ಬ್ರೇಕಿಂಗ್ ನ್ಯೂಸ್
07-04-21 05:42 pm Mangalore Correspondent ಕರಾವಳಿ
ಮಂಗಳೂರು, ಎ.7: ಕುಲಪತಿಯಾಗಲು ಲಂಚ ನೀಡಿದ್ದಾರೆ ಎನ್ನಲಾದ ಕೋಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ಪ್ರೊಫೆಸರ್ ಜಯಶಂಕರ್ ಅವರನ್ನು ಡಿಮೋಶನ್ ಮಾಡಲಾಗಿದೆ. ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜು ಅಭಿವೃದ್ಧಿ ಸಮಿತಿಯ ನಿರ್ದೇಶಕ ಸ್ಥಾನದಿಂದ ಜಯಶಂಕರ್ ಅವರನ್ನು ಕಿತ್ತು ಹಾಕಲಾಗಿದೆ. ಆ ಸ್ಥಾನಕ್ಕೆ ಫಿಸಿಕ್ಸ್ ವಿಭಾಗದಲ್ಲಿ ಪ್ರೊಫೆಸರ್ ಆಗಿರುವ ರವೀಂದ್ರಾಚಾರಿ ಎಂಬವರನ್ನು ನಿಯೋಜಿಸಲಾಗಿದೆ.
ಮೂಲತಃ ಮಡಿಕೇರಿಯವರಾದ ಪ್ರೊಫೆಸರ್ ಎಂ. ಜಯಶಂಕರ್, ವಿವೇಕ್ ಆಚಾರ್ಯ ಎಂಬಾತನ ಮೂಲಕ ರಾಮಸೇನೆಯ ರಾಜ್ಯಾಧ್ಯಕ್ಷ ಪ್ರಸಾದ್ ಅತ್ತಾವರ ಪರಿಚಯ ಮಾಡಿಕೊಂಡಿದ್ದರು. ಈ ವೇಳೆ, ಮಂಗಳೂರು ಅಥವಾ ರಾಯಚೂರು ವಿವಿಯಲ್ಲಿ ಕುಲಪತಿ ಹುದ್ದೆ ಕೊಡಿಸುವ ಮಾತುಕತೆ ನಡೆದಿತ್ತು. ಇದಕ್ಕಾಗಿ 30 ಲಕ್ಷ ರೂ. ಡೀಲ್ ಆಗಿತ್ತು ಎನ್ನಲಾಗುತ್ತಿದ್ದು, ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ 10 ಲಕ್ಷ ನೀಡಿದ್ದರು ಎನ್ನಲಾಗಿದೆ.

ಬಳಿಕ ಹಣ ಹಿಂತಿರುಗಿಸುವಂತೆ ಜೈಶಂಕರ್ ಕೇಳಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಪ್ರಸಾದ್ ಅತ್ತಾವರ ಜೊತೆಗೆ ಮಾತುಕತೆ ನಡೆಸಿದ್ದರು. ಆದರೆ, ಬೆಂಗಳೂರಿನ ವ್ಯಕ್ತಿ ಹಣ ಹಿಂತಿರುಗಿಸಲು ನಿರಾಕರಿಸಿದ್ದಾರೆ ಎನ್ನಲಾಗಿದ್ದು, ಪ್ರೊಫೆಸರ್ ಕಂಕನಾಡಿ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಪ್ರಸಾದ್ ಅತ್ತಾವರನನ್ನು ಬಂಧಿಸಿದ್ದರು. ಬೆಂಗಳೂರಿನ ವ್ಯಕ್ತಿಯನ್ನು ಬಂಧಿಸಿಲ್ಲ. ಪ್ರಸಾದ್ ಅತ್ತಾವರ ಸಿಎಂ ಯಡ್ಯೂರಪ್ಪ ಜೊತೆಗೆ ನಿಕಟ ನಂಟು ಇರಿಸಿಕೊಂಡಿದ್ದ ವ್ಯಕ್ತಿ. ಎಫ್ಐಆರ್ ಆದ ಕೂಡಲೇ ಬಂಧಿಸಿರುವುದರ ಹಿಂದೆ ಮಂಗಳೂರಿನ ರಾಜಕೀಯ ಮುಖಂಡರ ದ್ವೇಷದ ರಾಜಕಾರಣ ಇದೆಯೆಂಬ ಆರೋಪಗಳು ಕೇಳಿಬರುತ್ತಿವೆ.
ಪ್ರಸಾದ್ ಅತ್ತಾವರ ಬಂಧನದ ಬಳಿಕ ಲಂಚ ನೀಡಿದ್ದ ಪ್ರೊಫೆಸರ್ ವಿರುದ್ಧ ಕ್ರಮ ತೆಗೆದುಕೊಳ್ತೀರಾ ಎಂದು ಪೊಲೀಸ್ ಕಮಿಷನರ್ ಅವರನ್ನು ಪ್ರಶ್ನೆ ಮಾಡಿದ್ದಕ್ಕೆ, ನಾವು ಏಕ್ಷನ್ ತಗೊಳ್ಳಲು ಬರಲ್ಲ. ವಿವಿಯ ಕುಲಪತಿಗೆ ನಾವು ಎಫ್ಐಆರ್ ಆಗಿರುವ ಪ್ರತಿಯನ್ನು ಫಾರ್ವರ್ಡ್ ಮಾಡುತ್ತೇವೆ. ಕುಲಪತಿಯಷ್ಟೇ ಕ್ರಮ ತೆಗೆದುಕೊಳ್ಳಬಹುದು ಎಂದು ಹೇಳಿದ್ದರು. ಈ ಬೆಳವಣಿಗೆಯ ಬಳಿಕ ಮಂಗಳೂರು ವಿವಿಯ ಸಿಂಡಿಕೇಟ್ ಸಭೆಯಲ್ಲಿ ಪ್ರೊಫೆಸರ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯ ನಡೆದಿತ್ತು. ಪ್ರೊಫೆಸರ್ ಆಗಿರುವ ವ್ಯಕ್ತಿಗೆ ನೋಟೀಸ್ ಕೂಡ ನೀಡಲಾಗಿತ್ತು. ಇದೇ ಎಪ್ರಿಲ್ 9ರಂದು ಸಿಂಡಿಕೇಟ್ ಸಭೆ ನಡೆಯಲಿದ್ದು, ಯಾವ ನಿರ್ಧಾರ ಕೈಗೊಳ್ಳುತ್ತಾರೆಂದು ನೋಡಬೇಕು.
Mangalore Professor Jayashanakr who alleged prasad attavar of cheating suspended from his post at university. The professor had alleged that ram sena chief had cheated him of 16 lakhs.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm