ಬ್ರೇಕಿಂಗ್ ನ್ಯೂಸ್
31-03-21 03:18 pm Mangalore Correspondent ಕರಾವಳಿ
ಉಳ್ಳಾಲ, ಮಾ.31: ಬೇಸಗೆಯಲ್ಲಿ ಎಲ್ಲಿ ನೋಡಿದರೂ ನೀರಿನದ್ದೇ ಸಮಸ್ಯೆ. ಪಂಚಾಯತ್, ನಗರಸಭೆಗಳ ಅಧಿಕಾರಿಗಳಿಗೆ ಜನಸಾಮಾನ್ಯರಿಗೆ ಕುಡಿಯುವ ನೀರು ಪೂರೈಸುವುದೇ ತಲೆನೋವಿನ ಸಂಗತಿ. ಇದನ್ನರಿತ ಉಳ್ಳಾಲದ ನಗರಸಭಾ ಸದಸ್ಯ ಮುಶ್ತಾಕ್ ಪಟ್ಲ ಎಂಬವರು ತನ್ನ ವಾರ್ಡಿನಲ್ಲಿ ನೀರಿನ ಸಮಸ್ಯೆ ನಿವಾರಣೆಗೆ ಪಣ ತೊಟ್ಟಿದ್ದಾರೆ.
ತನ್ನ ವಾರ್ಡ್ ವ್ಯಾಪ್ತಿಯಲ್ಲಿ ಕನಿಷ್ಠ 25 ಮನೆಗಳಲ್ಲಿ ಮಳೆ ನೀರು ಇಂಗು ಗುಂಡಿಗಳನ್ನು ನಿರ್ಮಿಸಲು ಉಳ್ಳಾಲ ನಗರಸಭಾ ಸದಸ್ಯ ಮುಶ್ತಾಕ್ ಪಟ್ಲ ಮುಂದಾಗಿದ್ದು, ಇಂಗು ಗುಂಡಿಗಳ ನಿರ್ಮಾಣಕ್ಕೆ ಚಾಲನೆಯನ್ನೂ ನೀಡಿದ್ದು ಈ ಕಾರ್ಯಕ್ಕೆ ನಗರಸಭೆ ಆಯುಕ್ತರೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಂತರ್ಜಲ ಮಟ್ಟ ಹೆಚ್ಚಿಸುವ ಕೆಲವು ಯೋಜನೆಗಳಲ್ಲಿ ಮಳೆ ನೀರು ಇಂಗು ಗುಂಡಿಗಳ ನಿರ್ಮಾಣ ಅತ್ಯಂತ ಸರಳ ಮತ್ತು ಮಿತ ವೆಚ್ಚದ್ದು. ಈ ನಿಟ್ಟಿನಲ್ಲಿ ಉಳ್ಳಾಲ ನಗರಸಭೆಯ ಕಲ್ಲಾಪು - ಪಟ್ಲ ವಾರ್ಡಿನ ಸದಸ್ಯರಾದ ಮುಶ್ತಾಕ್ ಪಟ್ಲ ಅವರು ತಾನು ಪ್ರತಿನಿಧಿಸುತ್ತಿರುವ ಕ್ಷೇತ್ರ ವ್ಯಾಪ್ತಿಯಲ್ಲಿ ಬೇಸಿಗೆ ಅವಧಿಯಲ್ಲಿ ಸುಮಾರು 25 ಮನೆಗಳಲ್ಲಿ ಮಳೆ ನೀರಿನ ಇಂಗು ಗುಂಡಿಗಳ ನಿರ್ಮಾಣದ ಗುರಿ ಇಟ್ಟು ಕೊಂಡಿದ್ದಾರೆ. ಇದಕ್ಕೆ ಪೂರಕವಾಗಿ ಬಬ್ಬುಕಟ್ಟೆ ನಿವಾಸಿ ಮೆಹಪೂಝ್ ಅವರ ನಿವಾಸದಲ್ಲಿ ಮೊದಲ ಇಂಗುಗುಂಡಿ ನಿರ್ಮಾಣ ಆಗಿದೆ.

ಮೆಹಪೂಝ್ ಅವರ ಮನೆಯಲ್ಲಿ ನಿರ್ಮಿಸಲಾದ ಮಳೆ ನೀರು ಇಂಗು ಗುಂಡಿಯನ್ನು ನಗರಸಭೆ ಆಯುಕ್ತರಾದ ರಾಯಪ್ಪ ಅವರೇ ಬಂದು ಪರಿಶೀಲಿಸಿದ್ದು ಭವಿಷ್ಯದ ಉತ್ತಮ ಯೋಜನೆಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅಂತರ್ಜಲದ ಮಟ್ಟವನ್ನ ವೃದ್ದಿಸುವ ನಿಟ್ಟಿನಲ್ಲಿ ಮಳೆ ನೀರಿನ ಇಂಗು ಗುಂಡಿಗಳ ಮೂಲಕ ತೆರೆದ ಬಾವಿ, ಕೊಳವೆ ಬಾವಿಗಳಿಗೆ ನೀರನ್ನು ಪುನರ್ ಭರ್ತಿ ಮಾಡಲು ಸಾರ್ವಜನಿಕರು ಪ್ರಯತ್ನ ನಡೆಸಿದರೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲು ಸಾಧ್ಯವಿಲ್ಲ ಎಂದಿದ್ದಾರೆ.

ಅನೇಕ ಮನೆಗಳಲ್ಲಿ ಸಾಕಷ್ಟು ಸ್ಥಳಾವಕಾಶ ಇದ್ದರೂ ಮಳೆ ನೀರನ್ನು ಸುಮ್ಮನೆ ವ್ಯರ್ಥವಾಗಿ ಹರಿಯ ಬಿಡಲಾಗುತ್ತದೆ. ವಾರ್ಡ್ ನಿವಾಸಿಗಳಲ್ಲಿ ಮಳೆ ನೀರು ಇಂಗಿಸುವಿಕೆಯ ಮಹತ್ವ , ಪ್ರಯೋಜನಗಳನ್ನು ತಿಳಿಯ ಪಡಿಸಿದ್ದು ಕನಿಷ್ಠ 25 ಮನೆಗಳಲ್ಲಿ ಮಳೆ ನೀರು ಇಂಗು ಗುಂಡಿಗಳನ್ನು ಈ ಬಾರಿ ನಿರ್ಮಿಸುವುದಾಗಿ ನಗರ ಸದಸ್ಯ ಮುಶ್ತಾಕ್ ಪಟ್ಲ ಹೇಳಿದ್ದಾರೆ.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm