ಬ್ರೇಕಿಂಗ್ ನ್ಯೂಸ್
05-04-21 01:22 pm Udupi Correspondent ಕರಾವಳಿ
ಉಡುಪಿ, ಎ.5 : ವಲಸೆ ಕಾರ್ಮಿಕರನ್ನು ಸಾಗಿಸುತ್ತಿದ್ದ ಟೆಂಪೋ ಪಲ್ಟಿಯಾಗಿ ಓರ್ವ ಮಹಿಳೆ ಮೃತಪಟ್ಟು ಮಕ್ಕಳು ಸಹಿತ 13 ಮಂದಿ ಗಾಯಗೊಂಡ ಘಟನೆ ಬ್ರಹ್ಮಾವರದ ಹೇರೂರು ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ವಲಸೆ ಕಾರ್ಮಿಕರಾಗಿದ್ದು ಕಾಂಕ್ರೀಟ್ ಕೆಲಸ ಮುಗಿಸಿ ಭಾನುವಾರ ಸಂಜೆ 15 ಮಂದಿ ವಾಹನದಲ್ಲಿ ಉಡುಪಿ ಕಡೆಗೆ ಹೋಗುತ್ತಿದ್ದರು. ಈ ವೇಳೆ ಟೈರ್ ಸ್ಫೋಟಗೊಂಡು ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ವಾಹನದಲ್ಲಿ ಜನರೇಟರ್, ಕಾಂಕ್ರಿಟ್ ಮಿಕ್ಸಿಂಗ್ ಮೆಷಿನ್ ಕೂಡ ಇತ್ತು ಎಂದು ತಿಳಿದುಬಂದಿದೆ.
ಏಕಾಏಕಿ ವಾಹನ ಪಲ್ಟಿಯಾಗಿದ್ದರಿಂದ ವಾಹನದಡಿಗೆ ಸಿಲುಕಿದ್ದು, ಕೆಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡ 35 ವರ್ಷದ ಮಹಿಳೆ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾರೆ.

ಸ್ಥಳದಲ್ಲಿ ಮಕ್ಕಳು ಹಾಗೂ ಮಹಿಳೆಯರ ಚೀರಾಟ ಮನ ಕಲಕುವಂತಿತ್ತು. ಸ್ಥಳೀಯರು ಹಾಗೂ ಇತರ ವಾಹನ ಸವಾರರು ಅವರನ್ನು ರಕ್ಷಿಸಿ ಅಂಬುಲೆನ್ಸ್ ಹಾಗೂ ಖಾಸಗಿ ವಾಹನದ ಮೂಲಕ ಆಸ್ಪತ್ರೆಗೆ ಸಾಗಿಸಲು ನೆರವಾದರು. ಗಾಯಾಳುಗಳನ್ನು ಉಡುಪಿ ಜಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ 12 ಮಂದಿ ದಾಖಲಾಗಿದ್ದು ಅದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
ಇದೇ ವೇಳೆ ಬೇಜವಾಬ್ದಾರಿಯಿಂದ ಕಾರ್ಮಿಕರನ್ನು ಸಾಗಿಸುತ್ತಿದ್ದ ಗುತ್ತಿಗೆದಾರನ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ. ಬ್ರಹ್ಮಾವರ ಪೊಲೀಸರು ಹಾಗೂ ಹೈವೇ ಪಟ್ರೋಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Udupi truck carrying labourers topples one killed 15 injured. A case has been on contractor over negligence.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 10:45 am
HK News Staffer
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm