ಪಚ್ಚನಾಡಿ ಡಂಪಿಂಗ್ ಯಾರ್ಡಿಗೆ ಭಾರೀ ಬೆಂಕಿ ; ಪರಿಸರದಲ್ಲಿ ಆತಂಕ ಸೃಷ್ಟಿಸಿದ ಜ್ವಾಲೆ !!

05-04-21 09:14 am       Mangaluru correspondent   ಕರಾವಳಿ

ಮಹಾನಗರ ಪಾಲಿಕೆ ವ್ಯಾಪ್ತಿಯ ತ್ಯಾಜ್ಯ ವಿಲೇವಾರಿ ಘಟಕ ವಾಮಂಜೂರಿನ ಪಚ್ಚನಾಡಿಯಲ್ಲಿರುವ ಡಂಪಿಂಗ್ ಯಾರ್ಡಿಗೆ ಭಾನುವಾರ  ರಾತ್ರೋರಾತ್ರಿ ಬೆಂಕಿ ಬಿದ್ದಿದ್ದು ಬೆಂಕಿಯ ಕೆನ್ನಾಲಿಗೆ ಪರಿಸರದಲ್ಲಿ ಭೀತಿ ಸೃಷ್ಟಿಸಿದೆ. 

ಮಂಗಳೂರು, ಎ.5: ಮಹಾನಗರ ಪಾಲಿಕೆ ವ್ಯಾಪ್ತಿಯ ತ್ಯಾಜ್ಯ ವಿಲೇವಾರಿ ಘಟಕ ವಾಮಂಜೂರಿನ ಪಚ್ಚನಾಡಿಯಲ್ಲಿರುವ ಡಂಪಿಂಗ್ ಯಾರ್ಡಿಗೆ ಭಾನುವಾರ  ರಾತ್ರೋರಾತ್ರಿ ಬೆಂಕಿ ಬಿದ್ದಿದ್ದು ಬೆಂಕಿಯ ಕೆನ್ನಾಲಿಗೆ ಪರಿಸರದಲ್ಲಿ ಭೀತಿ ಸೃಷ್ಟಿಸಿದೆ. 

ತಾಜ್ಯ ಸಂಸ್ಕರಿಸುವ ಘಟಕದಲ್ಲಿ ಶೇಖರಿಸಿಟ್ಟ ಪ್ಲಾಸ್ಟಿಕ್ ಸರಕುಗಳಿಗೆ ಬೆಂಕಿ ಹತ್ತಿಕೊಂಡಿದ್ದು ಇದರ ಪರಿಣಾಮ ಅಗ್ನಿ ದುರಂತ ಸಂಭವಿಸಿದೆ. ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಆದರೆ, ಒಂದು ವಾಹನವಷ್ಟೇ ಸ್ಥಳಕ್ಕೆ ಬಂದಿದ್ದು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದೆ. ಆದರೆ, ಅಗ್ನಿಯ ಜ್ವಾಲೆ ಕಡಿಮೆಯಾಗುವ ಲಕ್ಷಣಗಳು ಕಂಡುಬರುತ್ತಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. 

ಘಟಕವನ್ನು ಮಂಗಳೂರು ಮಹಾನಗರ ಪಾಲಿಕೆಯಿಂದ ಮುಂಬೈ ಮೂಲದ ಆಂಟನಿ ವೇಸ್ಟ್ ಮ್ಯಾನೇಜ್ಮೆಂಟ್ ಕಂಪನಿಗೆ ಗುತ್ತಿಗೆ ನೀಡಿದ್ದು ಇಲ್ಲಿ ಅವೈಜ್ಞಾನಿಕ ರೀತಿಯಲ್ಲಿ ತಾಜ್ಯ ರಾಶಿ ಹಾಕಲಾಗಿತ್ತು. ಅದೇ ಕಾರಣದಿಂದ ಬೆಂಕಿ ಹತ್ತಿಕೊಂಡಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಬಂದಿದ್ದ ಪಾಲಿಕೆಯ ಅಧಿಕಾರಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ.

video: 

Mangalore Huge fire erupts at pachanady dumpyard unit. DC Rajendra and MCC mayor Premanad Shetty have rushed to the spot.