನು ತುಳಿದು ದುರಂತಕ್ಕೆ ಈಡಾಗಿದ್ದಾನೆ. ಆಟೋ ಚಾಲಕ ವಿಶ್ವನಾಥ ಎಂಬವರ ಮಕ್ಕಳಾಗಿದ್ದು ಇಬ್ಬರೂ ಕಳಿಯೂರು ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿಯುತ್ತಿದ್ದರು. ಹಿರಿಯ ಮಗಳು ನಾಲ್ಕನೇ ತರಗತಿ ಆಗಿದ್ದರೆ, ಆಶ್ರಯ್ ಎಲ್ ಕೆಜಿ ಕಲಿಯುತ್ತಿದ್ದ. ಲಾಕ್ ಡೌನ್ ಕಾರಣ ಶಾಲೆ ಇಲ್ಲದೆ ಮನೆಯಲ್ಲಿ ಆಟದಲ್ಲಿ ತೊಡಗಿದ್ದರು.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm