ಬ್ರೇಕಿಂಗ್ ನ್ಯೂಸ್
01-04-21 07:53 pm Mangaluru correspondent ಕರಾವಳಿ
ಮಂಗಳೂರು, ಎ.1: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಕ್ಷ ಎಸ್ಪಿ ಎಂದು ಹೆಸರು ಮಾಡಿದ್ದ ಬಿ.ಎಂ. ಲಕ್ಷ್ಮೀಪ್ರಸಾದ್ ಅವರನ್ನು ಶಿವಮೊಗ್ಗ ಎಸ್ಪಿ ಆಗಿ ವರ್ಗಾವಣೆ ಮಾಡಲಾಗಿದೆ. ಇದೇ ವೇಳೆ, ದಕ್ಷಿಣ ಕನ್ನಡ ಜಿಲ್ಲೆಗೆ ನೂತನ ಎಸ್ಪಿ ಆಗಿ ಸೋನವಾನೆ ರಿಷಿಕೇಶ್ ಭಗವಾನ್ ಅವರನ್ನು ನೇಮಕ ಮಾಡಲಾಗಿದೆ.
ಎರಡು ವರ್ಷಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯದಲ್ಲಿದ್ದ ಲಕ್ಷ್ಮೀಪ್ರಸಾದ್, ಹಲವು ಪ್ರಕರಣಗಳಲ್ಲಿ ಯಾವುದೇ ಪ್ರಭಾವಕ್ಕೆ ಒಳಗಾಗದೇ ಕೆಲಸ ಮಾಡಿ ಭೇಷ್ ಎನಿಸಿದ್ದಾರೆ. ಉಜಿರೆಯ ಬಾಲಕನ ಅಪಹರಣ ಪ್ರಕರಣದಲ್ಲಿ ತುರ್ತು ಕಾರ್ಯಾಚರಣೆ ನಡೆಸಿ, ಎರಡೇ ದಿನದಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ್ದರು. ಹಾಸನ, ಮಡಿಕೇರಿ ಮೂಲಕ ಕೋಲಾರಕ್ಕೆ ತೆರಳಿ ಅಡಗಿದ್ದ ಆರೋಪಿಗಳು ಅಲ್ಲಿ ತಲುಪಿದ ಕ್ಷಣವೇ ಮಂಗಳೂರಿನ ಪೊಲೀಸರ ತಂಡವೂ ಅಲ್ಲಿಗೆ ತಲುಪಿತ್ತು. ಮಿಂಚಿನ ಕಾರ್ಯಾಚರಣೆ ನಡೆಸಿದ್ದ ದ.ಕ. ಎಸ್ಪಿ ನೇತೃತ್ವದ ತಂಡವನ್ನು ಉಸ್ತುವಾರಿ ಸಚಿವರು ಸನ್ಮಾನಿಸಿದ್ದರು.
ನಾಲ್ಕು ತಿಂಗಳ ಹಿಂದೆ ಬಂಟ್ವಾಳದಲ್ಲಿ ಸುರೇಂದ್ರ ಬಂಟ್ವಾಳ್ ಎಂಬಾತನ ಕೊಲೆ ನಡೆದಿತ್ತು. ಸದ್ರಿ ಪ್ರಕರಣದಲ್ಲಿಯೂ ತನಿಖೆ ನಡೆಸುತ್ತಿದ್ದ ಪೊಲೀಸ್ ತಂಡಕ್ಕೆ ಮತ್ತು ಎಸ್ಪಿ ಲಕ್ಷ್ಮೀಪ್ರಸಾದ್ ಅವರಿಗೆ ಇಲಾಖೆ ಒಳಗಿಂದಲೇ ಒತ್ತಡಗಳು ಎದುರಾಗಿದ್ದವು. ಆರೋಪಿಗಳ ಪತ್ತೆ ವಿಚಾರದಲ್ಲಿ ಎದುರಾಗಿದ್ದ ಒತ್ತಡವನ್ನು ಲೆಕ್ಕಿಸದೇ ತಮ್ಮ ಕೆಲಸವನ್ನು ಮಾಡಿತ್ತು ಎಸ್ಪಿ ಟೀಮ್. ಈ ಪ್ರಕರಣದಲ್ಲೂ ಎಸ್ಪಿ ಲಕ್ಷ್ಮೀಪ್ರಸಾದ್ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿತ್ತು. ನೋಡಲು ತುಂಬ ಸೈಲಂಟ್ ಆಗಿರುವ ಲಕ್ಷ್ಮೀಪ್ರಸಾದ್ ಕೆಲಸ ಮಾತ್ರ ವೇಗದಿಂದ ಕೂಡಿತ್ತು ಅನ್ನುವುದನ್ನು ದಕ್ಷಿಣ ಕನ್ನಡದಲ್ಲಿ ತೋರಿಸಿಕೊಟ್ಡಿದ್ದಾರೆ.
2015ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಸೋನವಾನೆ ರಿಷಿಕೇಶ್ ಭಗವಾನ್ ಯಾದಗಿರಿಯಲ್ಲಿ ಎಸ್ಪಿ ಆಗಿ ಕರ್ತವ್ಯದಲ್ಲಿದ್ದಾರೆ. ಅವರನ್ನು ದ. ಕನ್ನಡ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ಎಸ್ಪಿ ಆಗಿದ್ದ ಕೆ.ಎಂ. ಶಾಂತರಾಜು ಅವರನ್ನು ಬೆಂಗಳೂರು ಟ್ರಾಫಿಕ್ ವಿಭಾಗದ ಡಿಸಿಪಿ ಆಗಿ ವರ್ಗ ಮಾಡಲಾಗಿದೆ.
Sonawane Rishikesh Bhagawan IPS has been appointed as the SP, superintendent of Police, Dakshina Kannada. Lakshmi prasad has been transferred to Shivamogga as SP.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm