ಬ್ರೇಕಿಂಗ್ ನ್ಯೂಸ್
10-04-21 04:57 pm Mangalore Correspondent ಕರಾವಳಿ
ಮಂಗಳೂರು, ಎ.10: ಕರಾವಳಿಯ ಮಂಗಳೂರು, ಉಡುಪಿಯಲ್ಲಿ ನೈಟ್ ಕರ್ಫ್ಯೂ ವಿಧಿಸಿರುವುದಕ್ಕೆ ಶಾಸಕರಿಂದ ಆಕ್ಷೇಪ ವ್ಯಕ್ತವಾಗಿದೆ. ಎಪ್ರಿಲ್ ತಿಂಗಳಲ್ಲಿ ಹೆಚ್ಚಿನ ಕಡೆ ಕೋಲ, ನೇಮ, ಉತ್ಸವಗಳು ನಡೆಯುತ್ತಿರುವುದರಿಂದ ಕರಾವಳಿಯಲ್ಲಿ ನೈಟ್ ಕರ್ಫ್ಯೂ ಸಂದರ್ಭದಲ್ಲಿ ಧಾರ್ಮಿಕ ಕಾರ್ಯಕ್ರಮಗಳಿಗೆ ವಿನಾಯ್ತಿ ಕೊಡಬೇಕೆಂದು ಶಾಸಕರು ಆಗ್ರಹಿಸುತ್ತಿದ್ದಾರೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಜೊತೆ ಮಾತನಾಡಿದ್ದಲ್ಲದೆ, ಸಿಎಂ ಯಡಿಯೂರಪ್ಪ ಅವರಿಗೆ ಮನವರಿಕೆ ಮಾಡುವುದಾಗಿ ಶಾಸಕರು ಹೇಳುತ್ತಿದ್ದಾರೆ.
ಮಂಗಳೂರು ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಕಳೆದ ಬಾರಿಯೂ ಕೊರೊನಾ ಕಾರಣದಿಂದ ನೇಮ, ಕೋಲಗಳಂತಹ ಧಾರ್ಮಿಕ ಕಾರ್ಯಕ್ರಮಗಳು ನಡೆದಿರಲಿಲ್ಲ. ಈ ಬಾರಿಯೂ ಅವಕಾಶ ನೀಡದಿದ್ದರೆ ಜನರು ಅಸಹನೆಗೆ ಈಡಾಗುತ್ತಾರೆ. ಕರಾವಳಿ ಭಾಗದಲ್ಲಿ ಕೋಲ, ನೇಮಗಳು ರಾತ್ರಿ ವೇಳೆ ನಡೆಯುವ ಕಾರಣ ಇದಕ್ಕೆ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದ್ದಾರೆ. ಉಡುಪಿ ಶಾಸಕ ರಘುಪತಿ ಭಟ್ ಕೂಡ ಈ ಬಗ್ಗೆ ಸಿಎಂ ಅವರಿಗೆ ಪತ್ರ ಬರೆದು ಧಾರ್ಮಿಕ ವಿಧಿಗಳಿಗೆ ಅವಕಾಶ ನೀಡುವಂತೆ ಆಗ್ರಹಿಸಿದ್ದಾರೆ.
ಆದರೆ, ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ, ನಾವು ರಾಜ್ಯ ಸರಕಾರದ ಸೂಚನೆಯನ್ನು ಪಾಲಿಸುತ್ತೇವೆ ಎಂದಿದ್ದಾರೆ. ರಾಜ್ಯ ಸರಕಾರದ ಗೈಡ್ ಲೈನ್ಸ್ ಪ್ರಕಾರ ಯಾವುದೇ ಧಾರ್ಮಿಕ ಕಾರ್ಯಗಳಿಗೆ ನೈಟ್ ಕರ್ಫ್ಯೂ ಅವಧಿಯಲ್ಲಿ ಅವಕಾಶ ಇರುವುದಿಲ್ಲ. ಶಾಸಕರು ಸಿಎಂ ಅವರನ್ನು ಮನವರಿಕೆ ಮಾಡಿ, ಹೊಸ ಮಾರ್ಗಸೂಚಿಯನ್ನು ಹೊರಡಿಸಿದರೆ ಅದರಂತೆ ನಡೆದುಕೊಳ್ಳುತ್ತೇವೆ. ನಾವಾಗಿಯೇ ಇದನ್ನು ಬದಲಿಸಲು ಸಾಧ್ಯವಾಗಲ್ಲ ಎಂದು ಹೇಳಿದ್ದಾರೆ.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೈಟ್ ಕರ್ಫ್ಯೂ ವಿಧಿಸಲು ಈಗಾಗ್ಲೇ ಆದೇಶ ನೀಡಲಾಗಿದೆ. ಇದರಂತೆ ಯಾವುದೇ ಧಾರ್ಮಿಕ ವಿಧಿಗಳಿಗೆ, ಕಾರ್ಯಕ್ರಮಗಳಿಗೆ ಅವಕಾಶ ಇರುವುದಿಲ್ಲ. ಅಗತ್ಯ ಕೆಲಸದ ಹೊರತಾಗಿ ಎಲ್ಲ ಜನರೂ ರಾತ್ರಿ ಹತ್ತು ಗಂಟೆಯ ನಂತರ ಮನೆ ಸೇರಿಕೊಳ್ಳಬೇಕು. ಇಲ್ಲದಿದ್ದರೆ ಪೊಲೀಸರ ಮೂಲಕ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ರಾಜೇಂದ್ರ ತಿಳಿಸಿದ್ದಾರೆ.
Night curfew Mangalore Mla Vedavyas Kamath urges permission for Bhoota Kola and nema but DC Rajendra Kumar has said a big No for such religious gatherings due to Covid Guidelines.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm