ಬ್ರೇಕಿಂಗ್ ನ್ಯೂಸ್
09-04-21 08:36 pm Mangaluru correspondent ಕರಾವಳಿ
ಮಂಗಳೂರು, ಎ.9: ಕುಲಪತಿ ಹುದ್ದೆಗಾಗಿ ಲಂಚ ನೀಡಿದ್ದ ಆರೋಪದಲ್ಲಿ ಮಂಗಳೂರು ವಿವಿಯ ಪ್ರೊಫೆಸರ್ ಜಯಶಂಕರ್ ಅವರನ್ನು ಅಮಾನತು ಮಾಡಲಾಗಿದೆ.
ಮಂಗಳೂರು ವಿವಿಯಲ್ಲಿ ಇಂದು ಸಿಂಡಿಕೇಟ್ ಸಭೆ ನಡೆದಿದ್ದು ಸಭೆಯಲ್ಲಿ ಆರೋಪಿತ ಪ್ರೊಫೆಸರ್ ಜಯಶಂಕರ್ ಅವರನ್ನು ಆರು ತಿಂಗಳ ಕಾಲ ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಅಲ್ಲದೆ ನಿವೃತ್ತ ನ್ಯಾಯಾಧೀಶರ ಮೂಲಕ ಪ್ರಕರಣದ ತನಿಖೆ ನಡೆಸಲು ನಿರ್ಧರಿಸಲಾಗಿದೆ.

ಮಂಗಳೂರು ಅಥವಾ ರಾಯಚೂರು ವಿಶ್ವವಿದ್ಯಾನಿಲಯದಲ್ಲಿ ಕುಲಪತಿ ಹುದ್ದೆ ಕೊಡಿಸುವ ವಿಚಾರದಲ್ಲಿ ಪ್ರೊ. ಜಯಶಂಕರ್, ರಾಮಸೇನೆಯ ರಾಜ್ಯಾಧ್ಯಕ್ಷ ಪ್ರಸಾದ ಅತ್ತಾವರ ಮೂಲಕ 17.5 ಲಕ್ಷ ರೂ. ನೀಡಿದ್ದರು. ಹಣ ಕೊಟ್ಟು ವರ್ಷ ಕಳೆದರೂ, ಕುಲಪತಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಜಯಶಂಕರ್ ಮಂಗಳೂರಿನ ಕಂಕನಾಡಿ ಠಾಣೆಗೆ ದೂರು ನೀಡಿದ್ದರು. ದೂರಿನಂತೆ ತನಿಖೆ ನಡೆಸಿದ ಪೊಲೀಸರು ಪ್ರಸಾದ್ ಅತ್ತಾವರನನ್ನು ಬಂಧಿಸಿದ್ದರು.
ಪ್ರಕರಣ ಬೆಳಕಿಗೆ ಬರುತ್ತಲೇ ಕುಲಪತಿ ಹುದ್ದೆಗಾಗಿ ಲಂಚ ನೀಡಿದ್ದ ಸರಕಾರಿ ನೌಕರನಾಗಿರುವ ಪ್ರೊಫೆಸರ್ ಅನ್ನು ಅಮಾನತುಗೊಳಿಸಬೇಕೆಂದು ಆಗ್ರಹ ಕೇಳಿಬಂದಿತ್ತು. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆ, ಒತ್ತಾಯವೂ ಕೇಳಿಬಂದಿತ್ತು. ಈ ನಡುವೆ, ಪ್ರೊಫೆಸರ್ ಜೈಶಂಕರ್ ಗೆ ವಿವಿಯಿಂದ ಸ್ಪಷ್ಟನೆ ಕೇಳಿ ನೋಟಿಸ್ ನೀಡಲಾಗಿತ್ತು. ನೋಟೀಸಿಗೆ ವಿವಿಯ ಕುಲಪತಿ ಪ್ರೊ. ಯಡಪಡಿತ್ತಾಯರಿಗೆ ಪ್ರೊಫೆಸರ್ ಉತ್ತರವನ್ನೂ ನೀಡಿದ್ದರು. ನೋಟೀಸಿಗೆ ನೀಡಿದ್ದ ಉತ್ತರ ಮತ್ತು ಒಟ್ಟು ಪ್ರಕರಣ ಸಿಂಡಿಕೇಟ್ ಸಭೆಯಲ್ಲಿ ಇಂದು ಚರ್ಚೆಗೆ ಬಂದಿದೆ. ಒಬ್ಬ ಗೌರವಾನ್ವಿತ ಪ್ರೊಫೆಸರ್ ಆಗಿದ್ದುಕೊಂಡು ಕುಲಪತಿಯಾಗಲು ಲಂಚ ನೀಡಿರುವುದು ಪೊಲೀಸರಿಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಸಾಬೀತಾಗಿದ್ದಲ್ಲದೆ ಮಂಗಳೂರು ವಿವಿಯ ಗೌರವಕ್ಕೆ ಧಕ್ಕೆ ತಂದಿದ್ದಾರೆಂಬ ನೆಲೆಯಲ್ಲಿ ಅವರನ್ನು ಆರು ತಿಂಗಳ ಕಾಲ ಅಮಾನತು ಮಾಡಲು ಸಿಂಡಿಕೇಟ್ ಮಂಡಳಿ ಸಭೆ ನಿರ್ಧರಿಸಿದೆ.
Prof M Jayashanakar who had filed a cheating case against Prasad Attavar has been suspended by Managalore University Syndicate bench over bribe charges.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm