ಬ್ರೇಕಿಂಗ್ ನ್ಯೂಸ್
15-04-21 04:57 pm Mangalore Correspondent ಕರಾವಳಿ
ಮಂಗಳೂರು, ಎ.15: ನಗರದ ಬಳ್ಳಾಲ್ ಬಾಗ್ ನಲ್ಲಿರುವ ಫೀಲ್ಡ್ ಸ್ಟಾರ್ ಹೈಪರ್ ಮಾರ್ಕೆಟ್ ಮಳಿಗೆ ಬೆಂಕಿಗೆ ಆಹುತಿಯಾಗಿದೆ. ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಬೆಂಕಿ ಬಿದ್ದಿದೆ ಎನ್ನಲಾಗುತ್ತಿದ್ದು, ಕ್ಷಣಮಾತ್ರದಲ್ಲಿ ಬೆಂಕಿ ಹರಡಿಕೊಂಡು ಮೇಲ್ಭಾಗದ ಫೋಮ್ ಸೀಲಿಂಗನ್ನು ಸುಟ್ಟು ಹಾಕಿದೆ.


ಫೀಲ್ಡ್ ಸ್ಟಾರ್ ಹೈಪರ್ ಮಾರ್ಕೆಟ್ ನಾಲ್ಕು ವರ್ಷಗಳ ಹಿಂದೆ ಆರಂಭಗೊಂಡ ಹೊಸ ರೀತಿಯ ಮಳಿಗೆ ಆಗಿತ್ತು. ಸಿಟಿ ಸೆಂಟರ್, ಬಿಗ್ ಬಝಾರ್ ನಲ್ಲಿರುವ ರೀತಿ ಎಲ್ಲವನ್ನೂ ಒಳಗೊಂಡ ಸೂಪರ್ ಮಾರ್ಕೆಟ್. ಆದರೆ, ಯಾವುದೇ ಬಿಲ್ಡಿಂಗ್ ಕಟ್ಟದೆ ನೆಲದಲ್ಲೇ ಅಷ್ಟು ದೊಡ್ಡ ಮಾದರಿಯಲ್ಲಿ ಹೈಪರ್ ಮಾರ್ಕೆಟ್ ಸ್ಥಾಪಿಸಿದ್ದು ಮಂಗಳೂರಿನಲ್ಲಿ ಅದೇ ಮೊದಲು. ಜೀನಸು, ತರಕಾರಿಯಿಂದ ತೊಡಗಿ ಮನೆ, ಕಚೇರಿಗೆ ಬೇಕಾಗುವ ಎಲ್ಲ ಸಾಮಗ್ರಿಗಳು ಅಲ್ಲಿ ದೊರೆಯುತ್ತಿದ್ದವು. ಹೀಗಾಗಿ ಕಡಿಮೆ ಅವಧಿಯಲ್ಲಿ ನಗರದ ಜನರ ಪಾಲಿಗೆ ಮೆಚ್ಚಿನ ಸೂಪರ್ ಮಾರ್ಕೆಟ್ ಆಗಿತ್ತು.



ಈಗ ಹತ್ತು ಗಂಟೆಗೆ ರಾತ್ರಿ ಕರ್ಫ್ಯೂ ವಿಧಿಸುವುದರಿಂದ ನಿನ್ನೆ ರಾತ್ರಿ 9.30ಕ್ಕೆ ಮಳಿಗೆ ಕ್ಲೋಸ್ ಮಾಡಿ ತೆರಳಿದ್ದೆವು. ಹತ್ತುವರೆ ಹೊತ್ತಿಗೆ ಹತ್ತಿರದ ಅಪಾರ್ಟ್ಮೆಂಟ್ ನಿವಾಸಿಗಳು ಮಳಿಗೆಯಲ್ಲಿ ಬೆಂಕಿ ಹತ್ತಿಕೊಂಡಿರುವುದನ್ನು ಕರೆ ಮಾಡಿ ತಿಳಿಸಿದ್ದಾರೆ. ನಾವು ಬಂದ ಬಳಿಕವೂ ಅಗ್ನಿಶಾಮಕ ಸಿಬಂದಿ ಬರುವಾಗ ಲೇಟ್ ಆಗಿತ್ತು. ಅಷ್ಟರಲ್ಲಿ ಬೆಂಕಿ ಹರಡಿದ್ದು ಒಳಭಾಗದ ಸೀಲಿಂಗ್ ಪೂರ್ತಿ ಸುಟ್ಟು ಹೋಗಿದ್ದು ಪ್ಲಾಸ್ಟಿಕ್ ಉರಿದು ಕೆಳಗೆ ಬಿದ್ದು ಕೆಳಭಾಗದಲ್ಲಿದ್ದ ಸಾಮಗ್ರಿಗಳು ಕೂಡ ಹಾಳಾಗಿವೆ ಎಂದು ಹೇಳಿದರು ಅಲ್ಲಿನ ಸಿಬಂದಿ.



ಒಂದು ಕೋಟಿ ನಷ್ಟ ಆಗಿರಬಹುದೆಂದು ಕೆಲವರು ಅಂದಾಜಿಸಿದ್ದಾರೆ. ಇನ್ಶೂರೆನ್ಸ್ ಕಂಪನಿಯವರು ಬಂದಿಲ್ಲ. ಇನ್ಶೂರೆನ್ಸ್ ಇದೆ. ಎಸಿಯಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆಯಿದೆ. ಆದರೆ, ನಾವು ರಾತ್ರಿ ವೇಳೆ ಎಸಿ ಸೇರಿದಂತೆ ಎಲ್ಲವನ್ನೂ ಆಫ್ ಮಾಡಿ ಹೋಗಿದ್ದೆವು. ಪ್ರಕರಣ ದಾಖಲಾಗಿದೆ, ನಷ್ಟ ಅಂದಾಜು ಮಾಡುತ್ತಿದ್ದಾರೆ ಎಂದರು ಇನ್ನೊಬ್ಬ ಸಿಬಂದಿ.
A short circuit has triggered fire Fieldstar HyperMartet at Ballalbagh in Mangalore here on Thursday April 15, leading to panic. It is estimated of one crore loss to the company.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm