ನೇತ್ರಾವತಿ ಸೇತುವೆಯಲ್ಲಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ ; ಕಾರಿನ ಧಾವಂತಕ್ಕೆ ಆಟೋ ಅಪ್ಪಚ್ಚಿ ; ಚಾಲಕ ಸ್ಥಳದಲ್ಲೇ ಸಾವು !

27-03-21 09:29 am       Mangaluru correspondent   ಕರಾವಳಿ

ಇಲ್ಲಿನ ನೇತ್ರಾವತಿ ನದಿ ಸೇತುವೆಯಲ್ಲಿ ಕಾರು ಚಾಲಕನ ಧಾವಂತಕ್ಕೆ ಆಟೋ ರಿಕ್ಷಾ ಅಪ್ಪಚ್ಚಿಯಾಗಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.‌ 

ಉಳ್ಳಾಲ, ಮಾ.27:  ಇಲ್ಲಿನ ನೇತ್ರಾವತಿ ನದಿ ಸೇತುವೆಯಲ್ಲಿ ಕಾರು ಚಾಲಕನ ಧಾವಂತಕ್ಕೆ ಆಟೋ ರಿಕ್ಷಾ ಅಪ್ಪಚ್ಚಿಯಾಗಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.‌ 

ಮಂಗಳೂರಿನಿಂದ ತೊಕ್ಕೊಟ್ಟಿಗೆ ಬರುತ್ತಿದ್ದ ಆಟೋ ರಿಕ್ಷಾಗೆ ಹಿಂದಿನಿಂದ ಬರುತ್ತಿದ್ದ ಕಾರು ಬಲವಾಗಿ ಡಿಕ್ಕಿಯಾಗಿದ್ದು ರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳ್ಳಂಬೆಳಗ್ಗೆ ಘಟನೆ ನಡೆದಿದ್ದು ಕಾರು ಚಾಲಕನ ಅಜಾಗರೂಕತೆಯ ಚಾಲನೆ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. 

ಕೊಣಾಜೆ ಪಜೀರು ಬಳಿಯ ಸೇನೆರೆಬೈಲು ನಿವಾಸಿ ಸಂಜೀವ ಪೂಜಾರಿ ಎಂಬವರ ಪುತ್ರ ಶ್ಯಾಮ್ ರಾಜ್  (45) ಅಪಘಾತದಲ್ಲಿ ಸಾವಿಗೀಡಾದ ವ್ಯಕ್ತಿ ಎಂದು ತಿಳಿದುಬಂದಿದೆ. ಮೃತರು ಪತ್ನಿ ಇಬ್ಬರು ಗಂಡು ಮಕ್ಕಳನ್ನ ಅಗಲಿದ್ದಾರೆ.

ಸ್ಥಳದಲ್ಲಿ ಜಮಾಯಿಸಿದ ಉದ್ರಿಕ್ತರು ಕಾರು ಚಾಲಕನಿಗೆ ಹಲ್ಲೆಗೆ ಮುಂದಾಗಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಗುಂಪನ್ನು ಚದುರಿಸಿ ಆಟೋ ರಿಕ್ಷಾ ಚಾಲಕನ ದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. 

ಮಂಗಳೂರಿನಿಂದ ತೊಕ್ಕೊಟ್ಟಿಗೆ ಬರುತ್ತಿದ್ದ ಆಟೋ ರಿಕ್ಷಾಗೆ ಹಿಂದಿನಿಂದ ಬರುತ್ತಿದ್ದ ಕಾರು ಬಲವಾಗಿ ಡಿಕ್ಕಿಯಾಗಿದ್ದು ರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳ್ಳಂಬೆಳಗ್ಗೆ ಘಟನೆ ನಡೆದಿದ್ದು ಕಾರು ಚಾಲಕನ ಅಜಾಗರೂಕತೆಯ ಚಾಲನೆ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. 

ಕೇರಳ ನೋಂದಣಿಯ ಕಾರು ಇದಾಗಿದ್ದು ಟೆಂಪೋಗೆ ಬಡಿದು ಆಟೋ ರಿಕ್ಷಾಗೆ ಡಿಕ್ಕಿಯಾಗಿದೆ. ಎಡದ ಬದಿಯಲ್ಲೇ ಇದ್ದ ರಿಕ್ಷಾ ಡಿಕ್ಕಿಯ ರಭಸಕ್ಕೆ ಸೇತುವೆಯ ಅಂಚಿಗೆ ಸಿಲುಕಿದ್ದು ನಜ್ಜುಗುಜ್ಜಾಗಿದೆ.

In A Tragic Accident That Occurred At The Netravathi Bridge In Ullal, An Auto Rickshaw Collided With A Car Driver, Shyam Raj (45), To Die On The Spot.