ಬ್ರೇಕಿಂಗ್ ನ್ಯೂಸ್
09-04-21 08:26 pm Mangaluru correspondent ಕರಾವಳಿ
ಮಂಗಳೂರು, ಎ.9 : ಮೂಡುಬಿದಿರೆಯ ಮಾರ್ಪಾಡಿ ಗ್ರಾಮದ ಆಲಂಗಾರು ಎಂಬಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ವಿಶೇಷ ಪೋಕ್ಸೋ ನ್ಯಾಯಾಲಯದಲ್ಲಿ ಅಪರಾಧ ಸಾಬೀತಾಗಿದ್ದು ಆರೋಪಿಗೆ ಶಿಕ್ಷೆ ಘೋಷಣೆ ಮಾಡಲಾಗಿದೆ.
![]()
ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1.10 ಲಕ್ಷ ರು. ದಂಡ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕನ್ನೆಹಳ್ಳಿ ನಿವಾಸಿ ಶಶಿ ಯಾನೆ
ಶಶಿಕುಮಾರ್ (29) ಶಿಕ್ಷೆಗೆ ಒಳಗಾದ ಅಪರಾಧಿ. ಮೂಡುಬಿದಿರೆಯಲ್ಲಿ ಫೈನಾನ್ಸ್ ಒಂದರಲ್ಲಿ ಪಿಗ್ಮಿ ಸಂಗ್ರಾಹಕನಾಗಿ ಕೆಲಸ ಮಾಡುತ್ತಿದ್ದ ಆರೋಪಿ, ತನ್ನ ದೊಡ್ಡಮ್ಮನ ಮಗಳಾದ ಅಕ್ಕನ ಮನೆಯಲ್ಲಿ ವಾಸ್ತವ್ಯವಿದ್ದ. ಅಲ್ಲಿಗೆ ಸಂಬಂಧಿಕಳಾಗಿರುವ ನೆರೆಮನೆಯ ಅಪ್ರಾಪ್ತ ಬಾಲಕಿ ಟಿವಿ ನೋಡಲು ಬರುತ್ತಿದ್ದಳು. ಆಕೆಯೊಂದಿಗೆ ಸಲುಗೆ ಬೆಳೆಸಿ, 2017ರ ನವೆಂಬರ್ನಲ್ಲಿ ಮನೆಯಲ್ಲಿ ಯಾರೂ ಇಲ್ಲದೇ ಇದ್ದಾಗ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದ. ಆಬಳಿಕ ಹಲವು ಬಾರಿ ಅತ್ಯಾಚಾರ ನಡೆಸಿದ್ದ ಎಂದು ಆರೋಪಿಸಲಾಗಿತ್ತು.
ಕೆಲವು ಸಮಯದ ಬಳಿಕ ಆಕೆಗೆ ವಿಪರೀತ ಸುಸ್ತು ಕಾಣಿಸಿಕೊಂಡಿದ್ದು, ವೈದ್ಯರಲ್ಲಿಗೆ ಕರೆದೊಯ್ದಾಗ ಆಕೆ ಗರ್ಭಿಣಿಯಾಗಿರುವುದು ತಿಳಿದುಬಂದಿತ್ತ. ಬಳಿಕ ಆಕೆಯನ್ನು ವಿಚಾರಿಸಿದಾಗ ಶಶಿಕುಮಾರ್ ಇದಕ್ಕೆ ಕಾರಣ ಎಂದು ಹೇಳಿದ್ದಳು. ಈ ಬಗ್ಗೆ ಆಕೆಯ ತಂದೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ 2018 ಜೂ.26ರಂದು ದೂರು ನೀಡಿದ್ದರು.
![]()
ಆರೋಪಿಯನ್ನು ಬಂಧಿಸಿ ಅಂದಿನ ಇನ್ಸ್ಪೆಕ್ಟರ್ ರಾಮಚಂದ್ರ ನಾಯ್ಕ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸಂತ್ರಸ್ತ ಯುವತಿಯ ಮಗು ಹಾಗೂ ಶಶಿಕುಮಾರ್ನ ಡಿಎನ್ಎ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪೂರಕ ವರದಿ ಬಂದಿದೆ. 13 ಮಂದಿ ಸಾಕ್ಷಿ ಹೇಳಿದ್ದರು. 25 ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿದೆ. ನ್ಯಾಯಾಧೀಶರಾದ ಸಾವಿತ್ರಿ ವೆಂಕಟರಮಣ ಅವರು ವಾದ- ಪ್ರತಿವಾದ ಆಲಿಸಿ ತೀರ್ಪು ಪ್ರಕಟಿಸಿದ್ದಾರೆ. ದಂಡದ ಮೊತ್ತದಲ್ಲಿ ೧ ಲಕ್ಷ ರು. ಸಂತ್ರಸ್ತೆಗೆ ನೀಡಬೇಕು. ಹಾಗೂ ಕಾನೂನು ಸೇವಾ ಪ್ರಾಧಿಕಾರದ ಮೂಲಕ 2 ಲಕ್ಷ ರು. ಪರಿಹಾರ ನೀಡಲು ನ್ಯಾಯಾಲಯ ಆದೇಶಿಸಿದೆ. ಸರ್ಕಾರದ
ಪರವಾಗಿ ಸರ್ಕಾರಿ ಅಭಿಯೋಜಕ ಸಿ.ವೆಂಕಟರಮಣ ಸ್ವಾಮಿ ವಾದಿಸಿದ್ದರು.
Mangalore Girl raped in Moodbidri court sentences 10 years jail term to accused Shashikumar (29).
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm