ಬ್ರೇಕಿಂಗ್ ನ್ಯೂಸ್
10-04-21 04:57 pm Mangalore Correspondent ಕರಾವಳಿ
ಮಂಗಳೂರು, ಎ.10: ಕರಾವಳಿಯ ಮಂಗಳೂರು, ಉಡುಪಿಯಲ್ಲಿ ನೈಟ್ ಕರ್ಫ್ಯೂ ವಿಧಿಸಿರುವುದಕ್ಕೆ ಶಾಸಕರಿಂದ ಆಕ್ಷೇಪ ವ್ಯಕ್ತವಾಗಿದೆ. ಎಪ್ರಿಲ್ ತಿಂಗಳಲ್ಲಿ ಹೆಚ್ಚಿನ ಕಡೆ ಕೋಲ, ನೇಮ, ಉತ್ಸವಗಳು ನಡೆಯುತ್ತಿರುವುದರಿಂದ ಕರಾವಳಿಯಲ್ಲಿ ನೈಟ್ ಕರ್ಫ್ಯೂ ಸಂದರ್ಭದಲ್ಲಿ ಧಾರ್ಮಿಕ ಕಾರ್ಯಕ್ರಮಗಳಿಗೆ ವಿನಾಯ್ತಿ ಕೊಡಬೇಕೆಂದು ಶಾಸಕರು ಆಗ್ರಹಿಸುತ್ತಿದ್ದಾರೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಜೊತೆ ಮಾತನಾಡಿದ್ದಲ್ಲದೆ, ಸಿಎಂ ಯಡಿಯೂರಪ್ಪ ಅವರಿಗೆ ಮನವರಿಕೆ ಮಾಡುವುದಾಗಿ ಶಾಸಕರು ಹೇಳುತ್ತಿದ್ದಾರೆ.
ಮಂಗಳೂರು ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಕಳೆದ ಬಾರಿಯೂ ಕೊರೊನಾ ಕಾರಣದಿಂದ ನೇಮ, ಕೋಲಗಳಂತಹ ಧಾರ್ಮಿಕ ಕಾರ್ಯಕ್ರಮಗಳು ನಡೆದಿರಲಿಲ್ಲ. ಈ ಬಾರಿಯೂ ಅವಕಾಶ ನೀಡದಿದ್ದರೆ ಜನರು ಅಸಹನೆಗೆ ಈಡಾಗುತ್ತಾರೆ. ಕರಾವಳಿ ಭಾಗದಲ್ಲಿ ಕೋಲ, ನೇಮಗಳು ರಾತ್ರಿ ವೇಳೆ ನಡೆಯುವ ಕಾರಣ ಇದಕ್ಕೆ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದ್ದಾರೆ. ಉಡುಪಿ ಶಾಸಕ ರಘುಪತಿ ಭಟ್ ಕೂಡ ಈ ಬಗ್ಗೆ ಸಿಎಂ ಅವರಿಗೆ ಪತ್ರ ಬರೆದು ಧಾರ್ಮಿಕ ವಿಧಿಗಳಿಗೆ ಅವಕಾಶ ನೀಡುವಂತೆ ಆಗ್ರಹಿಸಿದ್ದಾರೆ.
ಆದರೆ, ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ, ನಾವು ರಾಜ್ಯ ಸರಕಾರದ ಸೂಚನೆಯನ್ನು ಪಾಲಿಸುತ್ತೇವೆ ಎಂದಿದ್ದಾರೆ. ರಾಜ್ಯ ಸರಕಾರದ ಗೈಡ್ ಲೈನ್ಸ್ ಪ್ರಕಾರ ಯಾವುದೇ ಧಾರ್ಮಿಕ ಕಾರ್ಯಗಳಿಗೆ ನೈಟ್ ಕರ್ಫ್ಯೂ ಅವಧಿಯಲ್ಲಿ ಅವಕಾಶ ಇರುವುದಿಲ್ಲ. ಶಾಸಕರು ಸಿಎಂ ಅವರನ್ನು ಮನವರಿಕೆ ಮಾಡಿ, ಹೊಸ ಮಾರ್ಗಸೂಚಿಯನ್ನು ಹೊರಡಿಸಿದರೆ ಅದರಂತೆ ನಡೆದುಕೊಳ್ಳುತ್ತೇವೆ. ನಾವಾಗಿಯೇ ಇದನ್ನು ಬದಲಿಸಲು ಸಾಧ್ಯವಾಗಲ್ಲ ಎಂದು ಹೇಳಿದ್ದಾರೆ.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೈಟ್ ಕರ್ಫ್ಯೂ ವಿಧಿಸಲು ಈಗಾಗ್ಲೇ ಆದೇಶ ನೀಡಲಾಗಿದೆ. ಇದರಂತೆ ಯಾವುದೇ ಧಾರ್ಮಿಕ ವಿಧಿಗಳಿಗೆ, ಕಾರ್ಯಕ್ರಮಗಳಿಗೆ ಅವಕಾಶ ಇರುವುದಿಲ್ಲ. ಅಗತ್ಯ ಕೆಲಸದ ಹೊರತಾಗಿ ಎಲ್ಲ ಜನರೂ ರಾತ್ರಿ ಹತ್ತು ಗಂಟೆಯ ನಂತರ ಮನೆ ಸೇರಿಕೊಳ್ಳಬೇಕು. ಇಲ್ಲದಿದ್ದರೆ ಪೊಲೀಸರ ಮೂಲಕ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ರಾಜೇಂದ್ರ ತಿಳಿಸಿದ್ದಾರೆ.
Night curfew Mangalore Mla Vedavyas Kamath urges permission for Bhoota Kola and nema but DC Rajendra Kumar has said a big No for such religious gatherings due to Covid Guidelines.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm