ಬ್ರೇಕಿಂಗ್ ನ್ಯೂಸ್
14-04-21 10:45 am Mangalore Correspondent ಕರಾವಳಿ
ವಿಟ್ಲ, ಏ. 13: ಸುರಿಬೈಲು ತಿರುವಿನಲ್ಲಿ ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿದ ಪಿಕಪ್ ವಾಹನ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಯಾಗಿ ಸವಾರರಿಬ್ಬರಿಗೆ ಗಾಯವಾಗಿ ಓರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.
ತೊಕ್ಕೊಟ್ಟು ಮೂಲದ ದ್ವಿಚಕ್ರ ವಾಹನ ಸವಾರ ಸಂತೋಷ್ (35) ಮೃತ ಪಟ್ಟಿದ್ದಾರೆ. ಸಹ ಸವಾರ ರಂಜಿತ್ ಗಾಯಗೊಂಡಿದ್ದು ಅವರನ್ನು ಮಂಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲ್ಲಡ್ಕ ಕಡೆಯಿಂದ ಸಾಲೆತ್ತೂರು ಕಡೆಗೆ ಪಿಕ್ಅಪ್ ವಾಹನವನ್ನು ಚಾಲಕ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿ ಸಾಲೆತ್ತೂರು ಕಡೆಯಿಂದ ಕಲ್ಲಡ್ಕ ಕಡೆಗೆ ಹೋಗುತ್ತಿದ್ದ ಸ್ಕೂಟರ್ಗೆ ಢಿಕ್ಕಿ ಹೊಡೆದಿದ್ದು, ಸವಾರರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದರು.
ಬಂಟ್ವಾಳ ಸರಕಾರಿ ಆಸ್ವತ್ರೆಗೆ ಗಾಯಾಳುಗಳನ್ನು ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತೋಷ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಸಂತೋಷ್ ಪೂಜಾರಿ ಹವ್ಯಾಸಿ ನಾಟಕ ಕಲಾವಿದರಾಗಿದ್ದು, ಸ್ತ್ರೀ ವೇಷದಾರಿಯಾಗಿದ್ದರು. ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಲ್ಲಿ ಉದ್ಯೋಗಕ್ಕಾಗಿ ಇತ್ತೀಚಿಗಷ್ಟೆ ಧಾರವಾಡದಲ್ಲಿ ತರಬೇತಿ ಮುಗಿಸಿದ್ದರು. ತೊಕ್ಕೊಟ್ಟು, ದಾರಂದಬಾಗಿಲಿನ ನಿವಾಸಕ್ಕೆ ಅಪರೂಕ್ಕೆಂಬಂತೆ ಬಂದು ಹೋಗುತ್ತಿದ್ದರು. ಮೃತ ಸಂತೋಷ್ ಅವಿವಾಹಿತರಾಗಿದ್ದು ತಾಯಿ ,ಇಬ್ಬರು ಸಹೋದರಿ,ಓರ್ವ ಸಹೋದರನ ಅಗಲಿದ್ದಾರೆ
Two-wheeler rider a resident of Thokottu was dead after a pickup van rammed his bike in Vitla. The deceased had been identified as Santosh (35).
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 11:32 am
HK News Staffer
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm