ಬ್ರೇಕಿಂಗ್ ನ್ಯೂಸ್
05-04-21 04:03 pm Mangalore Correspondent ಕರಾವಳಿ
ಮಂಗಳೂರು, ಎ.5: ಮೆಸ್ಕಾಂ ಅಧಿಕಾರಿಯೋರ್ವ ಕಚೇರಿಗೆ ಬಂದಿದ್ದ ಗ್ರಾಹಕನ ಮೇಲೆ ಸ್ಟೀಲ್ ಸ್ಕೇಲ್ ನಲ್ಲಿ ಹಿಗ್ಗಾ ಮುಗ್ಗಾ ಹಲ್ಲೆಗೈದು ಅವಾಚ್ಯ ಶಬ್ದಗಳಿಂದ ನಿಂದಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮೂಲತಃ ಉಳ್ಳಾಲಬೈಲಿನ ನಿವಾಸಿ ಪ್ರವೀಣ್ ಬಂಗೇರ ಎಂಬವರು ಮಂಗಳೂರಿನ ಮೆಸ್ಕಾಂ ಅತ್ತಾವರ ವಿಭಾಗದಲ್ಲಿ ವಿಜಿಲೆನ್ಸ್ ಅಧಿಕಾರಿ ಆಗಿದ್ದು ಕಚೇರಿಗೆ ಬಂದಿದ್ದ ಗ್ರಾಹಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಸ್ಟೀಲ್ ಸ್ಕೇಲ್ ನಿಂದ ಹಲ್ಲೆ ನಡೆಸಿ ರೌಡಿಸಂ ಪ್ರದರ್ಶನ ಮಾಡಿದ್ದಾರೆ. ನೀವು ಫೋನ್ ತೆಗೆದಿಲ್ಲ. ನಿಮ್ಮ ಮೇಲೆ ದೊಣ್ಣೆಯಲ್ಲಿ ಹೊಡೆಯಬೇಕು ಎಂದು ಹೇಳಿದ್ದಕ್ಕೆ ಸಿಟ್ಟಾದ ಪ್ರವೀಣ್ ತನ್ನ ಕೈಯಲ್ಲಿದ್ದ ಸ್ಟೀಲ್ ಸ್ಕೇಲ್ ನಲ್ಲಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ನೀನು ತಾಕತ್ತಿದ್ದರೆ ದೊಣ್ಣೆಯಲ್ಲಿ ಹೊಡೆದು ನೋಡು. ನಾವು ಪೊಲೀಸರು, ಬಾ ಮುಂದೆ ಎನ್ನುತ್ತಲೇ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಹಲ್ಲೆ ನಡೆಸಿದ್ದಾರೆ. ಬಳಿಕ ಕಚೇರಿಯಲ್ಲಿದ್ದ ಇತರ ವ್ಯಕ್ತಿಗಳು ಸಮಾಧಾನ ಪಡಿಸಿದ್ದು ವಿಡಿಯೋದಲ್ಲಿ ದಾಖಲಾಗಿದೆ.
ಪ್ರವೀಣ್ ಬಂಗೇರ ಈ ಮೊದಲು ಉಳ್ಳಾಲ ಮೆಸ್ಕಾಂನಲ್ಲಿ ಎಇ (ಅಸಿಸ್ಟೆಂಟ್ ಇಂಜಿನಿಯರ್) ಆಗಿದ್ದು ಆ ಸಂದರ್ಭದಲ್ಲೇ ಭ್ರಷ್ಟಾಚಾರ ನಡೆಸಿ ಅಕ್ರಮ ಆಸ್ತಿ ಸಂಪಾದಿಸಿರುವ ಆರೋಪಗಳಿದ್ದವು. ಇವರು ಪತ್ನಿಯ ಹೆಸರಲ್ಲಿ ಉಳ್ಳಾಲ ಬೈಲ್ ಪರಿಸರದಲ್ಲಿ ಕೇಬಲ್ ಟಿ.ವಿ. ನಡೆಸುತ್ತಿದ್ದಾರೆ. ಉಳ್ಳಾಲ ಬೈಲಿನಲ್ಲಿ ದೈವಸ್ಥಾನ ಒಂದರಲ್ಲಿ ಆಡಳಿತ ಕಮಿಟಿ ಅಧ್ಯಕ್ಷನಾಗಿಯೂ ಸ್ಥಾನ ಗಿಟ್ಟಿಸಿದ್ದಾನೆ.

ಹಳೆಯ ವೀಡಿಯೋ ವೈರಲ್ !
ಮೆಸ್ಕಾಂ ವಿಜೆಲೆನ್ಸ್ ಅಧಿಕಾರಿ ಪ್ರವೀಣ್ ಬಂಗೇರ ಗ್ರಾಹಕನ ಮೇಲೆ ಸ್ಕೇಲ್ ನಲ್ಲಿ ಹಲ್ಲೆ ನಡೆಸಿದ್ದ ಘಟನೆಯ ವೀಡಿಯೋ ಹಳೆಯದ್ದೆಂದು ತಿಳಿದುಬಂದಿದೆ. ಈ ಬಗ್ಗೆ ದೂರು - ಪ್ರತಿ ದೂರು ದಾಖಲಾಗಿ ಪ್ರಕರಣ ಕೋರ್ಟಲ್ಲಿ ಇದೆಯಂತೆ. ಸುನಿಲ್ ವಾಝ್ ಎಂಬ ಇಲೆಕ್ಟ್ರಿಕಲ್ ಗುತ್ತಿಗೆದಾರ ಈ ವೀಡಿಯೋ ತೆಗೆದಿದ್ದಾರೆ ಎನ್ನಲಾಗಿದ್ದು ಪ್ರವೀಣ್ ಬಂಗೇರ ಎಂಬ ಅಧಿಕಾರಿಯ ದರ್ಪವನ್ನು ರೆಕಾರ್ಡ್ ಮಾಡಿದ್ದರು. ಹಳೆಯ ವೀಡಿಯೋ ಆಗಿದ್ದರೂ ಮೆಸ್ಕಾಂ ವಿಜಿಲೆನ್ಸ್ ಅಧಿಕಾರಿಯ ರಾಕ್ಷಸೀ ಪ್ರವೃತ್ತಿ ವೈರಲ್ ವಿಡಿಯೋದಲ್ಲಿ ಬಯಲಾಗಿದೆ.
Video:
Mangalore Mescom vegeligence officer Praveen Bangera attacks customer with Steel scale by using foul words a video of this has gone viral on social media.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm