ಬ್ರೇಕಿಂಗ್ ನ್ಯೂಸ್
31-03-21 03:18 pm Mangalore Correspondent ಕರಾವಳಿ
ಉಳ್ಳಾಲ, ಮಾ.31: ಬೇಸಗೆಯಲ್ಲಿ ಎಲ್ಲಿ ನೋಡಿದರೂ ನೀರಿನದ್ದೇ ಸಮಸ್ಯೆ. ಪಂಚಾಯತ್, ನಗರಸಭೆಗಳ ಅಧಿಕಾರಿಗಳಿಗೆ ಜನಸಾಮಾನ್ಯರಿಗೆ ಕುಡಿಯುವ ನೀರು ಪೂರೈಸುವುದೇ ತಲೆನೋವಿನ ಸಂಗತಿ. ಇದನ್ನರಿತ ಉಳ್ಳಾಲದ ನಗರಸಭಾ ಸದಸ್ಯ ಮುಶ್ತಾಕ್ ಪಟ್ಲ ಎಂಬವರು ತನ್ನ ವಾರ್ಡಿನಲ್ಲಿ ನೀರಿನ ಸಮಸ್ಯೆ ನಿವಾರಣೆಗೆ ಪಣ ತೊಟ್ಟಿದ್ದಾರೆ.
ತನ್ನ ವಾರ್ಡ್ ವ್ಯಾಪ್ತಿಯಲ್ಲಿ ಕನಿಷ್ಠ 25 ಮನೆಗಳಲ್ಲಿ ಮಳೆ ನೀರು ಇಂಗು ಗುಂಡಿಗಳನ್ನು ನಿರ್ಮಿಸಲು ಉಳ್ಳಾಲ ನಗರಸಭಾ ಸದಸ್ಯ ಮುಶ್ತಾಕ್ ಪಟ್ಲ ಮುಂದಾಗಿದ್ದು, ಇಂಗು ಗುಂಡಿಗಳ ನಿರ್ಮಾಣಕ್ಕೆ ಚಾಲನೆಯನ್ನೂ ನೀಡಿದ್ದು ಈ ಕಾರ್ಯಕ್ಕೆ ನಗರಸಭೆ ಆಯುಕ್ತರೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಂತರ್ಜಲ ಮಟ್ಟ ಹೆಚ್ಚಿಸುವ ಕೆಲವು ಯೋಜನೆಗಳಲ್ಲಿ ಮಳೆ ನೀರು ಇಂಗು ಗುಂಡಿಗಳ ನಿರ್ಮಾಣ ಅತ್ಯಂತ ಸರಳ ಮತ್ತು ಮಿತ ವೆಚ್ಚದ್ದು. ಈ ನಿಟ್ಟಿನಲ್ಲಿ ಉಳ್ಳಾಲ ನಗರಸಭೆಯ ಕಲ್ಲಾಪು - ಪಟ್ಲ ವಾರ್ಡಿನ ಸದಸ್ಯರಾದ ಮುಶ್ತಾಕ್ ಪಟ್ಲ ಅವರು ತಾನು ಪ್ರತಿನಿಧಿಸುತ್ತಿರುವ ಕ್ಷೇತ್ರ ವ್ಯಾಪ್ತಿಯಲ್ಲಿ ಬೇಸಿಗೆ ಅವಧಿಯಲ್ಲಿ ಸುಮಾರು 25 ಮನೆಗಳಲ್ಲಿ ಮಳೆ ನೀರಿನ ಇಂಗು ಗುಂಡಿಗಳ ನಿರ್ಮಾಣದ ಗುರಿ ಇಟ್ಟು ಕೊಂಡಿದ್ದಾರೆ. ಇದಕ್ಕೆ ಪೂರಕವಾಗಿ ಬಬ್ಬುಕಟ್ಟೆ ನಿವಾಸಿ ಮೆಹಪೂಝ್ ಅವರ ನಿವಾಸದಲ್ಲಿ ಮೊದಲ ಇಂಗುಗುಂಡಿ ನಿರ್ಮಾಣ ಆಗಿದೆ.

ಮೆಹಪೂಝ್ ಅವರ ಮನೆಯಲ್ಲಿ ನಿರ್ಮಿಸಲಾದ ಮಳೆ ನೀರು ಇಂಗು ಗುಂಡಿಯನ್ನು ನಗರಸಭೆ ಆಯುಕ್ತರಾದ ರಾಯಪ್ಪ ಅವರೇ ಬಂದು ಪರಿಶೀಲಿಸಿದ್ದು ಭವಿಷ್ಯದ ಉತ್ತಮ ಯೋಜನೆಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅಂತರ್ಜಲದ ಮಟ್ಟವನ್ನ ವೃದ್ದಿಸುವ ನಿಟ್ಟಿನಲ್ಲಿ ಮಳೆ ನೀರಿನ ಇಂಗು ಗುಂಡಿಗಳ ಮೂಲಕ ತೆರೆದ ಬಾವಿ, ಕೊಳವೆ ಬಾವಿಗಳಿಗೆ ನೀರನ್ನು ಪುನರ್ ಭರ್ತಿ ಮಾಡಲು ಸಾರ್ವಜನಿಕರು ಪ್ರಯತ್ನ ನಡೆಸಿದರೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲು ಸಾಧ್ಯವಿಲ್ಲ ಎಂದಿದ್ದಾರೆ.

ಅನೇಕ ಮನೆಗಳಲ್ಲಿ ಸಾಕಷ್ಟು ಸ್ಥಳಾವಕಾಶ ಇದ್ದರೂ ಮಳೆ ನೀರನ್ನು ಸುಮ್ಮನೆ ವ್ಯರ್ಥವಾಗಿ ಹರಿಯ ಬಿಡಲಾಗುತ್ತದೆ. ವಾರ್ಡ್ ನಿವಾಸಿಗಳಲ್ಲಿ ಮಳೆ ನೀರು ಇಂಗಿಸುವಿಕೆಯ ಮಹತ್ವ , ಪ್ರಯೋಜನಗಳನ್ನು ತಿಳಿಯ ಪಡಿಸಿದ್ದು ಕನಿಷ್ಠ 25 ಮನೆಗಳಲ್ಲಿ ಮಳೆ ನೀರು ಇಂಗು ಗುಂಡಿಗಳನ್ನು ಈ ಬಾರಿ ನಿರ್ಮಿಸುವುದಾಗಿ ನಗರ ಸದಸ್ಯ ಮುಶ್ತಾಕ್ ಪಟ್ಲ ಹೇಳಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm