ಬ್ರೇಕಿಂಗ್ ನ್ಯೂಸ್
29-03-21 11:08 pm Mangaluru correspondent ಕರಾವಳಿ
ಮಂಗಳೂರು, ಮಾ.29: ಮಂಗಳೂರು ನಗರದಲ್ಲಿ ದಿಢೀರ್ ಸಿಡಿಲು, ಮಿಂಚಿನ ಅಬ್ಬರದ ಜೊತೆಗೆ ಭಾರೀ ಮಳೆಯಾಗಿದೆ. ದಿಢೀರ್ ಆಗಿ ರಾತ್ರಿ ಒಂಬತ್ತು ಗಂಟೆ ಸುಮಾರಿಗೆ ಮಳೆಯಾಗಿದ್ದು ನಗರ ಭಾಗದಲ್ಲಿ ಹಲವು ಕಡೆ ನಾಶ ನಷ್ಟವಾಗಿದೆ.
ಕೋಡಿಕಲ್ ಭಾಗದ ಬೋಳೂರಿನಲ್ಲಿ ರಸ್ತೆ ಬದಿಯ ವಿದ್ಯುತ್ ಕಂಬ ಉರುಳಿ ಬಿದ್ದಿದ್ದು ನಿಲ್ಲಿಸಿದ್ದ ಕಾರು ಜಖಂ ಆಗಿದೆ. ಭಾರೀ ಗಾಳಿ ಮಳೆಯಾಗಿದ್ದು ಒಮ್ಮೆಲೇ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಇದೇ ವೇಳೆ, ಮುಳಿಹಿತ್ಲು ಬಳಿಯೂ ಕಂಬ ಬಿದ್ದು ವಾಹನ ಜಖಂ ಆಗಿರುವ ಘಟನೆ ನಡೆದಿದೆ.


ಬೊಂಡಂತಿಲ ಗ್ರಾಮದಲ್ಲಿ ಹಟ್ಟಿಯ ಮೇಲೆ ಮರ ಬಿದ್ದು ಹಾನಿಯಾಗಿದೆ. ಮಂಗಳೂರು ನಗರದ ಫಳ್ನೀರಿನ ಇಂದಿರಾ ಆಸ್ಪತ್ರೆಯ ಆವರಣದಲ್ಲಿ ಕಂಪೌಂಡ್ ಗೋಡೆ ಕುಸಿದಿದ್ದು ಪಾರ್ಕಿಂಗ್ ಸಮಸ್ಯೆ ಉಂಟಾಗಿದೆ.
ಲೇಡಿಹಿಲ್ ಬಳಿಯ ಹ್ಯಾಟ್ ಹಿಲ್ ಪ್ರದೇಶದಲ್ಲಿ ಬೃಹತ್ ಮರ ಉರುಳಿ ಬಿದ್ದು ರಸ್ತೆ ಬ್ಲಾಕ್ ಆಗಿದ್ದು ಅರಣ್ಯ ಇಲಾಖೆಯ ಸಿಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮಂಗಳೂರು ನಗರ ಭಾಗದಲ್ಲಿ ಪೂರ್ತಿಯಾಗಿ ವಿದ್ಯುತ್ ಕೈಕೊಟ್ಟಿದ್ದು ಜನರು ಸೊಳ್ಳೆ ಕಾಟದಲ್ಲಿ ನರಳುವಂತಾಗಿದೆ. ಸಿಡಿಲು ಮಳೆ ಒಂದು ಗಂಟೆ ಕಾಲ ಸುರಿದು ಮತ್ತೆ ಶಾಂತವಾಗಿದೆ. ಮಂಗಳೂರು, ಬಂಟ್ವಾಳ ಪರಿಸರದಲ್ಲಿ ಭಾರೀ ಮಳೆಯಾಗಿದೆ.
2021 Heavy rains thunder and lightening causes havoc in Mangalore. It is reported that some cars, homes have been damahed and also compound wall of a Indira hospital collapsed due to heavy rains.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm