ಬ್ರೇಕಿಂಗ್ ನ್ಯೂಸ್
31-03-21 08:23 pm Mangaluru correspondent ಕರಾವಳಿ
ಮಂಗಳೂರು, ಮಾ.31 : ಸ್ಕೂಟರಿಗೆ ಲಾರಿ ಡಿಕ್ಕಿಯಾಗಿ ಪರಾರಿಯಾದ ಘಟನೆ ಕೇರಳ ಗಡಿಭಾಗ ಮಂಜೇಶ್ವರದ ಹೆದ್ದಾರಿಯಲ್ಲಿ ನಡೆದಿದ್ದು, ಸ್ಕೂಟರ್ ಸವಾರ ನಿವೃತ್ತ ಯೋಧ, ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರದ ನಿವಾಸಿ ಸ್ಥಳದಲ್ಲೇ ದುರಂತ ಸಾವನ್ನಪ್ಪಿದ್ದಾರೆ.
ಮೂಲತಃ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪ ನಿವಾಸಿ, ನಿವೃತ್ತ ಅರಣ್ಯ ರಕ್ಷಕ ದಾಮೋಧರ ಮತ್ತು ಲೀಲಾವತಿ ದಂಪತಿ ಪುತ್ರ ದಿನೇಶ್ ಉಪ್ಪಾರ್ (41) ಮೃತರು.
ಸೇನೆಯಲ್ಲಿ 18 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ದಿನೇಶ್ ಉಪ್ಪಾರ್ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಉದ್ಯಾವರ ಗುತ್ತು ಎಂಬಲ್ಲಿ ಜಾಗ ಖರೀದಿಸಿ ಅಲ್ಲೇ ನೆಲೆಸಿದ್ದರು. ಕುಂಬ್ಲೆಯ ಆರಿಕ್ಕಾಡಿಯ ಸುಜಾತಾ ಅವರನ್ನು ವರಿಸಿದ್ದ ದಿನೇಶ್ ದಂಪತಿಗೆ ವೈಷ್ಣವಿ ಮತ್ತು ವೈಶುಭಿ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ಸೇನೆಯಲ್ಲಿ ಹೈದರಾಬಾದ್, ಅಸ್ಸಾಂ, ಜಮ್ಮು, ನಾಸಿಕ್, ಕೊಯಂಬತ್ತೂರು ಮೊದಲಾದೆಡೆ 18 ವರ್ಷ ಕಾಲ ಸೇವೆ ಸಲ್ಲಿಸಿದ್ದ ದಿನೇಶ್ ನಿವೃತ್ತಿಯ ಬಳಿಕ ಮಂಗಳೂರಿನ ಗ್ಯಾಸ್ ಸರಬರಾಜು ಕಂಪೆನಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಬುಧವಾರ ಬೆಳಗ್ಗೆ ಎಂದಿನಂತೆ ಸ್ಕೂಟರಿನಲ್ಲಿ ಕರ್ತವ್ಯಕ್ಕೆ ತೆರಳಲು ಮನೆಬಿಟ್ಟು 10 ನಿಮಿಷ ಅಂತರದಲ್ಲಿ ಹಿಂದಿನಿಂದ ಬಂದಿದ್ದ ಲಾರಿ ಡಿಕ್ಕಿ ಹೊಡೆದಿತ್ತು. ಅಪಘಾತದ ಬಳಿಕ ಲಾರಿ ನಿಲ್ಲಿಸದೇ ಪರಾರಿಯಾಗಿದ್ದು ಪೊಲೀಸರು ತಲಪಾಡಿ ಟೋಲ್ಗೇಟ್ನಲ್ಲಿ ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧಿಸಿ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರು ತಂದೆ, ತಾಯಿ, ಪತ್ನಿ ಮಕ್ಕಳಲ್ಲದೆ ಓರ್ವ ಅಣ್ಣ ರಾಜೇಶ್ ಉಪ್ಪಾರ್, ಓರ್ವ ಸಹೋದರ ಗಣೇಶ್ ಉಪ್ಪಾರ್ ಹಾಗೂ ಬಂಧುಗಳನ್ನು ಅಗಲಿದ್ದಾರೆ.
In a tragic incident a resident of Belthangady died after he met with a accident in Manjeshwar. The deceased has been identified as Dinesh (41).
23-10-24 12:41 pm
Bangalore Correspondent
Bangalore Rain, School holiday: ಬೆಂಗಳೂರಿನಲ್ಲಿ...
22-10-24 11:13 pm
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
Kengari body found, Bangalore: ಬಿಂದಿಗೆ ಎತ್ತಿಕ...
22-10-24 08:27 pm
ಬೆಂಗಳೂರಿನಲ್ಲಿ 6 ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡ ಮ...
22-10-24 07:19 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
22-10-24 10:26 pm
Mangalore Correspondent
'ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ' ; ಅ.25ರ...
22-10-24 09:44 pm
Mangalore college, News: ಸರಕಾರಿ ಪ್ರಥಮ ದರ್ಜೆ ಕ...
22-10-24 07:28 pm
Mangalore, Ullal, railway track stone: ರೈಲು ಹ...
22-10-24 05:29 pm
Kalladka road, Mangalore News: ಮಳೆ- ಬಿಸಿಲಿಗೆ...
21-10-24 09:49 pm
22-10-24 02:49 pm
HK News Desk
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm
ಸಿಸಿಬಿ ಪೊಲೀಸರ ಭರ್ಜರಿ ಬೇಟೆ ; ಪೋಸ್ಟ್ ಆಫೀಸ್ನಲ್ಲ...
18-10-24 03:11 pm