ಬ್ರೇಕಿಂಗ್ ನ್ಯೂಸ್
09-04-21 04:05 pm Mangalore Correspondent ಕರಾವಳಿ
ಮಂಗಳೂರು, ಎ.9: ಕೆಎಸ್ಸಾರ್ಟಿಸಿ ನೌಕರರ ಮುಷ್ಕರ ಮುಂದುವರಿದಿರುವಾಗಲೇ ಮಂಗಳೂರು ವಿಭಾಗದಲ್ಲಿ ನಿಧಾನವಾಗಿ ಬಸ್ಸುಗಳು ರಸ್ತೆಗೆ ಇಳಿಯತೊಡಗಿವೆ. ನಿಗಮದಲ್ಲಿ ನಿವೃತ್ತರಾದ 62 ವರ್ಷದ ಒಳಗಿನ ಸಿಬ್ಬಂದಿಯನ್ನು ಕರೆಸಿಕೊಂಡು ಬಸ್ ಚಾಲನೆ ಮಾಡಲು ಆರಂಭಿಸಿದೆ. ಸಂಸ್ಥೆಯ ತುರ್ತು ಕರೆಗೆ ಓಗೊಟ್ಟು ನಿವೃತ್ತ ನೌಕರರು ಡ್ಯೂಟಿ ಮಾಡಲು ಮುಂದಾಗುತ್ತಿದ್ದಾರೆ.

ಬೇಡಿಕೆ ಈಡೇರಿಸುವ ತನಕ ಮುಷ್ಕರ ಕೈಬಿಡುವುದಿಲ್ಲ ಎಂದು ಸಾರಿಗೆ ನೌಕರರ ಒಕ್ಕೂಟ ಹಠ ಹಿಡಿದು ಕುಳಿತಿದ್ದರೆ, ರಾಜ್ಯ ಸರ್ಕಾರ ಕೂಡ ತನ್ನ ಪಟ್ಟನ್ನು ಸಡಿಲಿಸುತ್ತಿಲ್ಲ. ಈ ನಡುವೆ ಕೆಎಸ್ಸಾರ್ಟಿಸಿಯಿಂದ ಪ್ರತ್ಯೇಕ ವ್ಯವಸ್ಥೆ ಮಾಡಿಕೊಂಡು ಬಸ್ ಗಳನ್ನು ಚಾಲನೆಗೊಳಿಸಲು ಸರಕಾರ ಮುಂದಾಗಿದೆ. ಇದೇ ಕಾರಣಕ್ಕೆ ನಿವೃತ್ತ ನೌಕರರನ್ನು ಕೆಲಸಕ್ಕೆ ಕರೆಯಲಾಗಿದೆ. ಮಂಗಳೂರಿನಿಂದ ಬೆಂಗಳೂರು, ಮೈಸೂರು, ಕೇರಳದ ಕಾಸರಗೋಡು ಸೇರಿದಂತೆ ಕುಕ್ಕೆ ಸುಬ್ರಹ್ಮಣ್ಯ , ಧರ್ಮಸ್ಥಳಕ್ಕೆ ಬಸ್ ಗಳ ಸಂಚಾರ ಆರಂಭವಾಗಿದೆ. ಬೆಳಗ್ಗಿನಿಂದಲೇ ಪ್ರತೀ ರೂಟಿನಲ್ಲಿ ಕೆಲವಷ್ಟು ಬಸ್ ಗಳನ್ನು ರಸ್ತೆಗೆ ಇಳಿಸಲಾಗಿದೆ. ದೂರದ ಪ್ರಯಾಣಕ್ಕೆ ಸಾಗುವ ವೋಲ್ವೋ, ರಾಜಹಂಸ ಸೇರಿದಂತೆ ಒಟ್ಟು ನಾಲ್ಕು ಬಸ್ ಗಳು ಬೆಂಗಳೂರಿಗೆ ತೆರಳಿವೆ. ಮಂಗಳೂರಿನಿಂದ ಬೆಳಗ್ಗೆ 30 ರಷ್ಟು ಬಸ್ ಗಳು ವಿವಿಧ ರೂಟಿನಲ್ಲಿ ಸಂಚಾರ ನಡೆಸಿವೆ.

ನಿಗಮಗಳಲ್ಲಿ ಸೇವೆ ಸಲ್ಲಿಸಿ ಎರಡು ವರ್ಷದೊಳಗೆ ನಿವೃತ್ತಿಯಾಗಿರುವ 62 ವರ್ಷ ಮೀರದ ದೈಹಿಕವಾಗಿ ಶಕ್ತರಾಗಿರುವ ಚಾಲಕ ಹಾಗು ನಿರ್ವಾಹಕರಿಗೆ ಒಪ್ಪಂದದ ಆಧಾರದ ಮೇಲೆ ನೇಮಿಸಿಕೊಳ್ಳಲಾಗಿದೆ. ಇದೇ ರೀತಿ ಪುತ್ತೂರು, ಸುಬ್ರಹ್ಮಣ್ಯ ಡಿಪೋದಿಂದಲೂ ವಿವಿಧ ಕಡೆಗಳಿಗೆ ಬಸ್ ಸಂಚಾರ ಆರಂಭಗೊಂಡಿದೆ. ನಿವೃತ್ತರಾದ ಸಿಬಂದಿಗೆ ಗೌರವ ಧನ ರೂಪದಲ್ಲಿ ಚಾಲಕರಿಗೆ 800 ರೂ. ಮತ್ತು ನಿರ್ವಾಹಕರಿಗೆ 700 ರೂ. ದಿನಕ್ಕೆ ನೀಡುವುದಾಗಿ ಒಪ್ಪಂದ ಮಾಡಲಾಗಿದೆ.

ಈ ನಡುವೆ ನಿಯಮ ಉಲ್ಲಂಘಿಸಿರುವ 9 ಮಂದಿ ಸಾರಿಗೆ ಸಿಬ್ಬಂದಿ ಗಳ ಮೇಲೆ ಮಂಗಳೂರು ವಿಭಾಗದಲ್ಲಿ ಶಿಸ್ತು ಕ್ರಮ ಜರುಗಿಸಲಾಗಿದೆ. ತರಬೇತಿಯಲ್ಲಿದ್ದ ಚಾಲಕರು ಹಾಗು ನಿರ್ವಾಹಕರು ಕರ್ತವ್ಯಕ್ಕೆ ಹಾಜರಾಗುವಂತೆ ನೋಟಿಸ್ ನೀಡಿ ಬರ ಹೇಳಿದರೂ ಬಾರದೇ ಇರುವ ಸಿಬಂದಿಯ ವಿರುದ್ಧ ನಿರ್ಲಕ್ಷ್ಯ ತೋರಿದ ಕಾರಣಕ್ಕೆ 9 ಸಿಬ್ಬಂದಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗಿದೆ.

ಕೆ ಎಸ್ ಆರ್ ಟಿ ಸಿ ಯ ಕೆಲವು ಬಸ್ ಗಳು ಓಡಾಟ ಆರಂಭಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗ್ರಾಮೀಣ ಭಾಗದ ಜನರು ಸ್ವಲ್ಪ ನಿಟ್ಟುಸಿರು ಬಿಟ್ಟಿದ್ದಾರೆ. ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆ ಉಂಟಾಗಬಾರದು ಎಂಬ ಉದ್ದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತದ ಸೂಚನೆ ಮೇರೆಗೆ ಮಂಗಳೂರು ಮತ್ತು ಪುತ್ತೂರು ವಿಭಾಗದಲ್ಲಿ ಹೆಲ್ಪ್ ಡೆಸ್ಕ್ ರಚಿಸಲಾಗಿದೆ. ನಾಳೆ ಮತ್ತಷ್ಟು ಬಸ್ ಗಳು ರಸ್ತೆಗೆ ಇಳಿಯುವ ಸಾಧ್ಯತೆಯಿದೆ.
Retired Ksrtc staffs called to work in Depos as drivers and conductors go on strike in Mangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm