ಬ್ರೇಕಿಂಗ್ ನ್ಯೂಸ್
06-04-21 08:13 pm Mangaluru correspondent ಕರಾವಳಿ
ಮಂಗಳೂರು, ಎ.6: ಲವ್ ಜಿಹಾದ್ ಹೆಸರಲ್ಲಿ ನೈತಿಕ ಪೋಲಿಸ್ ಗಿರಿ ನಡೆಸಲಾಗುತ್ತಿದೆ. ದಿನದಿಂದ ದಿನಕ್ಕೆ ಕ್ರೈಮ್ ಪ್ರಕರಣಗಳು ಮಂಗಳೂರಿನಲ್ಲಿ ಹೆಚ್ಚುತ್ತಿದೆ. ಹಿಂದು ಪರ ಸಂಘಟನೆಗಳು ಧೈರ್ಯವಿದ್ದರೆ ಲವ್ ಜಿಹಾದ್ ಕಾನೂನು ಜಾರಿಗಾಗಿ ಇವರ ಸರಕಾರದ ವಿರುದ್ಧವೇ ಪ್ರತಿಭಟನೆ ಮಾಡಲಿ ಎಂದು ಶಾಸಕ ಯು.ಟಿ. ಖಾದರ್ ಸವಾಲ್ ಹಾಕಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಖಾದರ್, ಲವ್ ಜಿಹಾದ್ ಬಗ್ಗೆ ಸುದ್ದಿಗೋಷ್ಟಿ ಕರೆದು ಪೊಲೀಸರಿಗೆ ಸವಾಲು ಹಾಕುತ್ತಾರೆ. ಲವ್ ಜಿಹಾದ್ ಕಾನೂನು ತರುತ್ತೇವೆಂದು ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಕಾರ್ಯಕಾರಿಣಿ ಮಾಡಿ ಹೇಳಿಕೊಂಡಿದ್ದ ಬಿಜೆಪಿ ಸರ್ಕಾರ ಆನಂತರ ಸುಮ್ಮನಾಗಿದ್ದು ಯಾಕೆ..? ಇವರಿಗೆ ಲವ್ ಜಿಹಾದ್ ವಿಚಾರದಲ್ಲಿ ಕಾನೂನು ತರಬಹುದಲ್ವಾ.. ಅದು ಬಿಟ್ಟು ಸಂಘಟನೆಗಳ ಹೆಸರಲ್ಲಿ ನೈತಿಕ ಪೊಲೀಸ್ ಕೆಲಸ ಮಾಡುತ್ತಿದ್ದಾರೆ. ಪೊಲೀಸರು ಸವಾಲು ಹಾಕುವ ಸಂಘಟನೆಗಳ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ. ಪೊಲೀಸರ ವೈಫಲ್ಯದ ಕಾರಣ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಹೋಗಿದೆ. ಕಾರ್ಯಕರ್ತರು ಬೀದಿಯಲ್ಲಿ ಹೊಡೆದಾಡುವಂತಾಗಿದೆ ಎಂದು ಖಾದರ್ ಹೇಳಿದರು.

ಪಬ್ ಜೀ ಯಂತಹ ವೈಲಂಟ್ ಆಗಿರುವ ವಿಡಿಯೋ ಗೇಮ್ ಗಳು ಸಣ್ಣ ಮಕ್ಕಳ ಮೇಲೆ ಪ್ರಭಾವ ಬೀರುತ್ತಿದೆ. ಬ್ಯಾನ್ ಆದ ಆಟಗಳು ಹೇಗೆ ಮತ್ತೆ ಚಾಲ್ತಿಯಲ್ಲಿವೆ, ಗೊತ್ತಿಲ್ಲ. ಒಂದ್ಕಡೆ ಸರಕಾರ ಬ್ಯಾನ್ ಮಾಡಿದೆ ಅಂತಾರೆ, ಇಲ್ಲಿ ಮಕ್ಕಳು ಅದನ್ನೇ ಆಡುತ್ತಾರೆ. ಈ ಗೇಮ್ ನಿಂದಾಗಿ ವಿದ್ಯಾರ್ಥಿಗಳ ಮನಸ್ಥಿತಿ ವಿಕಾರವಾಗುತ್ತಿದೆ. ವಿದ್ಯಾರ್ಥಿಗಳು, ಯುವಕರು ಈ ವಿಡಿಯೋ ಗೇಮ್ ಆಟಕ್ಕೆ ಅಡಿಕ್ಟ್ ಆಗುತ್ತಿದ್ದಾರೆ. ಮಕ್ಕಳ ವ್ಯಕ್ತಿತ್ವ ವೈಲೆಂಟ್ ಆಗುತ್ತಿದೆ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರಕಾರಗಳು ತಕ್ಷಣವೇ ಪಬ್ ಜಿಯಂತಹ ಆನ್ಲೈನ್ ಗೇಮ್ ಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿದರು.
U T Khader slams Bajrang Dal for violence in the name of Love Jihad. The organisation should fight for law but not to take law in their hands slamed Khader in Mangalore.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm