ಬ್ರೇಕಿಂಗ್ ನ್ಯೂಸ್
09-04-21 03:52 pm Mangalore Correspondent ಕರಾವಳಿ
ಉಳ್ಳಾಲ, ಎ.9 : ತ್ರಿಬಲ್ ರೈಡ್ ನಲ್ಲಿದ್ದ ಯುವಕರ ಬೈಕೊಂದು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕಿಡ್ ಆಗಿ ಎದುರಿನಿಂದ ಬರುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು ಮತ್ತಿಬ್ಬರು ಗಂಭೀರ ಗಾಯಗೊಂಡ ಘಟನೆ ಕುತ್ತಾರು ಪದವಿನ ಕೊರಗಜ್ಜನ ಕಟ್ಟೆ ಬಳಿ ನಡೆದಿದೆ.

ಬೈಕಲ್ಲಿ ಸಹ ಸವಾರನಾಗಿ ಸಂಚರಿಸುತ್ತಿದ್ದ ಪೊಳಲಿ ಕೊಳತ್ತಮಜಲು ನಿವಾಸಿ ಮಹಮ್ಮದ್ ಶಾಫಿ (20)ಮೃತ ಪಟ್ಟ ಯುವಕ. ನಿನ್ನೆ ಮಧ್ಯಾಹ್ನ ಕುತ್ತಾರು ಆದಿ ಸ್ಥಳ ಕೊರಗಜ್ಜನ ಕಟ್ಟೆಯ ಬಳಿ ಕುತ್ತಾರಿನಿಂದ ಎಲಿಯಾರ್ ಪದವಿಗೆ ಮೂವರನ್ನು ಕುಳ್ಳಿರಿಸಿಕೊಂಡು ಧಾವಿಸುತ್ತಿದ್ದ ಬೈಕ್ ಸವಾರ ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಖಾಸಗಿ 44 ರೂಟ್ ನಂಬರ್ ಬಸ್ಸಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಪರಿಣಾಮ ಬೈಕಲ್ಲಿದ್ದ ಮೂವರು ರಸ್ತೆಗೆಸೆಯಲ್ಪಟ್ಟು ಗಂಭೀರ ಸ್ಥಿತಿಯಲ್ಲಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ತಲೆಗೆ ಗಂಭೀರ ಗಾಯಗೊಂಡಿದ್ದ ಬೈಕ್ ಸಹಸವಾರ ಮಹಮ್ಮದ್ ಶಾಫಿ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಸಹಸವಾರ ರಾಣಿಪುರ ನಿವಾಸಿ ಮಹಮ್ಮದ್ ಇಮ್ರಾನ್ (20) ಮತ್ತು ಬೈಕ್ ಚಾಲಕ ಕಲ್ಲಡ್ಕ ನಿವಾಸಿ ಮಹಮ್ಮದ್ ಮೌಷಿನ್ (23)ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತ ಯುವಕನ ಸಹಿತ ಬೈಕಲ್ಲಿ ಸಂಚರಿಸುತ್ತಿದ್ದ ಮೂರು ಮಂದಿ ಯುವಕರು ಹೆಲ್ಮೆಟ್ ಧರಿಸಿರಲಿಲ್ಲವೆಂದು ತಿಳಿದು ಬಂದಿದೆ. ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A triple ride kills one in an accident after the bike got skid and rammed into the bus at Kuthar in Mangalore. The deceased has been identified as Shaffi. The other two are said to be out of danger
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm