ಬ್ರೇಕಿಂಗ್ ನ್ಯೂಸ್
12-04-21 04:11 pm Mangalore Correspondent ಕರಾವಳಿ
ಮಂಗಳೂರು, ಏ.12 : ಮಂಗಳೂರು ನಗರದಿಂದ ರಾಷ್ಟ್ರ ರಾಜಧಾನಿ ನವದೆಹಲಿಗೆ ಸಂಚಾರ ಮಾಡುತ್ತಿದ್ದ ನೇರ ವಿಮಾನ ಯಾನವನ್ನು ರದ್ದುಪಡಿಸಲಾಗಿದೆ.
ಪ್ರಯಾಣಿಕರ ಕೊರತೆಯ ಕಾರಣದಿಂದ ನೇರ ವಿಮಾನಯಾನ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಏರ್ಪೋರ್ಟ್ ಮೂಲಗಳು ತಿಳಿಸಿವೆ. ಈಗ ದೆಹಲಿಗೆ ವಿಮಾನದಲ್ಲಿ ಹೋಗಬೇಕು ಎಂದರೆ ಬೆಂಗಳೂರಿಗೆ ತೆರಳಿ, ಅಲ್ಲಿಂದ ದೆಹಲಿಗೆ ಹೋಗಬೇಕು. ಇಲ್ಲವೇ ಮುಂಬೈಗೆ ಹೋಗಿ ಅಲ್ಲಿಂದ ದೆಹಲಿ ತಲುಪಬಹುದು.

ಇಂಡಿಗೋ ಸಂಸ್ಥೆ ಮಂಗಳೂರು- ದೆಹಲಿ ನೇರ ವಿಮಾನಯಾನವನ್ನು ಪ್ರಯಾಣಿಕರ ಕೊರತೆಯಿಂದಾಗಿ ಸ್ಥಗಿತಗೊಳಿಸಿದೆ. ಇಂಡಿಗೋ ಹಾದಿಯನ್ನೇ ಸ್ಪೈಸ್ ಜೆಟ್ ಕಂಪನಿಯೂ ತುಳಿದಿದೆ. ಎರಡೂ ಕಂಪನಿಯ ಯಾವುದೇ ವಿಮಾನ ಮಂಗಳೂರು- ನವದೆಹಲಿ ನಡುವೆ ನೇರವಾಗಿ ಸಂಚಾರ ನಡೆಸುವುದಿಲ್ಲ.

ಲಾಕ್ ಡೌನ್ ತೆರವಿನ ಬಳಿಕ ಎರಡೂ ಕಂಪನಿಗಳ ವಿಮಾನ ಸೇವೆಯನ್ನು ಆರಂಭಿಸಲಾಗಿತ್ತು. ಆದರೆ, ಪ್ರಯಾಣಿಕರ ಸಂಖ್ಯೆ ತೀರಾ ಕಡಿಮೆಯಾದ ಕಾರಣಕ್ಕೆ ದೆಹಲಿ ನೇರ ವಿಮಾನ ಸೇವೆಯನ್ನು ನಿಲ್ಲಿಸಲಾಗಿದೆ.
ಪ್ರಯಾಣಿಕರ ಬೇಡಿಕೆ ಹೆಚ್ಚಿದರೆ ಮತ್ತೆ ವಿಮಾನ ಸೇವೆ ಆರಂಭಿಸಲು ನಿರ್ಧರಿಸಲಾಗಿದೆ. ಕಡಿಮೆ ಸಂಖ್ಯೆಯ ಪ್ರಯಾಣಿಕರನ್ನು ಹೊತ್ತು ದೆಹಲಿಗೆ ಹಾರಿದರೆ ನಷ್ಟದ ಕೂಪಕ್ಕೆ ಬೀಳುವ ಚಿಂತೆ ಕಂಪನಿಗಳದ್ದಾಗಿದೆ.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm