ಬ್ರೇಕಿಂಗ್ ನ್ಯೂಸ್
30-03-21 02:52 pm Mangalore Correspondent ಕರಾವಳಿ
ಮಂಗಳೂರು, ಮಾ.30: ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಸಾರ್ವಜನಿಕ ಸಭೆ, ಸಮಾರಂಭಗಳನ್ನು ನಡೆಸದಂತೆ ಸಿಎಂ ಯಡಿಯೂರಪ್ಪ ಸೂಚಿಸಿರುವ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಕಲಂ 144-3 ಪ್ರಕಾರ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಹೊರಡಿಸಿದ್ದಾರೆ. ತಕ್ಷಣದಿಂದಲೇ ಎಲ್ಲ ರೀತಿಯ ಧಾರ್ಮಿಕ ಆಚರಣೆ, ಸಾರ್ವಜನಿಕ ಸಮಾರಂಭಗಳು, ಉತ್ಸವಗಳನ್ನು ನಡೆಸದಂತೆ ಅನಿರ್ದಿಷ್ಟಾವಧಿಗೆ ನಿಷೇಧಿಸಿ ಆದೇಶ ಮಾಡಿದ್ದಾರೆ.

ಜನ ಸೇರುವಂತಹ ಎಲ್ಲ ರೀತಿಯ ಧಾರ್ಮಿಕ ಆಚರಣೆಗಳನ್ನು ನಿಷೇಧಿಸಲಾಗಿದೆ. ಇದೇ ವೇಳೆ, ಧಾರ್ಮಿಕ ಆಚರಣೆಗಳನ್ನು ಸಾಂಕೇತಿಕವಾಗಿ ನಡೆಸಲು ಅನುಮತಿ ನೀಡಲಾಗಿದೆ. ಹೋಳಿ, ಯುಗಾದಿ, ಗುಡ್ ಫ್ರೈಡೇ ಇನ್ನಿತರ ಧಾರ್ಮಿಕ ಹಬ್ಬಗಳ ಸಂದರ್ಭಗಳಲ್ಲೂ ಜನ ಸೇರುವಂತಿಲ್ಲ. ಇದಕ್ಕಾಗಿ ಸಾರ್ವಜನಿಕ ಮೈದಾನ, ಮಾರುಕಟ್ಟೆ ಪ್ರದೇಶಗಳನ್ನು ಬಳಸುವಂತಿಲ್ಲ. ಧಾರ್ಮಿಕ ವಿಧಿಗಳನ್ನು ಕಟ್ಟುಪಾಡಿಗಳಿಗಷ್ಟೇ ಸೀಮಿತವಾಗಿ ನಡೆಸಬೇಕು.

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ ನಿಯಮಗಳನ್ನು ಪಾಲಿಸಬೇಕು. ತಪ್ಪಿದಲ್ಲಿ ಕೋವಿಡ್ ವಿಪತ್ತು ನಿರ್ವಹಣೆ ಕಾನೂನು ಪ್ರಕಾರ ದಂಡನೆ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. 144 ಸೆಕ್ಷನ್ ಅಡಿ ಮೂರನೇ ವಿಧಿಯನ್ನು ಬಳಸಿ ನಿಷೇಧ ಆದೇಶ ಮಾಡಲಾಗಿದ್ದು ಕೆಲವೊಂದು ಪ್ರಕ್ರಿಯೆಗಳಿಗೆ ಅನುಮತಿಸಿದ್ದರೆ, ಒಳಾಂಗಣ ಮತ್ತು ಹೊರಾಂಗಣದ ಜನ ಸೇರುವ ಕಾರ್ಯಕ್ರಮಗಳನ್ನು ನಿಷೇಧಿಸಲು ಈ ಕಾಯ್ದೆಯಡಿ ಅವಕಾಶ ನೀಡಲಾಗಿದೆ.
ಎಪ್ರಿಲ್, ಮೇ ತಿಂಗಳಲ್ಲಿ ಕರಾವಳಿಯಲ್ಲಿ ಅತಿ ಹೆಚ್ಚು ಉತ್ಸವಗಳು ನಡೆಯುತ್ತಿದ್ದು, ಈ ವಿಧಿಯಡಿ ಎಲ್ಲವನ್ನೂ ನಿಷೇಧಿಸಲು ಜಿಲ್ಲಾಧಿಕಾರಿಗೆ ಅವಕಾಶ ಇರಲಿದೆ. ಮುಖ್ಯಮಂತ್ರಿ 15 ದಿನಗಳ ಕಾಲ ಸಭೆ, ಸಮಾರಂಭಗಳನ್ನು ನಿಷೇಧಿಸಿದ್ದರೆ, ಜಿಲ್ಲಾಧಿಕಾರಿ ಮುಂದಿನ ಆದೇಶದ ವರೆಗೂ ಈ ರೀತಿಯ ಕಾಯ್ದೆಯನ್ನು ಹೇರಿದ್ದಾರೆ.
As the second wave of Coronavirus is spreading, deputy commissioner (DC) Dr Rajendra K V has announced the imposition of a ban on religious gatherings and celebrations in public places in Dakshina Kannada (DK) district.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 09:15 pm
Mangalore Correspondent
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am