ಬ್ರೇಕಿಂಗ್ ನ್ಯೂಸ್
31-03-21 08:23 pm Mangaluru correspondent ಕರಾವಳಿ
ಮಂಗಳೂರು, ಮಾ.31 : ಸ್ಕೂಟರಿಗೆ ಲಾರಿ ಡಿಕ್ಕಿಯಾಗಿ ಪರಾರಿಯಾದ ಘಟನೆ ಕೇರಳ ಗಡಿಭಾಗ ಮಂಜೇಶ್ವರದ ಹೆದ್ದಾರಿಯಲ್ಲಿ ನಡೆದಿದ್ದು, ಸ್ಕೂಟರ್ ಸವಾರ ನಿವೃತ್ತ ಯೋಧ, ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರದ ನಿವಾಸಿ ಸ್ಥಳದಲ್ಲೇ ದುರಂತ ಸಾವನ್ನಪ್ಪಿದ್ದಾರೆ.
ಮೂಲತಃ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪ ನಿವಾಸಿ, ನಿವೃತ್ತ ಅರಣ್ಯ ರಕ್ಷಕ ದಾಮೋಧರ ಮತ್ತು ಲೀಲಾವತಿ ದಂಪತಿ ಪುತ್ರ ದಿನೇಶ್ ಉಪ್ಪಾರ್ (41) ಮೃತರು.
ಸೇನೆಯಲ್ಲಿ 18 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ದಿನೇಶ್ ಉಪ್ಪಾರ್ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಉದ್ಯಾವರ ಗುತ್ತು ಎಂಬಲ್ಲಿ ಜಾಗ ಖರೀದಿಸಿ ಅಲ್ಲೇ ನೆಲೆಸಿದ್ದರು. ಕುಂಬ್ಲೆಯ ಆರಿಕ್ಕಾಡಿಯ ಸುಜಾತಾ ಅವರನ್ನು ವರಿಸಿದ್ದ ದಿನೇಶ್ ದಂಪತಿಗೆ ವೈಷ್ಣವಿ ಮತ್ತು ವೈಶುಭಿ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ಸೇನೆಯಲ್ಲಿ ಹೈದರಾಬಾದ್, ಅಸ್ಸಾಂ, ಜಮ್ಮು, ನಾಸಿಕ್, ಕೊಯಂಬತ್ತೂರು ಮೊದಲಾದೆಡೆ 18 ವರ್ಷ ಕಾಲ ಸೇವೆ ಸಲ್ಲಿಸಿದ್ದ ದಿನೇಶ್ ನಿವೃತ್ತಿಯ ಬಳಿಕ ಮಂಗಳೂರಿನ ಗ್ಯಾಸ್ ಸರಬರಾಜು ಕಂಪೆನಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಬುಧವಾರ ಬೆಳಗ್ಗೆ ಎಂದಿನಂತೆ ಸ್ಕೂಟರಿನಲ್ಲಿ ಕರ್ತವ್ಯಕ್ಕೆ ತೆರಳಲು ಮನೆಬಿಟ್ಟು 10 ನಿಮಿಷ ಅಂತರದಲ್ಲಿ ಹಿಂದಿನಿಂದ ಬಂದಿದ್ದ ಲಾರಿ ಡಿಕ್ಕಿ ಹೊಡೆದಿತ್ತು. ಅಪಘಾತದ ಬಳಿಕ ಲಾರಿ ನಿಲ್ಲಿಸದೇ ಪರಾರಿಯಾಗಿದ್ದು ಪೊಲೀಸರು ತಲಪಾಡಿ ಟೋಲ್ಗೇಟ್ನಲ್ಲಿ ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧಿಸಿ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರು ತಂದೆ, ತಾಯಿ, ಪತ್ನಿ ಮಕ್ಕಳಲ್ಲದೆ ಓರ್ವ ಅಣ್ಣ ರಾಜೇಶ್ ಉಪ್ಪಾರ್, ಓರ್ವ ಸಹೋದರ ಗಣೇಶ್ ಉಪ್ಪಾರ್ ಹಾಗೂ ಬಂಧುಗಳನ್ನು ಅಗಲಿದ್ದಾರೆ.
In a tragic incident a resident of Belthangady died after he met with a accident in Manjeshwar. The deceased has been identified as Dinesh (41).
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 04:36 pm
HK News Staffer
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm