ಬ್ರೇಕಿಂಗ್ ನ್ಯೂಸ್
13-04-21 09:27 pm Headline Karnataka News Network ಕರಾವಳಿ
ಮಂಗಳೂರು, ಎ.13: ಅರಬ್ಬೀ ಸಮುದ್ರದಲ್ಲಿ ಸಿಂಗಾಪುರ ಮೂಲದ ಕಂಟೇನರ್ ಹಡಗಿಗೆ ಡಿಕ್ಕಿಯಾಗಿ ದುರಂತಕ್ಕೀಡಾದ ಮೀನುಗಾರಿಕೆ ಬೋಟಿನಲ್ಲಿದ್ದ ಇಬ್ಬರನ್ನು ರಕ್ಷಣೆ ಮಾಡಲಾಗಿದೆ. ಮೂವರು ಕಾರ್ಮಿಕರ ಮೃತದೇಹ ಪತ್ತೆಯಾಗಿದ್ದು ಉಳಿದ ಸಿಬಂದಿಯ ಪತ್ತೆಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಸಿಂಗಾಪುರ ಮೂಲದ ಕಂಟೇನರ್ ಹಡಗು ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರ ಮಧ್ಯೆ ಸಂಚರಿಸುತ್ತಿದ್ದಾಗ ಮೀನುಗಾರಿಕಾ ಬೋಟಿಗೆ ಡಿಕ್ಕಿಯಾಗಿದೆ ಎನ್ನಲಾಗುತ್ತಿದೆ. ನಿನ್ನೆ ತಡರಾತ್ರಿ ಎರಡು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಕೋಸ್ಟ್ ಗಾರ್ಡ್ ಮತ್ತು ಕಂಟೇನರ್ ಹಡಗಿನ ಸಿಬಂದಿ ಸೇರಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
ಮೂವರ ಮೃತದೇಹ ಪತ್ತೆಯಾಗಿದ್ದು ಅವರನ್ನು ಪಶ್ಚಿಮ ಬಂಗಾಳ ಮೂಲದ ಅಲೆಕ್ಸಾಂಡರ್ ಸೈರಂಗ್, ಅವರ ಮಾವ ಎನ್ನಲಾಗಿರುವ ಇನ್ನೊಬ್ಬ ವ್ಯಕ್ತಿ (ಹೆಸರು ಗೊತ್ತಾಗಿಲ್ಲ), ಮತ್ತೊಬ್ಬ ಮಾಣಿಕ್ ದಾಸ್ ಎಂಬವರೆಂದು ಕೋಸ್ಟ್ ಗಾರ್ಡ್ ಮಾಹಿತಿ ನೀಡಿದೆ. ಈ ನಡುವೆ ಇಬ್ಬರನ್ನು ರಕ್ಷಿಸಿದ್ದು ಪಶ್ಚಿಮ ಬಂಗಾಳದ ಸುನಿಲ್ ದಾಸ್ (34), ತಮಿಳುನಾಡಿನ ರಾಮೇಶ್ವರದ ವೇಲ್ ಮುರುಗನ್ (37) ಎಂದು ಗುರುತಿಸಲಾಗಿದೆ.
ಬೋಟಿನಲ್ಲಿ ಒಟ್ಟು 14 ಮಂದಿ ಇದ್ದರೆನ್ನಲಾಗಿದ್ದು ಈ ಪೈಕಿ ಒಂಬತ್ತು ಮಂದಿಯ ಸುಳಿವು ಪತ್ತೆಯಾಗಿಲ್ಲ. ಕೋಸ್ಟ್ ಗಾರ್ಡ್ ನಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಸಿಂಗಾಪುರ್ ಎಂವಿ ಆ್ಯಪಲ್ ಎಂಬ ಹೆಸರಿನ ಕಂಟೇನರ್ ಹಡಗು ಡಿಕ್ಕಿಯಾಗಿತ್ತು. ರಭಾ ಎಂಬ ಹೆಸರಿನ ಬೋಟ್ ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಬೇಪೂರ್ ಮೂಲದ್ದಾಗಿದ್ದು ಎರಡು ದಿನಗಳ ಹಿಂದೆ ಬೇಪೂರ್ ನಿಂದ ಮೀನುಗಾರಿಕೆಗೆ ಹೊರಟಿತ್ತು. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ತಲಾ ಏಳು ಮಂದಿ ಬೋಟಿನಲ್ಲಿದ್ದರು.
In a tragic incident, three fishermen were killed after the boat start to sink by collision with Singapore ship in Mangalore. Several are said to be missing among 14 members two have been reduced and three found dead.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 11:48 am
Mangalore Correspondent
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm