ಬ್ರೇಕಿಂಗ್ ನ್ಯೂಸ್
05-04-21 04:03 pm Mangalore Correspondent ಕರಾವಳಿ
ಮಂಗಳೂರು, ಎ.5: ಮೆಸ್ಕಾಂ ಅಧಿಕಾರಿಯೋರ್ವ ಕಚೇರಿಗೆ ಬಂದಿದ್ದ ಗ್ರಾಹಕನ ಮೇಲೆ ಸ್ಟೀಲ್ ಸ್ಕೇಲ್ ನಲ್ಲಿ ಹಿಗ್ಗಾ ಮುಗ್ಗಾ ಹಲ್ಲೆಗೈದು ಅವಾಚ್ಯ ಶಬ್ದಗಳಿಂದ ನಿಂದಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮೂಲತಃ ಉಳ್ಳಾಲಬೈಲಿನ ನಿವಾಸಿ ಪ್ರವೀಣ್ ಬಂಗೇರ ಎಂಬವರು ಮಂಗಳೂರಿನ ಮೆಸ್ಕಾಂ ಅತ್ತಾವರ ವಿಭಾಗದಲ್ಲಿ ವಿಜಿಲೆನ್ಸ್ ಅಧಿಕಾರಿ ಆಗಿದ್ದು ಕಚೇರಿಗೆ ಬಂದಿದ್ದ ಗ್ರಾಹಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಸ್ಟೀಲ್ ಸ್ಕೇಲ್ ನಿಂದ ಹಲ್ಲೆ ನಡೆಸಿ ರೌಡಿಸಂ ಪ್ರದರ್ಶನ ಮಾಡಿದ್ದಾರೆ. ನೀವು ಫೋನ್ ತೆಗೆದಿಲ್ಲ. ನಿಮ್ಮ ಮೇಲೆ ದೊಣ್ಣೆಯಲ್ಲಿ ಹೊಡೆಯಬೇಕು ಎಂದು ಹೇಳಿದ್ದಕ್ಕೆ ಸಿಟ್ಟಾದ ಪ್ರವೀಣ್ ತನ್ನ ಕೈಯಲ್ಲಿದ್ದ ಸ್ಟೀಲ್ ಸ್ಕೇಲ್ ನಲ್ಲಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ನೀನು ತಾಕತ್ತಿದ್ದರೆ ದೊಣ್ಣೆಯಲ್ಲಿ ಹೊಡೆದು ನೋಡು. ನಾವು ಪೊಲೀಸರು, ಬಾ ಮುಂದೆ ಎನ್ನುತ್ತಲೇ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಹಲ್ಲೆ ನಡೆಸಿದ್ದಾರೆ. ಬಳಿಕ ಕಚೇರಿಯಲ್ಲಿದ್ದ ಇತರ ವ್ಯಕ್ತಿಗಳು ಸಮಾಧಾನ ಪಡಿಸಿದ್ದು ವಿಡಿಯೋದಲ್ಲಿ ದಾಖಲಾಗಿದೆ.
ಪ್ರವೀಣ್ ಬಂಗೇರ ಈ ಮೊದಲು ಉಳ್ಳಾಲ ಮೆಸ್ಕಾಂನಲ್ಲಿ ಎಇ (ಅಸಿಸ್ಟೆಂಟ್ ಇಂಜಿನಿಯರ್) ಆಗಿದ್ದು ಆ ಸಂದರ್ಭದಲ್ಲೇ ಭ್ರಷ್ಟಾಚಾರ ನಡೆಸಿ ಅಕ್ರಮ ಆಸ್ತಿ ಸಂಪಾದಿಸಿರುವ ಆರೋಪಗಳಿದ್ದವು. ಇವರು ಪತ್ನಿಯ ಹೆಸರಲ್ಲಿ ಉಳ್ಳಾಲ ಬೈಲ್ ಪರಿಸರದಲ್ಲಿ ಕೇಬಲ್ ಟಿ.ವಿ. ನಡೆಸುತ್ತಿದ್ದಾರೆ. ಉಳ್ಳಾಲ ಬೈಲಿನಲ್ಲಿ ದೈವಸ್ಥಾನ ಒಂದರಲ್ಲಿ ಆಡಳಿತ ಕಮಿಟಿ ಅಧ್ಯಕ್ಷನಾಗಿಯೂ ಸ್ಥಾನ ಗಿಟ್ಟಿಸಿದ್ದಾನೆ.
ಹಳೆಯ ವೀಡಿಯೋ ವೈರಲ್ !
ಮೆಸ್ಕಾಂ ವಿಜೆಲೆನ್ಸ್ ಅಧಿಕಾರಿ ಪ್ರವೀಣ್ ಬಂಗೇರ ಗ್ರಾಹಕನ ಮೇಲೆ ಸ್ಕೇಲ್ ನಲ್ಲಿ ಹಲ್ಲೆ ನಡೆಸಿದ್ದ ಘಟನೆಯ ವೀಡಿಯೋ ಹಳೆಯದ್ದೆಂದು ತಿಳಿದುಬಂದಿದೆ. ಈ ಬಗ್ಗೆ ದೂರು - ಪ್ರತಿ ದೂರು ದಾಖಲಾಗಿ ಪ್ರಕರಣ ಕೋರ್ಟಲ್ಲಿ ಇದೆಯಂತೆ. ಸುನಿಲ್ ವಾಝ್ ಎಂಬ ಇಲೆಕ್ಟ್ರಿಕಲ್ ಗುತ್ತಿಗೆದಾರ ಈ ವೀಡಿಯೋ ತೆಗೆದಿದ್ದಾರೆ ಎನ್ನಲಾಗಿದ್ದು ಪ್ರವೀಣ್ ಬಂಗೇರ ಎಂಬ ಅಧಿಕಾರಿಯ ದರ್ಪವನ್ನು ರೆಕಾರ್ಡ್ ಮಾಡಿದ್ದರು. ಹಳೆಯ ವೀಡಿಯೋ ಆಗಿದ್ದರೂ ಮೆಸ್ಕಾಂ ವಿಜಿಲೆನ್ಸ್ ಅಧಿಕಾರಿಯ ರಾಕ್ಷಸೀ ಪ್ರವೃತ್ತಿ ವೈರಲ್ ವಿಡಿಯೋದಲ್ಲಿ ಬಯಲಾಗಿದೆ.
Video:
Mangalore Mescom vegeligence officer Praveen Bangera attacks customer with Steel scale by using foul words a video of this has gone viral on social media.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm