ಬ್ರೇಕಿಂಗ್ ನ್ಯೂಸ್
22-08-20 05:14 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 22: ಕರಾವಳಿಯಲ್ಲಿ ಕೊರೊನಾ ಸಂಕಷ್ಟದ ನಡುವೆ ಗಣೇಶನ ಪೂಜೆ ನಡೆದಿದೆ. ಆದರೆ, ಕರಾವಳಿ ಜನ ಗಣೇಶನ ಆರಾಧನೆಯಲ್ಲಿ ತೊಡಗಿದ್ದರೆ ಇತ್ತ ಹಸಿರ ಸಿರಿಯ ಪ್ರಕೃತಿಯೇ ಗಣಪನ ರೂಪದಲ್ಲಿ ಕಂಡುಬಂದಿದ್ದಾಳೆ.
ಹೌದು.. ಮಂಗಳೂರು ನಗರ ಹೊರವಲಯದ ವಾಮಂಜೂರು ಬಳಿಯ ಕೆತ್ತಿಕಲ್ ಎಂಬಲ್ಲಿ ಅಪರೂಪದ ದೃಶ್ಯ ಕಂಡುಬಂದಿದ್ದು ಜನರ ಕುತೂಹಲಕ್ಕೆ ಕಾರಣವಾಗಿದೆ. ಈಚಲು ಮರಕ್ಕೆ ಸುತ್ತಿಕೊಂಡ ಗಿಡ, ಬಳ್ಳಿಗಳೆಲ್ಲ ಸೇರಿ ಗಣೇಶನ ಆಕೃತಿ ಪಡೆದಿದ್ದು ರಮಣೀಯ ನಿಸರ್ಗ ಸಿರಿ ಭಕ್ತಜನರನ್ನು ಮಂತ್ರಮುಗ್ಧಗೊಳಿಸಿದೆ. ಕೆತ್ತಿಕಲ್ ತಿರುವಿನಿಂದ ಅಮೃತೇಶ್ವರಿ ದೇವಸ್ಥಾನಕ್ಕೆ ತಿರುಗುವ ರಸ್ತೆಯಲ್ಲಿ ಸಾಗುತ್ತಿದ್ದಂತೆ ಈ ಗಣೇಶ ರೂಪ ಕಂಡುಬರುತ್ತಿದ್ದು ಇದನ್ನು ವಿಶಾಲ್ ವಾಮಂಜೂರು ಎನ್ನುವ ಫೋಟೋಗ್ರಾಫರ್ ಸೆರೆ ಹಿಡಿದು ಆ ಫೋಟೊವನ್ನು ಹಂಚಿಕೊಂಡಿದ್ದಾರೆ.

ಕಾಕತಾಳೀಯ ಎಂಬಂತೆ, ಗಣೇಶನ ಹಬ್ಬದ ದಿವಸವೇ ಇಂಥ ನಿಸರ್ಗ ಸಿರಿ ಕಂಡುಬಂದಿದ್ದು ಆ ಚಿತ್ರಣದ ಫೋಟೊ ಈಗ ವೈರಲ್ ಆಗಿದೆ. ಈಚಲು ಮರಕ್ಕೆ ಪೊದೆಗಳು ಬೆಳೆದು ನಿಂತಿರುವುದು ಅತ್ತ ರಸ್ತೆಯಲ್ಲಿ ಸಾಗುವ ಪ್ರಯಾಣಿಕರಿಗೆ ಗಣಪತಿಯ ಸೊಂಡಿಲಿನ ರೂಪ ಮನಸ್ಸಿಗೆ ಬರುತ್ತದೆ. ಇದನ್ನೇ ಫೋಟೋಗ್ರಾಫರ್ ತನ್ನ ಕಣ್ಣಿಗೆ ನಿಲುಕಿದಂತೆ ಕ್ಕಿಕ್ಕಿಸಿದ್ದು ಫೋಟೊ ವೈರಲ್ ಆಗುತ್ತಿದ್ದಂತೆ ಜನರು ಸ್ಥಳಕ್ಕೆ ಆಗಮಿಸ ತೊಡಗಿದ್ದಾರೆ. ನಿಸರ್ಗದಲ್ಲಿ ಅರಳಿದ ಗಣಪನನ್ನ ಕಂಡು ಜನರು ಭಕ್ತಿಯಿಂದ ನಮಿಸುತ್ತಿದ್ದಾರೆ. ತಮ್ಮ ಮೊಬೈಲ್ ಗಳಲ್ಲಿ ಫೋಟೊ ತೆಗೆದು ಕಣ್ಣು ತುಂಬಿಸಿಕೊಳ್ಳುತ್ತಿದ್ದಾರೆ. ಗಣೇಶೋತ್ಸವ ಸಡಗರದ ನಡುವಲ್ಲೇ ಹಸಿರ ಸಿರಿಯ ಮಧ್ಯೆ ಗಣೇಶನ ರೂಪ ಕಂಡಿರುವುದು, ಭಕ್ತ ಜನರ ಕುತೂಹಲಕ್ಕೆ ಕಾರಣವಾಗಿದೆ.
Photo Courtesy : Vishal Vamanjoor
Video:
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm