ಬ್ರೇಕಿಂಗ್ ನ್ಯೂಸ್
31-03-21 03:18 pm Mangalore Correspondent ಕರಾವಳಿ
ಉಳ್ಳಾಲ, ಮಾ.31: ಬೇಸಗೆಯಲ್ಲಿ ಎಲ್ಲಿ ನೋಡಿದರೂ ನೀರಿನದ್ದೇ ಸಮಸ್ಯೆ. ಪಂಚಾಯತ್, ನಗರಸಭೆಗಳ ಅಧಿಕಾರಿಗಳಿಗೆ ಜನಸಾಮಾನ್ಯರಿಗೆ ಕುಡಿಯುವ ನೀರು ಪೂರೈಸುವುದೇ ತಲೆನೋವಿನ ಸಂಗತಿ. ಇದನ್ನರಿತ ಉಳ್ಳಾಲದ ನಗರಸಭಾ ಸದಸ್ಯ ಮುಶ್ತಾಕ್ ಪಟ್ಲ ಎಂಬವರು ತನ್ನ ವಾರ್ಡಿನಲ್ಲಿ ನೀರಿನ ಸಮಸ್ಯೆ ನಿವಾರಣೆಗೆ ಪಣ ತೊಟ್ಟಿದ್ದಾರೆ.
ತನ್ನ ವಾರ್ಡ್ ವ್ಯಾಪ್ತಿಯಲ್ಲಿ ಕನಿಷ್ಠ 25 ಮನೆಗಳಲ್ಲಿ ಮಳೆ ನೀರು ಇಂಗು ಗುಂಡಿಗಳನ್ನು ನಿರ್ಮಿಸಲು ಉಳ್ಳಾಲ ನಗರಸಭಾ ಸದಸ್ಯ ಮುಶ್ತಾಕ್ ಪಟ್ಲ ಮುಂದಾಗಿದ್ದು, ಇಂಗು ಗುಂಡಿಗಳ ನಿರ್ಮಾಣಕ್ಕೆ ಚಾಲನೆಯನ್ನೂ ನೀಡಿದ್ದು ಈ ಕಾರ್ಯಕ್ಕೆ ನಗರಸಭೆ ಆಯುಕ್ತರೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಂತರ್ಜಲ ಮಟ್ಟ ಹೆಚ್ಚಿಸುವ ಕೆಲವು ಯೋಜನೆಗಳಲ್ಲಿ ಮಳೆ ನೀರು ಇಂಗು ಗುಂಡಿಗಳ ನಿರ್ಮಾಣ ಅತ್ಯಂತ ಸರಳ ಮತ್ತು ಮಿತ ವೆಚ್ಚದ್ದು. ಈ ನಿಟ್ಟಿನಲ್ಲಿ ಉಳ್ಳಾಲ ನಗರಸಭೆಯ ಕಲ್ಲಾಪು - ಪಟ್ಲ ವಾರ್ಡಿನ ಸದಸ್ಯರಾದ ಮುಶ್ತಾಕ್ ಪಟ್ಲ ಅವರು ತಾನು ಪ್ರತಿನಿಧಿಸುತ್ತಿರುವ ಕ್ಷೇತ್ರ ವ್ಯಾಪ್ತಿಯಲ್ಲಿ ಬೇಸಿಗೆ ಅವಧಿಯಲ್ಲಿ ಸುಮಾರು 25 ಮನೆಗಳಲ್ಲಿ ಮಳೆ ನೀರಿನ ಇಂಗು ಗುಂಡಿಗಳ ನಿರ್ಮಾಣದ ಗುರಿ ಇಟ್ಟು ಕೊಂಡಿದ್ದಾರೆ. ಇದಕ್ಕೆ ಪೂರಕವಾಗಿ ಬಬ್ಬುಕಟ್ಟೆ ನಿವಾಸಿ ಮೆಹಪೂಝ್ ಅವರ ನಿವಾಸದಲ್ಲಿ ಮೊದಲ ಇಂಗುಗುಂಡಿ ನಿರ್ಮಾಣ ಆಗಿದೆ.

ಮೆಹಪೂಝ್ ಅವರ ಮನೆಯಲ್ಲಿ ನಿರ್ಮಿಸಲಾದ ಮಳೆ ನೀರು ಇಂಗು ಗುಂಡಿಯನ್ನು ನಗರಸಭೆ ಆಯುಕ್ತರಾದ ರಾಯಪ್ಪ ಅವರೇ ಬಂದು ಪರಿಶೀಲಿಸಿದ್ದು ಭವಿಷ್ಯದ ಉತ್ತಮ ಯೋಜನೆಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅಂತರ್ಜಲದ ಮಟ್ಟವನ್ನ ವೃದ್ದಿಸುವ ನಿಟ್ಟಿನಲ್ಲಿ ಮಳೆ ನೀರಿನ ಇಂಗು ಗುಂಡಿಗಳ ಮೂಲಕ ತೆರೆದ ಬಾವಿ, ಕೊಳವೆ ಬಾವಿಗಳಿಗೆ ನೀರನ್ನು ಪುನರ್ ಭರ್ತಿ ಮಾಡಲು ಸಾರ್ವಜನಿಕರು ಪ್ರಯತ್ನ ನಡೆಸಿದರೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲು ಸಾಧ್ಯವಿಲ್ಲ ಎಂದಿದ್ದಾರೆ.

ಅನೇಕ ಮನೆಗಳಲ್ಲಿ ಸಾಕಷ್ಟು ಸ್ಥಳಾವಕಾಶ ಇದ್ದರೂ ಮಳೆ ನೀರನ್ನು ಸುಮ್ಮನೆ ವ್ಯರ್ಥವಾಗಿ ಹರಿಯ ಬಿಡಲಾಗುತ್ತದೆ. ವಾರ್ಡ್ ನಿವಾಸಿಗಳಲ್ಲಿ ಮಳೆ ನೀರು ಇಂಗಿಸುವಿಕೆಯ ಮಹತ್ವ , ಪ್ರಯೋಜನಗಳನ್ನು ತಿಳಿಯ ಪಡಿಸಿದ್ದು ಕನಿಷ್ಠ 25 ಮನೆಗಳಲ್ಲಿ ಮಳೆ ನೀರು ಇಂಗು ಗುಂಡಿಗಳನ್ನು ಈ ಬಾರಿ ನಿರ್ಮಿಸುವುದಾಗಿ ನಗರ ಸದಸ್ಯ ಮುಶ್ತಾಕ್ ಪಟ್ಲ ಹೇಳಿದ್ದಾರೆ.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 10:45 am
HK News Staffer
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm