ಬ್ರೇಕಿಂಗ್ ನ್ಯೂಸ್
03-04-21 03:45 pm Mangalore Correspondent ಕರಾವಳಿ
ಮಂಗಳೂರು, ಎ.3: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭಾರೀ ಪ್ರಮಾಣದ ಚಿನ್ನದ ಅಕ್ರಮ ಸಾಗಾಟವನ್ನು ಪತ್ತೆ ಮಾಡಿದ್ದಾರೆ. ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಒಟ್ಟು ಎರಡೂವರೆ ಕೇಜಿ ಚಿನ್ನವನ್ನು ವಶಕ್ಕೆ ಪಡೆದಿದ್ದು, ಅಂದಾಜು 1.20 ಕೋಟಿ ಮೌಲ್ಯದ ಚಿನ್ನ ಪತ್ತೆಯಾಗಿದೆ.

ಎಪ್ರಿಲ್ 1 ಮತ್ತು 2ರಂದು ದುಬೈನಿಂದ ಬಂದಿದ್ದ ಕೇರಳದ ಕಾಸರಗೋಡಿನ ಅಬ್ದುಲ್ ಸಲಾಂ ಮನಿಪರಂಬು ಮತ್ತು ಮೊಹಮ್ಮದ್ ಅಶ್ರಫ್ ಎಂಬಿಬ್ಬರನ್ನು ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆ. ಅಬ್ದುಲ್ ಸಲಾಂ ತನ್ನ ದೇಹದಲ್ಲಿ ಚಿನ್ನವನ್ನು ಪೌಡರ್ ರೂಪದಲ್ಲಿ ಅಡಗಿಸಿಟ್ಟಿದ್ದರೆ, ಮೊಹಮ್ಮದ್ ಅಶ್ರಫ್ ತಾನು ತೊಟ್ಟಿದ್ದ ಜೀನ್ಸ್ ಅಂಗಿಯಲ್ಲಿ ಬಟನ್ ರೂಪದಲ್ಲಿ ಚಿನ್ನವನ್ನು ಹಾಕ್ಕೊಂಡಿದ್ದ. ಅಲ್ಲದೆ, ತನ್ನ ಶೂ ಒಳಗೆ ಚಿನ್ನದ ಸರ ಇಟ್ಟುಕೊಂಡಿದ್ದ. ಇವರಲ್ಲಿ 26.43 ಲಕ್ಷ ಮೌಲ್ಯದ ಒಟ್ಟು 576 ಗ್ರಾಮ್ ಚಿನ್ನ ಪತ್ತೆಯಾಗಿತ್ತು.


ಎಪ್ರಿಲ್ 3ರಂದು ಬೆಳಗ್ಗೆ ಮಂಗಳೂರಿನ ಉಳ್ಳಾಲದ ನಿವಾಸಿ ಮೊಹಮ್ಮದ್ ಆಶಿಫ್ (28) ಎನ್ನುವಾತ ಏರ್ ಇಂಡಿಯಾ ವಿಮಾನದಲ್ಲಿ ದುಬೈನಿಂದ ಬಂದಿದ್ದು ಭಾರೀ ಪ್ರಮಾಣದ ಚಿನ್ನದ ಜೊತೆ ಸಿಕ್ಕಿಬಿದ್ದಿದ್ದಾನೆ. ಪ್ಯಾಂಟ್ ಮತ್ತು ಶರ್ಟಿನಲ್ಲಿ ವಿಶೇಷವಾಗಿ ರಚಿಸಲಾಗಿದ್ದ ಪಾಕೆಟ್ ಒಳಗೆ ಚಿನ್ನದ ಗಟ್ಟಿ ಇಟ್ಟುಕೊಂಡಿದ್ದ. ಈತನ ಬಳಿ 1 ಕೇಜಿ 933 ಗ್ರಾಮ್ ಚಿನ್ನ ಪತ್ತೆಯಾಗಿದ್ದು ಅದರ ಮೌಲ್ಯ 92.27 ಲಕ್ಷ ಆಗಿರುತ್ತದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ಎರಡು ದಿನದ ಅಂತರದಲ್ಲಿ ಎರಡೂವರೆ ಕೇಜಿ ಚಿನ್ನ ಪತ್ತೆಯಾಗಿದ್ದು ಇದೇ ಮೊದಲಾಗಿದ್ದು, ದಿನವೂ ಭಾರೀ ಪ್ರಮಾಣದ ಚಿನ್ನ ಕಳ್ಳ ಸಾಗಣೆ ಮೂಲಕ ಭಾರತಕ್ಕೆ ಬರುತ್ತಿರುವುದರ ದ್ಯೋತಕವಾಗಿದೆ.
In a Big time Haul the customs officers of Mangalore Airport have seized 2.5 Kgs of Gold worth 1.20 crores in two days.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm