ಬ್ರೇಕಿಂಗ್ ನ್ಯೂಸ್
09-04-21 09:51 pm Mangaluru correspondent ಕರಾವಳಿ
ಮಂಗಳೂರು, ಎ.9 : ರಾಜ್ಯ ಸರಕಾರದ ಸೂಚನೆಯಂತೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎ.10ರಿಂದ 20ರ ವರೆಗೆ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯ ವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮತ್ತು ಅವರ ಸಹಾಯಕರಿಗೆ ವೈದ್ಯಕೀಯ ಸೇವೆಗಾಗಿ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲ ಕಾರ್ಖಾನೆಗಳು/ಕಂಪನಿಗಳು/ಸಂಸ್ಥೆಗಳು ಯಥಾರೀತಿಯಲ್ಲಿ ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ. ಆದರೆ ಸಂಬಂಧಿಸಿದ ಕಾರ್ಮಿಕರು ಕರ್ಪ್ಯೂ ಅವಧಿಗೆ ಮುನ್ನವೇ ಕರ್ತವ್ಯದಲ್ಲಿ ಹಾಜರಿರಬೇಕು.
ದೂರಸಂಪರ್ಕ ಮತ್ತು ಅಂತರ್ಜಾಲ ಸೇವಾ ಸಂಸ್ಥೆಗಳು ಹಾಗೂ ಮಾಹಿತಿ ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ ಆಧಾರಿತ ಸಂಸ್ಥೆಗಳ ಸಿಬ್ಬಂದಿ ರಾತ್ರಿ ಪಾಳಿಯಲ್ಲಿ ಅಧಿಕೃತ ಗುರುತಿನ ಚೀಟಿ ಹೊಂದಿ ಸಂಚರಿಸಲು ಅನುಮತಿ ನೀಡಲಾಗಿದೆ.
ವೈದ್ಯಕೀಯ ಸೇವೆ ಮತ್ತು ತುರ್ತು ಚಟುವಟಿಕೆಗೆ ಮಾತ್ರ ಅನುಮತಿ ನೀಡಲಾಗಿದೆ. ಉಳಿದಂತೆ ಎಲ್ಲ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಅತ್ಯವಶ್ಯಕ ಸೇವೆಗಳನ್ನು ಒದಗಿಸುವಂತಹ ವಾಹನಗಳು, ಸರಕು ಸಾಗಣಿಕೆ ವಾಹನಗಳು, ಹೋಮ್ ಡೆಲಿವರಿ, ಇ-ಕಾಮರ್ಸ್ ಮತ್ತು ಖಾಲಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
ರಾತ್ರಿ ವೇಳೆಯಲ್ಲಿನ ಬಸ್, ರೈಲು ಹಾಗೂ ವಿಮಾನದ ದೂರ ಪ್ರಯಾಣಕ್ಕೆ ಅನುಮತಿ ನೀಡಲಾಗಿದ್ದು, ಪ್ರಯಾಣಿಕರು ಮನೆಯಿಂದ ನಿಲ್ದಾಣಗಳಿಗೆ ಮತ್ತು ನಿಲ್ದಾಣಗಳಿಂದ ಮನೆಗೆ ಅಧಿಕೃತ ಟಿಕೆಟ್ಗಳ ಆಧಾರದ ಮೇಲೆ ಆಟೋ/ ಕ್ಯಾಬ್ ಇತ್ಯಾದಿಗಳ ಮೂಲಕ ಸಂಚರಿಸಬಹುದು. ಆದೇಶ ಪಾಲಿಸದೇ ಇರುವವರ ವಿರುದ್ಧ ಕಾನೂನು ಅನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
The deputy commissioner of DK, Dr Rajendra has issued the corona night curfew guidelines on April 9. To curb the spread of Coronavirus, a night curfew will be imposed from April 10 to April 20 from 10 p.m. to 5 a.m. The state government has imposed a night curfew from April 10 to 20 in 8 cities in the state including Bengaluru, Mangaluru, Bidar, Udupi, Kalaburagi, Manipal, Mysuru, and Tumakuru.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
18-05-25 08:23 pm
HK News Desk
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
18-05-25 12:42 pm
Mangalore Correspondent
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
18-05-25 07:45 pm
Mangaluru HK Staff
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm