ಬ್ರೇಕಿಂಗ್ ನ್ಯೂಸ್
27-03-21 02:08 pm Mangaluru correspondent ಕರಾವಳಿ
ಮಂಗಳೂರು, ಮಾರ್ಚ್ 27: ಖಾಸಗಿ ಕಾರಿನ ಚಾಲಕನೊಬ್ಬ ಸಮವಸ್ತ್ರ ಧರಿಸಿಲ್ಲ ಎಂಬ ಕಾರಣಕ್ಕೆ ಬಂಟ್ವಾಳ ಪೊಲೀಸರು 500 ರೂ. ದಂಡ ವಿಧಿಸಿದ ಘಟನೆ ನಡೆದಿದ್ದು ಈ ಬಗ್ಗೆ ತಿಳಿದ ಎಸ್ಪಿ ದಂಡದ ಹಣವನ್ನು ಹಿಂತಿರುಗಿ ಕೊಡಿಸಿದ ಪ್ರಸಂಗ ನಡೆದಿದೆ.
ಸಾಮಾನ್ಯವಾಗಿ ಖಾಸಗಿ ವಾಹನದ ಚಾಲಕರು ಸಮವಸ್ತ್ರ ಹಾಕಬೇಕೆಂಬ ನಿಯಮವಿಲ್ಲ. ಬಾಡಿಗೆ ನಡೆಸುವ ಕಾರುಗಳು ಅಂದರೆ, ಯೆಲ್ಲೋ ಬೋರ್ಡ್ ನಂಬರ್ ಪ್ಲೇಟ್ ಇರುವ ವಾಹನಗಳಿಗೆ ಮಾತ್ರ ಚಾಲಕರು ಬಿಳಿ ಸಮವಸ್ತ್ರ ಧರಿಸಬೇಕೆಂಬ ನಿಯಮ ಇದೆ.
ಆದರೆ ಮಾ.23ರಂದು ಬಂಟ್ವಾಳ ಬಳಿಯ ರಾಮಲ್ಕಟ್ಟೆ ಎಂಬಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರು, ಸಮವಸ್ತ್ರ ಧರಿಸದ ಕಾರಣಕ್ಕೆ ಪಾಣೆ ಮಂಗಳೂರು ಮೂಲದ ಕಾರು ಚಾಲಕರೊಬ್ಬರಿಗೆ 500 ರೂ. ದಂಡ ವಿಧಿಸಿದ್ದರು.
ಪೊಲೀಸರು ನೀಡಿದ ದಂಡದ ರಶೀದಿಯನ್ನು ನೋಡಿದ ಕಾರು ಚಾಲಕರ ಪುತ್ರ, ಅದನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಬಿ.ಎಂ.ಲಕ್ಷ್ಮೀಪ್ರಸಾದ್ ಅವರ ಗಮನಕ್ಕೆ ತಂದಿದ್ದಾರೆ. ಈ ವೇಳೆ ಎಸ್ಪಿ ಸಮಸ್ಯೆಯನ್ನು ಸರಿಪಡಿಸುವುದಾಗಿ ಭರವಸೆ ನೀಡಿದ್ದಲ್ಲದೆ, ಪೊಲೀಸರು ಸಂಗ್ರಹಿಸಿದ್ದ ದಂಡದ ಮೊತ್ತವನ್ನು ಪೇದೆಯಲ್ಲಿ ಅದೇ ದಿನ ರಾತ್ರಿ ಹಿಂತಿರುಗಿಸಲು ಸೂಚನೆ ನೀಡಿದ್ದಾರೆ.
ಎಸ್ಪಿ ಸೂಚನೆಯಂತೆ ಪೊಲೀಸ್ ಪೇದೆ ನೇರವಾಗಿ ಖಾಸಗಿ ವಾಹನದಲ್ಲಿ ಪಾಣೆಮಂಗಳೂರಿಗೆ ನಡುರಾತ್ರಿಯಲ್ಲೇ ಬಂದು ಖಾಸಗಿ ಕಾರು ಚಾಲಕನ ಕೈಗೆ 500 ರೂ. ಹಿಂತಿರುಗಿಸಿದ್ದಾರೆ. ಪೊಲೀಸ್ ಅಧೀಕ್ಷಕರು ತುರ್ತಾಗಿ ಸ್ಪಂದಿಸಿದ ಕ್ರಮಕ್ಕೆ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಗಿದೆ.
Bantwal police have charged a fine of Rs 500 from a private car driver for not wearing his uniform. The son of a car driver who saw the receipt of the fine from the police brought it to the notice of the Dakshina Kannada District Superintendent of Police, BM Lakshmiprasad, who then returned the fine amount back to the driver.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
31-10-25 10:57 pm
Mangalore Correspondent
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm