ಬ್ರೇಕಿಂಗ್ ನ್ಯೂಸ್
26-03-21 04:52 pm Mangaluru correspondent ಕರಾವಳಿ
ಮಂಗಳೂರು, ಮಾ.25: ಜನರಿಗೆ ಯಾವುದೇ ಸೂಚನೆ ನೀಡದೆ ಜಿಲ್ಲಾಧಿಕಾರಿಯವರು ಏಕಾಏಕಿ ಬೀದಿಗಿಳಿದು ದಂಡ ವಿಧಿಸಿದ್ದು ತಪ್ಪು. ಮಾಲ್, ಪಬ್ ಗಳಲ್ಲಿ ಸೇರುವ ಜನರ ಮೇಲೆ ದಂಡ ಹಾಕಲ್ಲ. ಸಾಮಾನ್ಯ ಜನರ ಮೇಲೆ ದಂಡ ವಿಧಿಸುವ, ಬಂಧಿಸುವ ಕೆಲಸ ಮಾಡುತ್ತಾರೆ. ಇದು ಎಷ್ಟು ಸರಿ ಎಂದು ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಪ್ರಶ್ನೆ ಮಾಡಿದ್ದಾರೆ.
ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲಾಧಿಕಾರಿ ಕೈಗೊಂಡಿರುವ ದಿಢೀರ್ ದಾಳಿ ಕ್ರಮವನ್ನು ಟೀಕಿಸಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ನಾಯಕಿ, ದೊಡ್ಡ ಮಾಲ್ಗಳಲ್ಲಿ ದಾಳಿ ನಡೆಸಿ, 500 ಸಾವಿರ ದಂಡ ವಿಧಿಸಿದ್ದಾರೆ. ಸಣ್ಣ ವ್ಯಾಪಾರಸ್ಥರ ಅಂಗಡಿಗಳಿಗೆ 4-5 ಸಾವಿರ ರೂ. ದಂಡ ವಿಧಿಸಿದ್ದಾರೆ. ಮಹಾನಗರ ಪಾಲಿಕೆಯವರು ಕೂಡ ಇದೇ ಕೆಲಸ ಮಾಡುತ್ತಿದ್ದಾರೆ. ಸಾಮಾನ್ಯ ಜನರ ಮೇಲೆ ಇವರು ದಂಡದ ಪ್ರಯೋಗ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಮಾಸ್ಕ್ ಧರಿಸದೇ ಇದ್ದುದಕ್ಕೆ ದಂಡ ವಿಧಿಸಲಿ. ಹಾಗೆಂದು ಮಾಸ್ಕ್ ಹಾಕದ ಕಾರಣಕ್ಕೆ ಬಂಧಿಸುವ ಅಧಿಕಾರ ಇದೆಯೇ ಇವರಿಗೆ. ಪೆಟ್ರೋಲ್ ಪಂಪಿನಲ್ಲಿ ಮಾಸ್ಕ್ ಹಾಕಿಲ್ಲವೆಂದು ಪೊಲೀಸರು ಒಬ್ಬನನ್ನು ಅಪರಾಧಿಯಂತೆ ಎಳಕೊಂಡು ಹೋಗಿದ್ದು ಎಷ್ಟು ಸರಿ ಎಂದು ಆಕ್ಷೇಪಿಸಿದ್ದಾರೆ.
ಮೊನ್ನೆ ಸುರತ್ಕಲ್ ನಲ್ಲಿ ಡಿಜೆ, ಡ್ಯಾನ್ಸ್ ಎಂದು ಬಹಳಷ್ಟು ಜನ ಸೇರಿದ್ದರು. ಕುಣಿದಾಡಿದ್ದಾರೆ. ಅದರಲ್ಲಿ ಡೀಸಿಯವರೂ ಇದ್ದರು. ಅಲ್ಲಿ ಇಲ್ಲದ ಕೊರೊನಾ ನಿಯಮ ಬೀದಿಯಲ್ಲಿ ಹೋಗೋ ಜನರ ಮೇಲೆ ಮಾತ್ರ ಯಾಕೆ ವಿಧಿಸುತ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Congress leader prathibha kulai has slammed Mangalore DC Rajendra for his audacity on poor over covid rules.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm