ಬ್ರೇಕಿಂಗ್ ನ್ಯೂಸ್
22-08-20 05:14 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 22: ಕರಾವಳಿಯಲ್ಲಿ ಕೊರೊನಾ ಸಂಕಷ್ಟದ ನಡುವೆ ಗಣೇಶನ ಪೂಜೆ ನಡೆದಿದೆ. ಆದರೆ, ಕರಾವಳಿ ಜನ ಗಣೇಶನ ಆರಾಧನೆಯಲ್ಲಿ ತೊಡಗಿದ್ದರೆ ಇತ್ತ ಹಸಿರ ಸಿರಿಯ ಪ್ರಕೃತಿಯೇ ಗಣಪನ ರೂಪದಲ್ಲಿ ಕಂಡುಬಂದಿದ್ದಾಳೆ.
ಹೌದು.. ಮಂಗಳೂರು ನಗರ ಹೊರವಲಯದ ವಾಮಂಜೂರು ಬಳಿಯ ಕೆತ್ತಿಕಲ್ ಎಂಬಲ್ಲಿ ಅಪರೂಪದ ದೃಶ್ಯ ಕಂಡುಬಂದಿದ್ದು ಜನರ ಕುತೂಹಲಕ್ಕೆ ಕಾರಣವಾಗಿದೆ. ಈಚಲು ಮರಕ್ಕೆ ಸುತ್ತಿಕೊಂಡ ಗಿಡ, ಬಳ್ಳಿಗಳೆಲ್ಲ ಸೇರಿ ಗಣೇಶನ ಆಕೃತಿ ಪಡೆದಿದ್ದು ರಮಣೀಯ ನಿಸರ್ಗ ಸಿರಿ ಭಕ್ತಜನರನ್ನು ಮಂತ್ರಮುಗ್ಧಗೊಳಿಸಿದೆ. ಕೆತ್ತಿಕಲ್ ತಿರುವಿನಿಂದ ಅಮೃತೇಶ್ವರಿ ದೇವಸ್ಥಾನಕ್ಕೆ ತಿರುಗುವ ರಸ್ತೆಯಲ್ಲಿ ಸಾಗುತ್ತಿದ್ದಂತೆ ಈ ಗಣೇಶ ರೂಪ ಕಂಡುಬರುತ್ತಿದ್ದು ಇದನ್ನು ವಿಶಾಲ್ ವಾಮಂಜೂರು ಎನ್ನುವ ಫೋಟೋಗ್ರಾಫರ್ ಸೆರೆ ಹಿಡಿದು ಆ ಫೋಟೊವನ್ನು ಹಂಚಿಕೊಂಡಿದ್ದಾರೆ.

ಕಾಕತಾಳೀಯ ಎಂಬಂತೆ, ಗಣೇಶನ ಹಬ್ಬದ ದಿವಸವೇ ಇಂಥ ನಿಸರ್ಗ ಸಿರಿ ಕಂಡುಬಂದಿದ್ದು ಆ ಚಿತ್ರಣದ ಫೋಟೊ ಈಗ ವೈರಲ್ ಆಗಿದೆ. ಈಚಲು ಮರಕ್ಕೆ ಪೊದೆಗಳು ಬೆಳೆದು ನಿಂತಿರುವುದು ಅತ್ತ ರಸ್ತೆಯಲ್ಲಿ ಸಾಗುವ ಪ್ರಯಾಣಿಕರಿಗೆ ಗಣಪತಿಯ ಸೊಂಡಿಲಿನ ರೂಪ ಮನಸ್ಸಿಗೆ ಬರುತ್ತದೆ. ಇದನ್ನೇ ಫೋಟೋಗ್ರಾಫರ್ ತನ್ನ ಕಣ್ಣಿಗೆ ನಿಲುಕಿದಂತೆ ಕ್ಕಿಕ್ಕಿಸಿದ್ದು ಫೋಟೊ ವೈರಲ್ ಆಗುತ್ತಿದ್ದಂತೆ ಜನರು ಸ್ಥಳಕ್ಕೆ ಆಗಮಿಸ ತೊಡಗಿದ್ದಾರೆ. ನಿಸರ್ಗದಲ್ಲಿ ಅರಳಿದ ಗಣಪನನ್ನ ಕಂಡು ಜನರು ಭಕ್ತಿಯಿಂದ ನಮಿಸುತ್ತಿದ್ದಾರೆ. ತಮ್ಮ ಮೊಬೈಲ್ ಗಳಲ್ಲಿ ಫೋಟೊ ತೆಗೆದು ಕಣ್ಣು ತುಂಬಿಸಿಕೊಳ್ಳುತ್ತಿದ್ದಾರೆ. ಗಣೇಶೋತ್ಸವ ಸಡಗರದ ನಡುವಲ್ಲೇ ಹಸಿರ ಸಿರಿಯ ಮಧ್ಯೆ ಗಣೇಶನ ರೂಪ ಕಂಡಿರುವುದು, ಭಕ್ತ ಜನರ ಕುತೂಹಲಕ್ಕೆ ಕಾರಣವಾಗಿದೆ.
Photo Courtesy : Vishal Vamanjoor
Video:
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm