ಬ್ರೇಕಿಂಗ್ ನ್ಯೂಸ್
10-04-21 04:57 pm Mangalore Correspondent ಕರಾವಳಿ
ಮಂಗಳೂರು, ಎ.10: ಕರಾವಳಿಯ ಮಂಗಳೂರು, ಉಡುಪಿಯಲ್ಲಿ ನೈಟ್ ಕರ್ಫ್ಯೂ ವಿಧಿಸಿರುವುದಕ್ಕೆ ಶಾಸಕರಿಂದ ಆಕ್ಷೇಪ ವ್ಯಕ್ತವಾಗಿದೆ. ಎಪ್ರಿಲ್ ತಿಂಗಳಲ್ಲಿ ಹೆಚ್ಚಿನ ಕಡೆ ಕೋಲ, ನೇಮ, ಉತ್ಸವಗಳು ನಡೆಯುತ್ತಿರುವುದರಿಂದ ಕರಾವಳಿಯಲ್ಲಿ ನೈಟ್ ಕರ್ಫ್ಯೂ ಸಂದರ್ಭದಲ್ಲಿ ಧಾರ್ಮಿಕ ಕಾರ್ಯಕ್ರಮಗಳಿಗೆ ವಿನಾಯ್ತಿ ಕೊಡಬೇಕೆಂದು ಶಾಸಕರು ಆಗ್ರಹಿಸುತ್ತಿದ್ದಾರೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಜೊತೆ ಮಾತನಾಡಿದ್ದಲ್ಲದೆ, ಸಿಎಂ ಯಡಿಯೂರಪ್ಪ ಅವರಿಗೆ ಮನವರಿಕೆ ಮಾಡುವುದಾಗಿ ಶಾಸಕರು ಹೇಳುತ್ತಿದ್ದಾರೆ.
ಮಂಗಳೂರು ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಕಳೆದ ಬಾರಿಯೂ ಕೊರೊನಾ ಕಾರಣದಿಂದ ನೇಮ, ಕೋಲಗಳಂತಹ ಧಾರ್ಮಿಕ ಕಾರ್ಯಕ್ರಮಗಳು ನಡೆದಿರಲಿಲ್ಲ. ಈ ಬಾರಿಯೂ ಅವಕಾಶ ನೀಡದಿದ್ದರೆ ಜನರು ಅಸಹನೆಗೆ ಈಡಾಗುತ್ತಾರೆ. ಕರಾವಳಿ ಭಾಗದಲ್ಲಿ ಕೋಲ, ನೇಮಗಳು ರಾತ್ರಿ ವೇಳೆ ನಡೆಯುವ ಕಾರಣ ಇದಕ್ಕೆ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದ್ದಾರೆ. ಉಡುಪಿ ಶಾಸಕ ರಘುಪತಿ ಭಟ್ ಕೂಡ ಈ ಬಗ್ಗೆ ಸಿಎಂ ಅವರಿಗೆ ಪತ್ರ ಬರೆದು ಧಾರ್ಮಿಕ ವಿಧಿಗಳಿಗೆ ಅವಕಾಶ ನೀಡುವಂತೆ ಆಗ್ರಹಿಸಿದ್ದಾರೆ.
ಆದರೆ, ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ, ನಾವು ರಾಜ್ಯ ಸರಕಾರದ ಸೂಚನೆಯನ್ನು ಪಾಲಿಸುತ್ತೇವೆ ಎಂದಿದ್ದಾರೆ. ರಾಜ್ಯ ಸರಕಾರದ ಗೈಡ್ ಲೈನ್ಸ್ ಪ್ರಕಾರ ಯಾವುದೇ ಧಾರ್ಮಿಕ ಕಾರ್ಯಗಳಿಗೆ ನೈಟ್ ಕರ್ಫ್ಯೂ ಅವಧಿಯಲ್ಲಿ ಅವಕಾಶ ಇರುವುದಿಲ್ಲ. ಶಾಸಕರು ಸಿಎಂ ಅವರನ್ನು ಮನವರಿಕೆ ಮಾಡಿ, ಹೊಸ ಮಾರ್ಗಸೂಚಿಯನ್ನು ಹೊರಡಿಸಿದರೆ ಅದರಂತೆ ನಡೆದುಕೊಳ್ಳುತ್ತೇವೆ. ನಾವಾಗಿಯೇ ಇದನ್ನು ಬದಲಿಸಲು ಸಾಧ್ಯವಾಗಲ್ಲ ಎಂದು ಹೇಳಿದ್ದಾರೆ.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೈಟ್ ಕರ್ಫ್ಯೂ ವಿಧಿಸಲು ಈಗಾಗ್ಲೇ ಆದೇಶ ನೀಡಲಾಗಿದೆ. ಇದರಂತೆ ಯಾವುದೇ ಧಾರ್ಮಿಕ ವಿಧಿಗಳಿಗೆ, ಕಾರ್ಯಕ್ರಮಗಳಿಗೆ ಅವಕಾಶ ಇರುವುದಿಲ್ಲ. ಅಗತ್ಯ ಕೆಲಸದ ಹೊರತಾಗಿ ಎಲ್ಲ ಜನರೂ ರಾತ್ರಿ ಹತ್ತು ಗಂಟೆಯ ನಂತರ ಮನೆ ಸೇರಿಕೊಳ್ಳಬೇಕು. ಇಲ್ಲದಿದ್ದರೆ ಪೊಲೀಸರ ಮೂಲಕ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ರಾಜೇಂದ್ರ ತಿಳಿಸಿದ್ದಾರೆ.
Night curfew Mangalore Mla Vedavyas Kamath urges permission for Bhoota Kola and nema but DC Rajendra Kumar has said a big No for such religious gatherings due to Covid Guidelines.
01-02-25 05:12 pm
HK News Desk
ಕಾಂಗ್ರೆಸ್ ನಿಂದ ಬಿಜೆಪಿ ಹೋದವರಿಗೆ ಅಲ್ಲಿ ಯಾವ ಸ್ಥಾ...
31-01-25 10:10 pm
Sriramulu, BJP, B. Y. Vijayendra: ವಿಜಯೇಂದ್ರ ಸ...
31-01-25 08:03 pm
SC directive for patients, Karnataka Health D...
31-01-25 06:07 pm
Cheque bounce, Snehamahi Krishna: ಮುಡಾ ಹಗರಣ ಹ...
31-01-25 02:02 pm
01-02-25 09:51 pm
HK News Desk
ಎರ್ನಾಕುಲಂ ಜಿಲ್ಲೆಯಲ್ಲಿ ಒಂದೇ ದಿನ 27 ಬಾಂಗ್ಲಾ ದೇಶ...
01-02-25 09:35 pm
2025ರ ಕೇಂದ್ರ ಬಜೆಟ್ ಗುಂಡಿನ ಗಾಯಕ್ಕೆ ಹಾಕಿದ ಬ್ಯಾಂ...
01-02-25 05:51 pm
ಕೇಂದ್ರ ಬಜೆಟ್ ಮಂಡನೆ ; ಕೃಷಿಕರು, ಮಧ್ಯಮ ವರ್ಗಕ್ಕೆ...
01-02-25 02:10 pm
Sonia Gandhi, president Murmu: ರಾಷ್ಟ್ರಪತಿ ಬಗ್...
31-01-25 09:10 pm
01-02-25 07:47 pm
Mangalore Correspondent
Kotekar Bank Robbery, Murgan D Devar: ಕೋಟೆಕಾರ...
01-02-25 02:32 pm
Mangalore builder Jitendra Kottary, prasanna...
31-01-25 11:05 pm
Mangalore Prasad attavar, RTI Snehamayi Krish...
31-01-25 10:49 pm
Ullal Panchyath, Mangalore; ಉಳ್ಳಾಲ ನಗರಸಭೆ ಸೀಲ...
31-01-25 09:49 pm
01-02-25 10:11 pm
Mangalore Correspondent
Attack on Bus, Hassan, Crime: ಬೆಂಗಳೂರಿನಿಂದ ಮಂ...
31-01-25 10:22 am
Mangalore court, Rape, Crime: 15 ವರ್ಷದ ಬಾಲಕಿ...
30-01-25 11:37 am
Ankola, Mangalore Car, Cash, Crime: ಅಂಕೋಲಾದಲ್...
29-01-25 04:12 pm
Mangalore News, Crime, Court: 14 ವರ್ಷದ ಬಾಲಕಿಯ...
28-01-25 05:17 pm