ಬ್ರೇಕಿಂಗ್ ನ್ಯೂಸ್
09-04-21 08:36 pm Mangaluru correspondent ಕರಾವಳಿ
ಮಂಗಳೂರು, ಎ.9: ಕುಲಪತಿ ಹುದ್ದೆಗಾಗಿ ಲಂಚ ನೀಡಿದ್ದ ಆರೋಪದಲ್ಲಿ ಮಂಗಳೂರು ವಿವಿಯ ಪ್ರೊಫೆಸರ್ ಜಯಶಂಕರ್ ಅವರನ್ನು ಅಮಾನತು ಮಾಡಲಾಗಿದೆ.
ಮಂಗಳೂರು ವಿವಿಯಲ್ಲಿ ಇಂದು ಸಿಂಡಿಕೇಟ್ ಸಭೆ ನಡೆದಿದ್ದು ಸಭೆಯಲ್ಲಿ ಆರೋಪಿತ ಪ್ರೊಫೆಸರ್ ಜಯಶಂಕರ್ ಅವರನ್ನು ಆರು ತಿಂಗಳ ಕಾಲ ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಅಲ್ಲದೆ ನಿವೃತ್ತ ನ್ಯಾಯಾಧೀಶರ ಮೂಲಕ ಪ್ರಕರಣದ ತನಿಖೆ ನಡೆಸಲು ನಿರ್ಧರಿಸಲಾಗಿದೆ.

ಮಂಗಳೂರು ಅಥವಾ ರಾಯಚೂರು ವಿಶ್ವವಿದ್ಯಾನಿಲಯದಲ್ಲಿ ಕುಲಪತಿ ಹುದ್ದೆ ಕೊಡಿಸುವ ವಿಚಾರದಲ್ಲಿ ಪ್ರೊ. ಜಯಶಂಕರ್, ರಾಮಸೇನೆಯ ರಾಜ್ಯಾಧ್ಯಕ್ಷ ಪ್ರಸಾದ ಅತ್ತಾವರ ಮೂಲಕ 17.5 ಲಕ್ಷ ರೂ. ನೀಡಿದ್ದರು. ಹಣ ಕೊಟ್ಟು ವರ್ಷ ಕಳೆದರೂ, ಕುಲಪತಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಜಯಶಂಕರ್ ಮಂಗಳೂರಿನ ಕಂಕನಾಡಿ ಠಾಣೆಗೆ ದೂರು ನೀಡಿದ್ದರು. ದೂರಿನಂತೆ ತನಿಖೆ ನಡೆಸಿದ ಪೊಲೀಸರು ಪ್ರಸಾದ್ ಅತ್ತಾವರನನ್ನು ಬಂಧಿಸಿದ್ದರು.
ಪ್ರಕರಣ ಬೆಳಕಿಗೆ ಬರುತ್ತಲೇ ಕುಲಪತಿ ಹುದ್ದೆಗಾಗಿ ಲಂಚ ನೀಡಿದ್ದ ಸರಕಾರಿ ನೌಕರನಾಗಿರುವ ಪ್ರೊಫೆಸರ್ ಅನ್ನು ಅಮಾನತುಗೊಳಿಸಬೇಕೆಂದು ಆಗ್ರಹ ಕೇಳಿಬಂದಿತ್ತು. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆ, ಒತ್ತಾಯವೂ ಕೇಳಿಬಂದಿತ್ತು. ಈ ನಡುವೆ, ಪ್ರೊಫೆಸರ್ ಜೈಶಂಕರ್ ಗೆ ವಿವಿಯಿಂದ ಸ್ಪಷ್ಟನೆ ಕೇಳಿ ನೋಟಿಸ್ ನೀಡಲಾಗಿತ್ತು. ನೋಟೀಸಿಗೆ ವಿವಿಯ ಕುಲಪತಿ ಪ್ರೊ. ಯಡಪಡಿತ್ತಾಯರಿಗೆ ಪ್ರೊಫೆಸರ್ ಉತ್ತರವನ್ನೂ ನೀಡಿದ್ದರು. ನೋಟೀಸಿಗೆ ನೀಡಿದ್ದ ಉತ್ತರ ಮತ್ತು ಒಟ್ಟು ಪ್ರಕರಣ ಸಿಂಡಿಕೇಟ್ ಸಭೆಯಲ್ಲಿ ಇಂದು ಚರ್ಚೆಗೆ ಬಂದಿದೆ. ಒಬ್ಬ ಗೌರವಾನ್ವಿತ ಪ್ರೊಫೆಸರ್ ಆಗಿದ್ದುಕೊಂಡು ಕುಲಪತಿಯಾಗಲು ಲಂಚ ನೀಡಿರುವುದು ಪೊಲೀಸರಿಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಸಾಬೀತಾಗಿದ್ದಲ್ಲದೆ ಮಂಗಳೂರು ವಿವಿಯ ಗೌರವಕ್ಕೆ ಧಕ್ಕೆ ತಂದಿದ್ದಾರೆಂಬ ನೆಲೆಯಲ್ಲಿ ಅವರನ್ನು ಆರು ತಿಂಗಳ ಕಾಲ ಅಮಾನತು ಮಾಡಲು ಸಿಂಡಿಕೇಟ್ ಮಂಡಳಿ ಸಭೆ ನಿರ್ಧರಿಸಿದೆ.
Prof M Jayashanakar who had filed a cheating case against Prasad Attavar has been suspended by Managalore University Syndicate bench over bribe charges.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 08:02 pm
Mangalore Correspondent
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm