ಬ್ರೇಕಿಂಗ್ ನ್ಯೂಸ್
11-04-21 09:15 pm Mangaluru correspondent ಕರಾವಳಿ
ಮಂಗಳೂರು, ಎ.11: ಕೊರೊನಾ ಕಾರಣದಿಂದಾಗಿ ಜನತೆ ಆತಂಕ ಪಡುತ್ತಿರುವ ಈ ಸಂದರ್ಭದಲ್ಲಿ ಮುಷ್ಕರ ಹೂಡಿ ಸಾರ್ವಜನಿಕರನ್ನು ಇನ್ನಷ್ಟು ಸಂಕಷ್ಟಕ್ಕೆ ಒಳಪಡಿಸುವುದು ಸರಿಯಲ್ಲ. ಸರಕಾರದ ಮೇಲೆ ವಿಶ್ವಾಸವಿಟ್ಟು ಮುಂದಿನ ದಿನಗಳಲ್ಲಿ ನೌಕರರ ಸಮಸ್ಯೆ ಪರಿಹಾರವಾಗಲಿದೆ ಎಂಬ ಭರವಸೆಯೊಂದಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ.
ಆರನೇ ವೇತನ ಆಯೋಗದ ಶಿಫಾರಸು ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕೂಟ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಐದನೇ ದಿನಕ್ಕೆ ಮುಂದುವರೆಯುತ್ತಿರುವ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮತ್ತು ಪುತ್ತೂರು ವಿಭಾಗದಿಂದ ಹೊರಡುವ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ
ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.

ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಪ್ರತಿ ದಿವಸ ಸುಮಾರು 480 ವಾಹನಗಳು ಸಂಚರಿಸುತ್ತಿದ್ದು, ಪ್ರಸ್ತುತ ಮುಷ್ಕರದ ಅವಧಿಯಲ್ಲಿ ಎ. 10ರಂದು ಸುಮಾರು 140 ವಾಹನಗಳು ಬೆಂಗಳೂರು, ಮೈಸೂರು, ಧರ್ಮಸ್ಥಳ, ಹುಬ್ಬಳ್ಳಿ, ಕಾಸರಗೋಡು, ಹೈದ್ರಾಬಾದ್, ಮಧುರೈ, ಕೊಯಮತ್ತೂರು, ಮಂತ್ರಾಲಯ ಮುಂತಾದ ಮಾರ್ಗಗಳಲ್ಲಿ ಕಾರ್ಯಾಚರಣೆ ನಡೆಸಿವೆ. ಅದೇ ರೀತಿ ಎ.11 ರಂದು ಸುಮಾರು 200 ವಾಹನಗಳಲ್ಲಿ ಪ್ರಯಾಣಿಕರಿಗೆ ಸಾರಿಗೆ ಸೌಲಭ್ಯ ಕಲ್ಪಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ವಾಹನಗಳನ್ನು ಕಾರ್ಯಾಚರಿಸಲು ಅಗತ್ಯ ಯೋಜನೆಗಳನ್ನು ಮಾಡಿಕೊಳ್ಳಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಪುತ್ತೂರು ವಿಭಾಗದಲ್ಲಿಯೂ ಬಸ್ ಸಂಚಾರ ಹೆಚ್ಚುತ್ತಿದ್ದು ಎ. 10ರಂದು 47 ವಾಹನಗಳು ಮತ್ತು ಎ.11ರಂದು ಸುಮಾರು 75 ವಾಹನಗಳನ್ನು ಬೆಂಗಳೂರು, ಮೈಸೂರು, ಶಿವಮೊಗ್ಗ, ಪುತ್ತೂರು, ಮಡಿಕೇರಿ ಮುಂತಾದ ಮಾರ್ಗಗಳಲ್ಲಿ ಬಿಡಲಾಗುತ್ತಿದೆ.
ಈಗಾಗಲೇ ಕರ್ತವ್ಯಕ್ಕೆ ಹಾಜರಾದ ನೌಕರರೆಲ್ಲರಿಗೆ ಅಭಿನಂದನೆ ಸಲ್ಲಿಸಿ, ಇನ್ನುಳಿದ ನೌಕರರು ಕೂಡ ಕರ್ತವ್ಯಕ್ಕೆ ಹಾಜರಾಗಿ ಕೊರೋನಾ ಸಂಕಷ್ಟ ಕಾಲದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಸಚಿವ ಕೋಟ ಮನವಿ ಮಾಡಿದ್ದಾರೆ.
Mangalore Kota Srinivas poojary urge kSRTC staffs to come back to duty by leaving their strike as it's causing much problems to general public.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm