ಬ್ರೇಕಿಂಗ್ ನ್ಯೂಸ್
22-08-20 10:08 pm Headline Karnataka News Network ಕರಾವಳಿ
ಮಂಗಳೂರು, ಆಗಸ್ಟ್ 22: ಕೊರೊನಾ ನಿರ್ಬಂಧದ ಬಳಿಕ ಕೇಂದ್ರ ಸರಕಾರದ ಅನ್ ಲಾಕ್ - 3 ಗೈಡ್ ಲೈನ್ಸ್ ನಲ್ಲಿ ಅಂತಾರಾಜ್ಯ ಸಂಚಾರ ಮುಕ್ತಗೊಳಿಸಲು ಸೂಚನೆ ನೀಡಲಾಗಿತ್ತು. ಆದರೆ, ಕೆಲವು ಕಡೆ ಆಯಾ ರಾಜ್ಯಗಳ ಜಿಲ್ಲಾಡಳಿತಗಳು ಗಡಿಭಾಗದಲ್ಲಿ ಸಂಚಾರ ನಿರ್ಬಂಧ ಮುಂದುವರಿಸಿದ್ದವು. ಇದರಿಂದ ಆಯಾ ಭಾಗದ ಜನರು ಸಂಕಷ್ಟಕ್ಕೆ ಒಳಗಾಗಿದ್ದು ಆರ್ಥಿಕ ಚಟುವಟಿಕೆಗೆ ಸಮಸ್ಯೆ ಆಗಿರುವುದನ್ನು ಮನಗಂಡು ಕೇಂದ್ರ ಸರಕಾರದ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಮತ್ತೊಮ್ಮೆ ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಅಂತಾರಾಜ್ಯ ಸಂಚಾರ ನಿರ್ಬಂಧಿಸದಂತೆ ಸೂಚನೆ ನೀಡಿದ್ದಾರೆ.

ಪ್ರಮುಖವಾಗಿ ಕೇರಳ - ಕರ್ನಾಟಕದ ಗಡಿಭಾಗ ಕಾಸರಗೋಡು ಜಿಲ್ಲೆಯ ಜನರಿಗೆ ಸಂಕಷ್ಟ ಉಂಟಾಗಿತ್ತು. ಜುಲೈ 29ರಂದು ಕೇಂದ್ರ ಸರಕಾರ ಹೊರಡಿಸಿದ್ದ ಅನ್ ಲಾಕ್ - 3 ರ ಮಾರ್ಗದರ್ಶಿ ಸೂತ್ರದಲ್ಲಿ ಅಂತಾರಾಜ್ಯ ಸಂಚಾರಕ್ಕೆ ಅವಕಾಶ ಕೊಟ್ಟಿದ್ದರೂ, ಕೇರಳ ಸರಕಾರ ನಿರ್ಬಂಧ ಮುಂದುವರಿಸಿತ್ತು. ಕರ್ನಾಟಕ ಗಡಿ ಮಾತ್ರವಲ್ಲದೆ ತಮಿಳ್ನಾಡು ಗಡಿಯಲ್ಲೂ ಕೇರಳ ಸರಕಾರ ಇದೇ ನೀತಿ ಅನುಸರಿಸಿತ್ತು. ಈ ಬಗ್ಗೆ ಆಯಾ ಭಾಗದ ಜನರು ಸಂಕಷ್ಟಕ್ಕೆ ಈಡಾಗಿದ್ದಲ್ಲದೆ ಸರಕು ಸಾಗಣೆಯೂ ಅಸಾಧ್ಯವಾಗಿರುವ ವಿಚಾರದಲ್ಲಿ ಕೋರ್ಟ್ ಕಟಕಟೆ ಏರಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಮತ್ತೆ ರಾಜ್ಯ ಸರಕಾರಗಳಿಗೆ ಅನ್ ಲಾಕ್ - 3 ರ ಕುರಿತು ಪುನರ್ಮನನ ಮಾಡಿದ್ದು ಯಾವುದೇ ಕಾರಣಕ್ಕೂ ಅಂತಾರಾಜ್ಯ ಸಂಚಾರವನ್ನು ನಿರ್ಬಂಧಿಸಬಾರದು. ಅದಕ್ಕಾಗಿ ಇ- ಪಾಸ್, ಇನ್ನಿತರ ರೀತಿಯಲ್ಲಿ ಪ್ರತ್ಯೇಕ ಅನುಮತಿ ಪಡೆಯುವಂತೆ ಜನರನ್ನು ನಿರ್ಬಂಧಿಸುವಂತಿಲ್ಲ. ಸರಕು ಸಾಗಣೆಗಾಗಲೀ, ಜನರ ಸಂಚಾರಕ್ಕಾಗಲೀ ನಿರ್ಬಂಧ ವಿಧಿಸದೆ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಹಾಗೊಂದು ವೇಳೆ ನಿರ್ಬಂಧಿಸಿದರೆ ಅದು 2005ರ ಗೃಹ ಸಚಿವಾಲಯದ ವಿಪತ್ತು ನಿರ್ವಹಣೆಯ ಕಾಯ್ದೆಯ ಉಲ್ಲಂಘನೆಯಾಗುತ್ತದೆ. ಹೀಗಾಗಿ ಕೇಂದ್ರ ಸರಕಾರದ ಆದೇಶವನ್ನು ರಾಜ್ಯ ಸರಕಾರಗಳು ಯಥಾವತ್ತಾಗಿ ಪಾಲನೆ ಮಾಡುವಂತೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಮನವರಿಕೆ ಮಾಡಿದ್ದಾರೆ.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm