ಬ್ರೇಕಿಂಗ್ ನ್ಯೂಸ್
09-04-21 08:36 pm Mangaluru correspondent ಕರಾವಳಿ
ಮಂಗಳೂರು, ಎ.9: ಕುಲಪತಿ ಹುದ್ದೆಗಾಗಿ ಲಂಚ ನೀಡಿದ್ದ ಆರೋಪದಲ್ಲಿ ಮಂಗಳೂರು ವಿವಿಯ ಪ್ರೊಫೆಸರ್ ಜಯಶಂಕರ್ ಅವರನ್ನು ಅಮಾನತು ಮಾಡಲಾಗಿದೆ.
ಮಂಗಳೂರು ವಿವಿಯಲ್ಲಿ ಇಂದು ಸಿಂಡಿಕೇಟ್ ಸಭೆ ನಡೆದಿದ್ದು ಸಭೆಯಲ್ಲಿ ಆರೋಪಿತ ಪ್ರೊಫೆಸರ್ ಜಯಶಂಕರ್ ಅವರನ್ನು ಆರು ತಿಂಗಳ ಕಾಲ ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಅಲ್ಲದೆ ನಿವೃತ್ತ ನ್ಯಾಯಾಧೀಶರ ಮೂಲಕ ಪ್ರಕರಣದ ತನಿಖೆ ನಡೆಸಲು ನಿರ್ಧರಿಸಲಾಗಿದೆ.

ಮಂಗಳೂರು ಅಥವಾ ರಾಯಚೂರು ವಿಶ್ವವಿದ್ಯಾನಿಲಯದಲ್ಲಿ ಕುಲಪತಿ ಹುದ್ದೆ ಕೊಡಿಸುವ ವಿಚಾರದಲ್ಲಿ ಪ್ರೊ. ಜಯಶಂಕರ್, ರಾಮಸೇನೆಯ ರಾಜ್ಯಾಧ್ಯಕ್ಷ ಪ್ರಸಾದ ಅತ್ತಾವರ ಮೂಲಕ 17.5 ಲಕ್ಷ ರೂ. ನೀಡಿದ್ದರು. ಹಣ ಕೊಟ್ಟು ವರ್ಷ ಕಳೆದರೂ, ಕುಲಪತಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಜಯಶಂಕರ್ ಮಂಗಳೂರಿನ ಕಂಕನಾಡಿ ಠಾಣೆಗೆ ದೂರು ನೀಡಿದ್ದರು. ದೂರಿನಂತೆ ತನಿಖೆ ನಡೆಸಿದ ಪೊಲೀಸರು ಪ್ರಸಾದ್ ಅತ್ತಾವರನನ್ನು ಬಂಧಿಸಿದ್ದರು.
ಪ್ರಕರಣ ಬೆಳಕಿಗೆ ಬರುತ್ತಲೇ ಕುಲಪತಿ ಹುದ್ದೆಗಾಗಿ ಲಂಚ ನೀಡಿದ್ದ ಸರಕಾರಿ ನೌಕರನಾಗಿರುವ ಪ್ರೊಫೆಸರ್ ಅನ್ನು ಅಮಾನತುಗೊಳಿಸಬೇಕೆಂದು ಆಗ್ರಹ ಕೇಳಿಬಂದಿತ್ತು. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆ, ಒತ್ತಾಯವೂ ಕೇಳಿಬಂದಿತ್ತು. ಈ ನಡುವೆ, ಪ್ರೊಫೆಸರ್ ಜೈಶಂಕರ್ ಗೆ ವಿವಿಯಿಂದ ಸ್ಪಷ್ಟನೆ ಕೇಳಿ ನೋಟಿಸ್ ನೀಡಲಾಗಿತ್ತು. ನೋಟೀಸಿಗೆ ವಿವಿಯ ಕುಲಪತಿ ಪ್ರೊ. ಯಡಪಡಿತ್ತಾಯರಿಗೆ ಪ್ರೊಫೆಸರ್ ಉತ್ತರವನ್ನೂ ನೀಡಿದ್ದರು. ನೋಟೀಸಿಗೆ ನೀಡಿದ್ದ ಉತ್ತರ ಮತ್ತು ಒಟ್ಟು ಪ್ರಕರಣ ಸಿಂಡಿಕೇಟ್ ಸಭೆಯಲ್ಲಿ ಇಂದು ಚರ್ಚೆಗೆ ಬಂದಿದೆ. ಒಬ್ಬ ಗೌರವಾನ್ವಿತ ಪ್ರೊಫೆಸರ್ ಆಗಿದ್ದುಕೊಂಡು ಕುಲಪತಿಯಾಗಲು ಲಂಚ ನೀಡಿರುವುದು ಪೊಲೀಸರಿಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಸಾಬೀತಾಗಿದ್ದಲ್ಲದೆ ಮಂಗಳೂರು ವಿವಿಯ ಗೌರವಕ್ಕೆ ಧಕ್ಕೆ ತಂದಿದ್ದಾರೆಂಬ ನೆಲೆಯಲ್ಲಿ ಅವರನ್ನು ಆರು ತಿಂಗಳ ಕಾಲ ಅಮಾನತು ಮಾಡಲು ಸಿಂಡಿಕೇಟ್ ಮಂಡಳಿ ಸಭೆ ನಿರ್ಧರಿಸಿದೆ.
Prof M Jayashanakar who had filed a cheating case against Prasad Attavar has been suspended by Managalore University Syndicate bench over bribe charges.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm