ಸ್ಕೂಟರ್ ಗೆ ಪಿಕಪ್ ಢಿಕ್ಕಿ ; ತೊಕ್ಕೊಟ್ಟು ನಿವಾಸಿ ಸಾವು

14-04-21 10:45 am       Mangalore Correspondent   ಕರಾವಳಿ

ಪಿಕಪ್ ವಾಹನ ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿ ಸವಾರರಿಬ್ಬರಿಗೆ ಗಾಯವಾಗಿ ಓರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.

ವಿಟ್ಲ, ಏ. 13: ಸುರಿಬೈಲು ತಿರುವಿನಲ್ಲಿ ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿದ ಪಿಕಪ್ ವಾಹನ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಯಾಗಿ ಸವಾರರಿಬ್ಬರಿಗೆ ಗಾಯವಾಗಿ ಓರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.

ತೊಕ್ಕೊಟ್ಟು ಮೂಲದ ದ್ವಿಚಕ್ರ ವಾಹನ ಸವಾರ ಸಂತೋಷ್‌ (35) ಮೃತ ಪಟ್ಟಿದ್ದಾರೆ. ಸಹ ಸವಾರ ರಂಜಿತ್‌ ಗಾಯಗೊಂಡಿದ್ದು ಅವರನ್ನು ಮಂಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲ್ಲಡ್ಕ ಕಡೆಯಿಂದ ಸಾಲೆತ್ತೂರು ಕಡೆಗೆ ಪಿಕ್‌ಅಪ್‌ ವಾಹನವನ್ನು ಚಾಲಕ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿ ಸಾಲೆತ್ತೂರು ಕಡೆಯಿಂದ ಕಲ್ಲಡ್ಕ ಕಡೆಗೆ ಹೋಗುತ್ತಿದ್ದ ಸ್ಕೂಟರ್‌ಗೆ ಢಿಕ್ಕಿ  ಹೊಡೆದಿದ್ದು, ಸವಾರರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದರು.

ಬಂಟ್ವಾಳ ಸರಕಾರಿ ಆಸ್ವತ್ರೆಗೆ ಗಾಯಾಳುಗಳನ್ನು ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ಸರಕಾರಿ ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತೋಷ್‌ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಸಂತೋಷ್ ಪೂಜಾರಿ ಹವ್ಯಾಸಿ ನಾಟಕ ಕಲಾವಿದರಾಗಿದ್ದು, ಸ್ತ್ರೀ ವೇಷದಾರಿಯಾಗಿದ್ದರು. ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಲ್ಲಿ ಉದ್ಯೋಗಕ್ಕಾಗಿ ಇತ್ತೀಚಿಗಷ್ಟೆ ಧಾರವಾಡದಲ್ಲಿ ತರಬೇತಿ ಮುಗಿಸಿದ್ದರು. ತೊಕ್ಕೊಟ್ಟು, ದಾರಂದಬಾಗಿಲಿನ ನಿವಾಸಕ್ಕೆ ಅಪರೂಕ್ಕೆಂಬಂತೆ ಬಂದು ಹೋಗುತ್ತಿದ್ದರು. ಮೃತ ಸಂತೋಷ್ ಅವಿವಾಹಿತರಾಗಿದ್ದು ತಾಯಿ ,ಇಬ್ಬರು ಸಹೋದರಿ,ಓರ್ವ ಸಹೋದರನ ಅಗಲಿದ್ದಾರೆ

Two-wheeler rider a resident of Thokottu was dead after a pickup van rammed his bike in Vitla. The deceased had been identified as Santosh (35).