ಬ್ರೇಕಿಂಗ್ ನ್ಯೂಸ್
30-03-21 11:02 pm Mangaluru correspondent ಕರಾವಳಿ
ಮಂಗಳೂರು, ಮಾ.30: ಮಂಗಳೂರು ಮೂಲದ ದಂಪತಿಯನ್ನು ಅವರ ಮಗನೇ ಚೂರಿಯಿಂದ ಇರಿದು ಭೀಕರವಾಗಿ ಕೊಲೆಗೈದ ಘಟನೆ ನ್ಯೂಜಿಲಂಡ್ ದೇಶದ ಆಕ್ಲೆಂಡ್ ನಗರದಲ್ಲಿ ನಡೆದಿದೆ.
ಮೂಲತಃ ಮಂಗಳೂರಿನ ಬಲ್ಮಠ ನಿವಾಸಿಗಳಾಗಿದ್ದ ಕ್ರಿಸ್ತಿಯನ್ ದಂಪತಿ ಎಲ್ಸಿ ಬಂಗೇರ ಮತ್ತು ಆಕೆಯ ಪತಿ ಹರ್ಮನ್ ಬಂಗೇರ ಕೊಲೆಯಾದವರು. 23 ವರ್ಷದ ಇಂಜಿನಿಯರಿಂಗ್ ಓದುತ್ತಿದ್ದ ಪುತ್ರ ಶೀಲ್ ಎಂಬಾತ ತನ್ನ ಮನೆಯಲ್ಲೇ ಕೊಲೆ ಮಾಡಿದ್ದಾನೆ. ಐದು ದಿನಗಳ ಹಿಂದೆ ಘಟನೆ ನಡೆದಿದ್ದು ಹೆತ್ತವರಿಗೆ ಚೂರಿಯಿಂದ ಇರಿದ ಬಳಿಕ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದ. ಬಳಿಕ ಸ್ಥಳೀಯರು ಗಮನಿಸಿ, ಆತನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಎಲ್ಸಿ ಮತ್ತು ಹರ್ಮನ್ ಮಂಗಳೂರಿನವರು. ಎಲ್ಸಿಯ ತಂದೆ ಎಡ್ವರ್ಡ್ ಅಮ್ಮನ್ನ ಬಲ್ಮಠದ ಶಾಂತಿ ಕೆಥಡ್ರಲ್ ನಲ್ಲಿ ಸಂಡೇ ಸ್ಕೂಲ್ ನಲ್ಲಿ ಶಿಕ್ಷಕರಾಗಿದ್ದರು. ಮರ್ಕೆರಾ ಹಿಲ್ ಚರ್ಚ್ ನಲ್ಲಿ ಹಿರಿಯರಾಗಿ ಗೌರವ ಹೊಂದಿದ್ದರು.
ಹರ್ಮನ್ ಮುಂಬೈನಲ್ಲಿ ಶಾಲೆ ಒಂದರಲ್ಲಿ ಆಡಳಿತಾಧಿಕಾರಿ ಆಗಿದ್ದರು. ಮುಂಬೈನಲ್ಲಿ ಗೋದ್ರೆಜ್ ಕಂಪನಿಯಲ್ಲಿ ಉದ್ಯೋಗ ಹೊದಿದ್ದ ಎಲ್ಸೀ ಬಳಿಕ ಮದುವೆಯಾಗಿದ್ದರು. ಆನಂತರ ದಂಪತಿ ಗೋವಾದಲ್ಲಿ ನೆಲೆಸಿದ್ದರು. ಮಗನ ಉನ್ನತ ಮತ್ತು ಉತ್ತಮ ವಿದ್ಯಾಭ್ಯಾಸಕ್ಕಾಗಿ ದಂಪತಿ 2007ರಲ್ಲಿ ನ್ಯೂಜಿಲ್ಯಾಂಡ್ ತೆರಳಿದ್ದರು. 2014ರಲ್ಲಿ ಮಗ ಪದವಿ ಪಡೆದಾಗ ತೆಗೆಸ್ಕೊಂಡಿದ್ದ ಚಿತ್ರವನ್ನು ತಂದೆ ಹರ್ಮನ್ ಇತ್ತೀಚೆಗಷ್ಟೇ ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದರು.
ಆದರೆ, ಮಗ ಇತ್ತೀಚಿನ ದಿನಗಳಲ್ಲಿ ಹೆತ್ತವರಿಂದ ದೂರವಿರಲು ಬಯಸಿದ್ದ. ಜೊತೆಗೆ ತನ್ನಿಚ್ಚೆಗೆ ಸರಿಕಂಡಂತೆ ವರ್ತಿಸುತ್ತಿದ್ದ. ಇದೇ ಕಾರಣಕ್ಕೆ ಹೆತ್ತವರ ಜೊತೆ ಜಗಳ ಆಗ್ತಿತ್ತು ಎನ್ನಲಾಗಿದೆ. ಇದೇ ವಿಚಾರದಲ್ಲಿ ಕಳೆದ ಶುಕ್ರವಾರ ಜಗಳ ನಡೆದಿದ್ದು ಕ್ರುದ್ಧಗೊಂಡ ಶೀಲ್ ಹೆತ್ತವರ ಮೇಲೆ ಚೂರಿಯಿಂದ ಇರಿದಿದ್ದ. ಹೆತ್ತವರು ಸತ್ತರೆಂದು ಗೊತ್ತಾಗಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈಗ ಆಕ್ಲೆಂಡ್ ಆಸ್ಪತ್ರೆಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
In a shocking incident Mangalorean Couple has been Murdered by their own son in Auckland, New Zealand. The deceased have been identified as Elisabeth Bangera and Herman Bangera who were residing in Balmatta, Mangalore
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm