ಬ್ರೇಕಿಂಗ್ ನ್ಯೂಸ್
05-04-21 01:22 pm Udupi Correspondent ಕರಾವಳಿ
ಉಡುಪಿ, ಎ.5 : ವಲಸೆ ಕಾರ್ಮಿಕರನ್ನು ಸಾಗಿಸುತ್ತಿದ್ದ ಟೆಂಪೋ ಪಲ್ಟಿಯಾಗಿ ಓರ್ವ ಮಹಿಳೆ ಮೃತಪಟ್ಟು ಮಕ್ಕಳು ಸಹಿತ 13 ಮಂದಿ ಗಾಯಗೊಂಡ ಘಟನೆ ಬ್ರಹ್ಮಾವರದ ಹೇರೂರು ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ವಲಸೆ ಕಾರ್ಮಿಕರಾಗಿದ್ದು ಕಾಂಕ್ರೀಟ್ ಕೆಲಸ ಮುಗಿಸಿ ಭಾನುವಾರ ಸಂಜೆ 15 ಮಂದಿ ವಾಹನದಲ್ಲಿ ಉಡುಪಿ ಕಡೆಗೆ ಹೋಗುತ್ತಿದ್ದರು. ಈ ವೇಳೆ ಟೈರ್ ಸ್ಫೋಟಗೊಂಡು ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ವಾಹನದಲ್ಲಿ ಜನರೇಟರ್, ಕಾಂಕ್ರಿಟ್ ಮಿಕ್ಸಿಂಗ್ ಮೆಷಿನ್ ಕೂಡ ಇತ್ತು ಎಂದು ತಿಳಿದುಬಂದಿದೆ.
ಏಕಾಏಕಿ ವಾಹನ ಪಲ್ಟಿಯಾಗಿದ್ದರಿಂದ ವಾಹನದಡಿಗೆ ಸಿಲುಕಿದ್ದು, ಕೆಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡ 35 ವರ್ಷದ ಮಹಿಳೆ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾರೆ.
ಸ್ಥಳದಲ್ಲಿ ಮಕ್ಕಳು ಹಾಗೂ ಮಹಿಳೆಯರ ಚೀರಾಟ ಮನ ಕಲಕುವಂತಿತ್ತು. ಸ್ಥಳೀಯರು ಹಾಗೂ ಇತರ ವಾಹನ ಸವಾರರು ಅವರನ್ನು ರಕ್ಷಿಸಿ ಅಂಬುಲೆನ್ಸ್ ಹಾಗೂ ಖಾಸಗಿ ವಾಹನದ ಮೂಲಕ ಆಸ್ಪತ್ರೆಗೆ ಸಾಗಿಸಲು ನೆರವಾದರು. ಗಾಯಾಳುಗಳನ್ನು ಉಡುಪಿ ಜಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ 12 ಮಂದಿ ದಾಖಲಾಗಿದ್ದು ಅದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
ಇದೇ ವೇಳೆ ಬೇಜವಾಬ್ದಾರಿಯಿಂದ ಕಾರ್ಮಿಕರನ್ನು ಸಾಗಿಸುತ್ತಿದ್ದ ಗುತ್ತಿಗೆದಾರನ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ. ಬ್ರಹ್ಮಾವರ ಪೊಲೀಸರು ಹಾಗೂ ಹೈವೇ ಪಟ್ರೋಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Udupi truck carrying labourers topples one killed 15 injured. A case has been on contractor over negligence.
22-10-24 11:13 pm
Bangalore Correspondent
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
Kengari body found, Bangalore: ಬಿಂದಿಗೆ ಎತ್ತಿಕ...
22-10-24 08:27 pm
ಬೆಂಗಳೂರಿನಲ್ಲಿ 6 ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡ ಮ...
22-10-24 07:19 pm
ಸಿ.ಪಿ ಯೋಗೀಶ್ವರ್ ಕಾಂಗ್ರೆಸ್ ಸೇರೋದು ಪಕ್ಕಾ ; ಮುಖ್...
22-10-24 05:26 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
22-10-24 10:26 pm
Mangalore Correspondent
'ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ' ; ಅ.25ರ...
22-10-24 09:44 pm
Mangalore college, News: ಸರಕಾರಿ ಪ್ರಥಮ ದರ್ಜೆ ಕ...
22-10-24 07:28 pm
Mangalore, Ullal, railway track stone: ರೈಲು ಹ...
22-10-24 05:29 pm
Kalladka road, Mangalore News: ಮಳೆ- ಬಿಸಿಲಿಗೆ...
21-10-24 09:49 pm
22-10-24 02:49 pm
HK News Desk
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm
ಸಿಸಿಬಿ ಪೊಲೀಸರ ಭರ್ಜರಿ ಬೇಟೆ ; ಪೋಸ್ಟ್ ಆಫೀಸ್ನಲ್ಲ...
18-10-24 03:11 pm