ಬ್ರೇಕಿಂಗ್ ನ್ಯೂಸ್
09-04-21 09:51 pm Mangaluru correspondent ಕರಾವಳಿ
ಮಂಗಳೂರು, ಎ.9 : ರಾಜ್ಯ ಸರಕಾರದ ಸೂಚನೆಯಂತೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎ.10ರಿಂದ 20ರ ವರೆಗೆ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯ ವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮತ್ತು ಅವರ ಸಹಾಯಕರಿಗೆ ವೈದ್ಯಕೀಯ ಸೇವೆಗಾಗಿ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲ ಕಾರ್ಖಾನೆಗಳು/ಕಂಪನಿಗಳು/ಸಂಸ್ಥೆಗಳು ಯಥಾರೀತಿಯಲ್ಲಿ ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ. ಆದರೆ ಸಂಬಂಧಿಸಿದ ಕಾರ್ಮಿಕರು ಕರ್ಪ್ಯೂ ಅವಧಿಗೆ ಮುನ್ನವೇ ಕರ್ತವ್ಯದಲ್ಲಿ ಹಾಜರಿರಬೇಕು.

ದೂರಸಂಪರ್ಕ ಮತ್ತು ಅಂತರ್ಜಾಲ ಸೇವಾ ಸಂಸ್ಥೆಗಳು ಹಾಗೂ ಮಾಹಿತಿ ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ ಆಧಾರಿತ ಸಂಸ್ಥೆಗಳ ಸಿಬ್ಬಂದಿ ರಾತ್ರಿ ಪಾಳಿಯಲ್ಲಿ ಅಧಿಕೃತ ಗುರುತಿನ ಚೀಟಿ ಹೊಂದಿ ಸಂಚರಿಸಲು ಅನುಮತಿ ನೀಡಲಾಗಿದೆ.

ವೈದ್ಯಕೀಯ ಸೇವೆ ಮತ್ತು ತುರ್ತು ಚಟುವಟಿಕೆಗೆ ಮಾತ್ರ ಅನುಮತಿ ನೀಡಲಾಗಿದೆ. ಉಳಿದಂತೆ ಎಲ್ಲ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಅತ್ಯವಶ್ಯಕ ಸೇವೆಗಳನ್ನು ಒದಗಿಸುವಂತಹ ವಾಹನಗಳು, ಸರಕು ಸಾಗಣಿಕೆ ವಾಹನಗಳು, ಹೋಮ್ ಡೆಲಿವರಿ, ಇ-ಕಾಮರ್ಸ್ ಮತ್ತು ಖಾಲಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ರಾತ್ರಿ ವೇಳೆಯಲ್ಲಿನ ಬಸ್, ರೈಲು ಹಾಗೂ ವಿಮಾನದ ದೂರ ಪ್ರಯಾಣಕ್ಕೆ ಅನುಮತಿ ನೀಡಲಾಗಿದ್ದು, ಪ್ರಯಾಣಿಕರು ಮನೆಯಿಂದ ನಿಲ್ದಾಣಗಳಿಗೆ ಮತ್ತು ನಿಲ್ದಾಣಗಳಿಂದ ಮನೆಗೆ ಅಧಿಕೃತ ಟಿಕೆಟ್ಗಳ ಆಧಾರದ ಮೇಲೆ ಆಟೋ/ ಕ್ಯಾಬ್ ಇತ್ಯಾದಿಗಳ ಮೂಲಕ ಸಂಚರಿಸಬಹುದು. ಆದೇಶ ಪಾಲಿಸದೇ ಇರುವವರ ವಿರುದ್ಧ ಕಾನೂನು ಅನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
The deputy commissioner of DK, Dr Rajendra has issued the corona night curfew guidelines on April 9. To curb the spread of Coronavirus, a night curfew will be imposed from April 10 to April 20 from 10 p.m. to 5 a.m. The state government has imposed a night curfew from April 10 to 20 in 8 cities in the state including Bengaluru, Mangaluru, Bidar, Udupi, Kalaburagi, Manipal, Mysuru, and Tumakuru.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm