ಬ್ರೇಕಿಂಗ್ ನ್ಯೂಸ್
29-03-21 05:07 pm Mangalore Correspondent ಕರಾವಳಿ
ಮಂಗಳೂರು, ಮಾ.29: ಸಿಡಿ ಪ್ರಕರಣದಲ್ಲಿ ಸಂತ್ರಸ್ತ ಯುವತಿಗೆ ರಕ್ಷಣೆ ಒದಗಿಸಬೇಕು, ಆರೋಪಿ ರಮೇಶ್ ಜಾರಕಿಹೊಳಿಯನ್ನು ಕೂಡಲೇ ಬಂಧಿಸಬೇಕು ಅಲ್ಲದೆ, ಪ್ರಕರಣದ ಬಗ್ಗೆ ಹೈಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣ ಬೆಳಕಿಗೆ ತಿಂಗಳಾದರೂ ಆರೋಪಿ ಸ್ಥಾನದಲ್ಲಿರುವ ರಮೇಶ್ ಜಾರಕಿಹೊಳಿಯನ್ನು ಪೊಲೀಸರು ಬಂಧಿಸಿಲ್ಲ. ಆತ ಹಾದಿ ಬೀದಿಯಲ್ಲಿ ಮಾತನಾಡುವ ಜತೆಗೆ ಸಾರ್ವಜನಿಕವಾಗಿ ಓಡಾಡಿಕೊಂಡಿದ್ದಾರೆ. ಎಸ್ಐಟಿ ಯನ್ನು ತಮ್ಮ ಕೈಗೊಂಬೆ ಮಾಡಿಕೊಂಡು ಸಾಕ್ಷ್ಯ ನಾಶ ಮಾಡುವ ಅನುಮಾನ ಇದೆ ಎಂದು ಆರೋಪಿಸಿದರು.

ಪ್ರಕರಣದ ಆರಂಭದಲ್ಲಿ ಮಹಿಳಾ ಆಯೋಗದ ಅಧ್ಯಕ್ಷರಿಂದಲೂ ಸಂತ್ರಸ್ತೆಗೆ ರಕ್ಷಣೆ ನೀಡುವ ಭರವಸೆ ನೀಡಲಾಗಿತ್ತು. ಆದರೆ, ಅಂತಹ ಯಾವುದೇ ನೆರವು ಯುವತಿಗೆ ದೊರಕಿಲ್ಲ. ಬದಲಿಗೆ ಆಕೆಯನ್ನೇ ಆರೋಪಿಯಾಗಿಸುತ್ತಿದ್ದಾರೆ ಎಂದು ಅವರು ಹೇಳಿದರು.
ಬೆಳಗಾವಿಯ ಲೋಕಸಭೆ ಹಾಗೂ ಮಸ್ಕಿ, ಬಸವಕಲ್ಯಾಣ ಕ್ಷೇತ್ರಗಳ ಉಪ ಚುನಾವಣೆ ಇರುವ ಹಿನ್ನೆಲೆಯಲ್ಲಿ ಪ್ರಸಕ್ತ ವಿದ್ಯಮಾನಗಳ ನಡುವೆ ಬಿಜೆಪಿ ಮತ್ತು ರಾಜ್ಯ ಸರಕಾರದ ನಾಯಕರು ಹತಾಶೆಗೊಂಡಿದ್ದಾರೆ. ಚುನಾವಣೆಯಲ್ಲಿ ಸಿಡಿ ಪ್ರಕರಣದಿಂದ ಹಿನ್ನಡೆಯಾಗುವುದನ್ನು ಮನಗಂಡು ತಮ್ಮ ಬೆಂಬಲಿಗರ ಮೂಲಕ ಕೆಪಿಸಿಸಿ ಅಧ್ಯಕ್ಷರ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಡಿಕೆ ಶಿವಕುಮಾರ್ ಪ್ರಯಾಣಿಸುವ ಕಾರಿನ ಮೇಲೆ ಕಲ್ಲು ತೂರಾಟ, ಪೊಲೀಸ್ ಬೆಂಗಾವಲು ವಾಹನದ ಮೇಲೆ ಚಪ್ಪಲಿ ಎಸೆಯುವ ಪ್ರಕರಣ ನಡೆಸುತ್ತಿದ್ದಾರೆ. ಈ ರೀತಿಯ ಬೆಳವಣಿಗೆಯನ್ನು ಕಾಂಗ್ರೆಸ್ ಖಂಡಿಸುತ್ತದೆ ಎಂದವರು ಹೇಳಿದರು.
ಸದಾಶಿವ ಉಳ್ಳಾಲ್, ಟಿ.ಕೆ. ಸುಧೀರ್, ನೀರಜ್ಪಾಲ್, ಮುರಳೀದರ ರೈ, ಸುರೇಂದ್ರ ಕಾಂಬ್ಳಿ, ಲಾರೆನ್ಸ್ ಡಿಸೋಜಾ, ವಿಶ್ವಾಸ್ ಕುಮಾರ್ ದಾಸ್ ಉಪಸ್ಥಿತರಿದ್ದರು.
Appoint High court judge for clear investigation in sex CD scandal of Ramesh Jarkiholi stated Harish Kumar in Mangalore during the press meet held at congress office.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm