ಬ್ರೇಕಿಂಗ್ ನ್ಯೂಸ್
09-04-21 08:36 pm Mangaluru correspondent ಕರಾವಳಿ
ಮಂಗಳೂರು, ಎ.9: ಕುಲಪತಿ ಹುದ್ದೆಗಾಗಿ ಲಂಚ ನೀಡಿದ್ದ ಆರೋಪದಲ್ಲಿ ಮಂಗಳೂರು ವಿವಿಯ ಪ್ರೊಫೆಸರ್ ಜಯಶಂಕರ್ ಅವರನ್ನು ಅಮಾನತು ಮಾಡಲಾಗಿದೆ.
ಮಂಗಳೂರು ವಿವಿಯಲ್ಲಿ ಇಂದು ಸಿಂಡಿಕೇಟ್ ಸಭೆ ನಡೆದಿದ್ದು ಸಭೆಯಲ್ಲಿ ಆರೋಪಿತ ಪ್ರೊಫೆಸರ್ ಜಯಶಂಕರ್ ಅವರನ್ನು ಆರು ತಿಂಗಳ ಕಾಲ ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಅಲ್ಲದೆ ನಿವೃತ್ತ ನ್ಯಾಯಾಧೀಶರ ಮೂಲಕ ಪ್ರಕರಣದ ತನಿಖೆ ನಡೆಸಲು ನಿರ್ಧರಿಸಲಾಗಿದೆ.

ಮಂಗಳೂರು ಅಥವಾ ರಾಯಚೂರು ವಿಶ್ವವಿದ್ಯಾನಿಲಯದಲ್ಲಿ ಕುಲಪತಿ ಹುದ್ದೆ ಕೊಡಿಸುವ ವಿಚಾರದಲ್ಲಿ ಪ್ರೊ. ಜಯಶಂಕರ್, ರಾಮಸೇನೆಯ ರಾಜ್ಯಾಧ್ಯಕ್ಷ ಪ್ರಸಾದ ಅತ್ತಾವರ ಮೂಲಕ 17.5 ಲಕ್ಷ ರೂ. ನೀಡಿದ್ದರು. ಹಣ ಕೊಟ್ಟು ವರ್ಷ ಕಳೆದರೂ, ಕುಲಪತಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಜಯಶಂಕರ್ ಮಂಗಳೂರಿನ ಕಂಕನಾಡಿ ಠಾಣೆಗೆ ದೂರು ನೀಡಿದ್ದರು. ದೂರಿನಂತೆ ತನಿಖೆ ನಡೆಸಿದ ಪೊಲೀಸರು ಪ್ರಸಾದ್ ಅತ್ತಾವರನನ್ನು ಬಂಧಿಸಿದ್ದರು.
ಪ್ರಕರಣ ಬೆಳಕಿಗೆ ಬರುತ್ತಲೇ ಕುಲಪತಿ ಹುದ್ದೆಗಾಗಿ ಲಂಚ ನೀಡಿದ್ದ ಸರಕಾರಿ ನೌಕರನಾಗಿರುವ ಪ್ರೊಫೆಸರ್ ಅನ್ನು ಅಮಾನತುಗೊಳಿಸಬೇಕೆಂದು ಆಗ್ರಹ ಕೇಳಿಬಂದಿತ್ತು. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆ, ಒತ್ತಾಯವೂ ಕೇಳಿಬಂದಿತ್ತು. ಈ ನಡುವೆ, ಪ್ರೊಫೆಸರ್ ಜೈಶಂಕರ್ ಗೆ ವಿವಿಯಿಂದ ಸ್ಪಷ್ಟನೆ ಕೇಳಿ ನೋಟಿಸ್ ನೀಡಲಾಗಿತ್ತು. ನೋಟೀಸಿಗೆ ವಿವಿಯ ಕುಲಪತಿ ಪ್ರೊ. ಯಡಪಡಿತ್ತಾಯರಿಗೆ ಪ್ರೊಫೆಸರ್ ಉತ್ತರವನ್ನೂ ನೀಡಿದ್ದರು. ನೋಟೀಸಿಗೆ ನೀಡಿದ್ದ ಉತ್ತರ ಮತ್ತು ಒಟ್ಟು ಪ್ರಕರಣ ಸಿಂಡಿಕೇಟ್ ಸಭೆಯಲ್ಲಿ ಇಂದು ಚರ್ಚೆಗೆ ಬಂದಿದೆ. ಒಬ್ಬ ಗೌರವಾನ್ವಿತ ಪ್ರೊಫೆಸರ್ ಆಗಿದ್ದುಕೊಂಡು ಕುಲಪತಿಯಾಗಲು ಲಂಚ ನೀಡಿರುವುದು ಪೊಲೀಸರಿಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಸಾಬೀತಾಗಿದ್ದಲ್ಲದೆ ಮಂಗಳೂರು ವಿವಿಯ ಗೌರವಕ್ಕೆ ಧಕ್ಕೆ ತಂದಿದ್ದಾರೆಂಬ ನೆಲೆಯಲ್ಲಿ ಅವರನ್ನು ಆರು ತಿಂಗಳ ಕಾಲ ಅಮಾನತು ಮಾಡಲು ಸಿಂಡಿಕೇಟ್ ಮಂಡಳಿ ಸಭೆ ನಿರ್ಧರಿಸಿದೆ.
Prof M Jayashanakar who had filed a cheating case against Prasad Attavar has been suspended by Managalore University Syndicate bench over bribe charges.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm