ಬ್ರೇಕಿಂಗ್ ನ್ಯೂಸ್
12-04-21 05:18 pm Mangalore Correspondent ಕರಾವಳಿ
ಮಂಗಳೂರು, ಎ.12: ಕೋವಿಡ್ ನಿಯಂತ್ರಣಕ್ಕಾಗಿ ಒಂದ್ಕಡೆ ರಾತ್ರಿ ವೇಳೆ ನೈಟ್ ಕರ್ಫ್ಯೂ ವಿಧಿಸಿದ್ದರೆ, ಮತ್ತೊಂದ್ಕಡೆ ಹಗಲಿನಲ್ಲಿ ಮಾಸ್ಕ್ ಹಾಕದೇ ತಿರುಗಾಡುವ ಮಂದಿಗೆ ಬಿಸಿ ಮುಟ್ಟಿಸುವುದಕ್ಕಾಗಿ ಕೋವಿಡ್ ಮಾರ್ಶಲ್ ಗಳು ಬೀದಿಗೆ ಇಳಿದಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಜಂಟಿ ಆಪರೇಶನ್ ನಡೆಸಲಾಗಿದ್ದು, ಇದಕ್ಕಾಗಿ ಹೋಮ್ ಗಾರ್ಡ್ ಗಳನ್ನು ಬಳಕೆ ಮಾಡಲಾಗಿದೆ. ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿಗಳ ಜೊತೆ ಮಂಗಳೂರಿನಲ್ಲಿ ದಾಳಿ ಕಾರ್ಯಾಚರಣೆ ಆರಂಭಿಸಲಾಗಿದೆ.

ಮಧ್ಯಾಹ್ನ 3 ಗಂಟೆ ಸುಮಾರಿಗೆ ನಗರದಾದ್ಯಂತ ಏಕಕಾಲದಲ್ಲಿ ಮಾರ್ಶಲ್ ಗಳು ರಸ್ತೆಗೆ ಇಳಿದಿದ್ದು ಮಾಸ್ಕ್ ಹಾಕದೇ ತಿರುಗಾಡುವ ಮಂದಿಗೆ 250 ರೂ. ದಂಡ ವಿಧಿಸುತ್ತಿದ್ದಾರೆ. ಸುಮಾರು 50 ಮಂದಿಯ ತಂಡವನ್ನು ಇದಕ್ಕಾಗಿ ಮಾಡಲಾಗಿದ್ದು, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಫೀಲ್ಡಿಗೆ ಇಳಿದಿದ್ದಾರೆ. ನಗರದ ಹಂಪನಕಟ್ಟೆ, ಕುದ್ರೋಳಿ, ಲಾಲ್ ಬಾಗ್ ಹೀಗೆ ಪ್ರಮುಖ ಭಾಗದಲ್ಲಿ ಕೋವಿಡ್ ಮಾರ್ಶಲ್ ಮತ್ತು ಅಧಿಕಾರಿಗಳು ಜೊತೆಯಾಗಿ ದಾಳಿ ನಡೆಸುತ್ತಿದ್ದಾರೆ.


ಹೋಮ್ ಗಾರ್ಡ್ ಸಿಬಂದಿ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಜೊತೆಯಾಗಿ ಬೇರೆ ಬೇರೆ ಕಡೆ ವಾಹನದಲ್ಲಿ ತೆರಳುತ್ತಿದ್ದು, ಜನರು ಇರುವಲ್ಲಿ ಗಾಡಿ ನಿಲ್ಲಿಸಿ ಸ್ಪಾಟ್ ಫೈನ್ ಜಾರಿಗೆ ತರುತ್ತಿದ್ದಾರೆ. ಮಾಸ್ಕ್ ಸರಿಯಾಗಿ ಹಾಕಿರದಿದ್ದರೆ ಸರಿ ಹಾಕುವಂತೆ ಸೂಚನೆ ಕೊಡುತ್ತಾರೆ. ಮಾಸ್ಕ್ ಇಲ್ಲದೇ ಇದ್ದವರಿಗೆ ಸ್ಥಳದಲ್ಲೇ 250 ರೂ. ದಂಡ ವಿಧಿಸುತ್ತಿದ್ದಾರೆ.


ಜಿಲ್ಲಾಡಳಿತದಿಂದ 125 ಹೋಮ್ ಗಾರ್ಡ್ ಸಿಬಂದಿಯನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ವಿವಿಧ ಕಡೆ ಕರ್ತವ್ಯ ನಿರ್ವಹಿಸುತ್ತಿದ್ದು, ಬಸ್ ನಿಲ್ದಾಣ, ಬಸ್, ಮಾರ್ಕೆಟ್ ಹೀಗೆ ಸಾರ್ವಜನಿಕ ಪ್ರದೇಶಗಳಲ್ಲಿ ಮಾರ್ಶಲ್ ಗಳು ಬೀಡು ಬಿಟ್ಟಿದ್ದು, ಸ್ಥಳದಲ್ಲೇ ಹಣ ಪೀಕಿಸುವ ಕೆಲಸ ಮಾಡುತ್ತಿದ್ದಾರೆ.
Mangalore Mcc deploy Marshals in public places to collect fines from those not following covid guidelines.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm