ಬ್ರೇಕಿಂಗ್ ನ್ಯೂಸ್
27-03-21 02:08 pm Mangaluru correspondent ಕರಾವಳಿ
ಮಂಗಳೂರು, ಮಾರ್ಚ್ 27: ಖಾಸಗಿ ಕಾರಿನ ಚಾಲಕನೊಬ್ಬ ಸಮವಸ್ತ್ರ ಧರಿಸಿಲ್ಲ ಎಂಬ ಕಾರಣಕ್ಕೆ ಬಂಟ್ವಾಳ ಪೊಲೀಸರು 500 ರೂ. ದಂಡ ವಿಧಿಸಿದ ಘಟನೆ ನಡೆದಿದ್ದು ಈ ಬಗ್ಗೆ ತಿಳಿದ ಎಸ್ಪಿ ದಂಡದ ಹಣವನ್ನು ಹಿಂತಿರುಗಿ ಕೊಡಿಸಿದ ಪ್ರಸಂಗ ನಡೆದಿದೆ.
ಸಾಮಾನ್ಯವಾಗಿ ಖಾಸಗಿ ವಾಹನದ ಚಾಲಕರು ಸಮವಸ್ತ್ರ ಹಾಕಬೇಕೆಂಬ ನಿಯಮವಿಲ್ಲ. ಬಾಡಿಗೆ ನಡೆಸುವ ಕಾರುಗಳು ಅಂದರೆ, ಯೆಲ್ಲೋ ಬೋರ್ಡ್ ನಂಬರ್ ಪ್ಲೇಟ್ ಇರುವ ವಾಹನಗಳಿಗೆ ಮಾತ್ರ ಚಾಲಕರು ಬಿಳಿ ಸಮವಸ್ತ್ರ ಧರಿಸಬೇಕೆಂಬ ನಿಯಮ ಇದೆ.
ಆದರೆ ಮಾ.23ರಂದು ಬಂಟ್ವಾಳ ಬಳಿಯ ರಾಮಲ್ಕಟ್ಟೆ ಎಂಬಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರು, ಸಮವಸ್ತ್ರ ಧರಿಸದ ಕಾರಣಕ್ಕೆ ಪಾಣೆ ಮಂಗಳೂರು ಮೂಲದ ಕಾರು ಚಾಲಕರೊಬ್ಬರಿಗೆ 500 ರೂ. ದಂಡ ವಿಧಿಸಿದ್ದರು.
ಪೊಲೀಸರು ನೀಡಿದ ದಂಡದ ರಶೀದಿಯನ್ನು ನೋಡಿದ ಕಾರು ಚಾಲಕರ ಪುತ್ರ, ಅದನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ.ಎಂ.ಲಕ್ಷ್ಮೀಪ್ರಸಾದ್ ಅವರ ಗಮನಕ್ಕೆ ತಂದಿದ್ದಾರೆ. ಈ ವೇಳೆ ಎಸ್ಪಿ ಸಮಸ್ಯೆಯನ್ನು ಸರಿಪಡಿಸುವುದಾಗಿ ಭರವಸೆ ನೀಡಿದ್ದಲ್ಲದೆ, ಪೊಲೀಸರು ಸಂಗ್ರಹಿಸಿದ್ದ ದಂಡದ ಮೊತ್ತವನ್ನು ಪೇದೆಯಲ್ಲಿ ಅದೇ ದಿನ ರಾತ್ರಿ ಹಿಂತಿರುಗಿಸಲು ಸೂಚನೆ ನೀಡಿದ್ದಾರೆ.
ಎಸ್ಪಿ ಸೂಚನೆಯಂತೆ ಪೊಲೀಸ್ ಪೇದೆ ನೇರವಾಗಿ ಖಾಸಗಿ ವಾಹನದಲ್ಲಿ ಪಾಣೆಮಂಗಳೂರಿಗೆ ನಡುರಾತ್ರಿಯಲ್ಲೇ ಬಂದು ಖಾಸಗಿ ಕಾರು ಚಾಲಕನ ಕೈಗೆ 500 ರೂ. ಹಿಂತಿರುಗಿಸಿದ್ದಾರೆ. ಪೊಲೀಸ್ ಅಧೀಕ್ಷಕರು ತುರ್ತಾಗಿ ಸ್ಪಂದಿಸಿದ ಕ್ರಮಕ್ಕೆ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಗಿದೆ.
Bantwal police have charged a fine of Rs 500 from a private car driver for not wearing his uniform. The son of a car driver who saw the receipt of the fine from the police brought it to the notice of the Dakshina Kannada District Superintendent of Police, BM Lakshmiprasad, who then returned the fine amount back to the driver.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
09-02-26 02:50 pm
Mangalore Correspondent
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm