ಬ್ರೇಕಿಂಗ್ ನ್ಯೂಸ್
15-04-21 04:57 pm Mangalore Correspondent ಕರಾವಳಿ
ಮಂಗಳೂರು, ಎ.15: ನಗರದ ಬಳ್ಳಾಲ್ ಬಾಗ್ ನಲ್ಲಿರುವ ಫೀಲ್ಡ್ ಸ್ಟಾರ್ ಹೈಪರ್ ಮಾರ್ಕೆಟ್ ಮಳಿಗೆ ಬೆಂಕಿಗೆ ಆಹುತಿಯಾಗಿದೆ. ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಬೆಂಕಿ ಬಿದ್ದಿದೆ ಎನ್ನಲಾಗುತ್ತಿದ್ದು, ಕ್ಷಣಮಾತ್ರದಲ್ಲಿ ಬೆಂಕಿ ಹರಡಿಕೊಂಡು ಮೇಲ್ಭಾಗದ ಫೋಮ್ ಸೀಲಿಂಗನ್ನು ಸುಟ್ಟು ಹಾಕಿದೆ.


ಫೀಲ್ಡ್ ಸ್ಟಾರ್ ಹೈಪರ್ ಮಾರ್ಕೆಟ್ ನಾಲ್ಕು ವರ್ಷಗಳ ಹಿಂದೆ ಆರಂಭಗೊಂಡ ಹೊಸ ರೀತಿಯ ಮಳಿಗೆ ಆಗಿತ್ತು. ಸಿಟಿ ಸೆಂಟರ್, ಬಿಗ್ ಬಝಾರ್ ನಲ್ಲಿರುವ ರೀತಿ ಎಲ್ಲವನ್ನೂ ಒಳಗೊಂಡ ಸೂಪರ್ ಮಾರ್ಕೆಟ್. ಆದರೆ, ಯಾವುದೇ ಬಿಲ್ಡಿಂಗ್ ಕಟ್ಟದೆ ನೆಲದಲ್ಲೇ ಅಷ್ಟು ದೊಡ್ಡ ಮಾದರಿಯಲ್ಲಿ ಹೈಪರ್ ಮಾರ್ಕೆಟ್ ಸ್ಥಾಪಿಸಿದ್ದು ಮಂಗಳೂರಿನಲ್ಲಿ ಅದೇ ಮೊದಲು. ಜೀನಸು, ತರಕಾರಿಯಿಂದ ತೊಡಗಿ ಮನೆ, ಕಚೇರಿಗೆ ಬೇಕಾಗುವ ಎಲ್ಲ ಸಾಮಗ್ರಿಗಳು ಅಲ್ಲಿ ದೊರೆಯುತ್ತಿದ್ದವು. ಹೀಗಾಗಿ ಕಡಿಮೆ ಅವಧಿಯಲ್ಲಿ ನಗರದ ಜನರ ಪಾಲಿಗೆ ಮೆಚ್ಚಿನ ಸೂಪರ್ ಮಾರ್ಕೆಟ್ ಆಗಿತ್ತು.



ಈಗ ಹತ್ತು ಗಂಟೆಗೆ ರಾತ್ರಿ ಕರ್ಫ್ಯೂ ವಿಧಿಸುವುದರಿಂದ ನಿನ್ನೆ ರಾತ್ರಿ 9.30ಕ್ಕೆ ಮಳಿಗೆ ಕ್ಲೋಸ್ ಮಾಡಿ ತೆರಳಿದ್ದೆವು. ಹತ್ತುವರೆ ಹೊತ್ತಿಗೆ ಹತ್ತಿರದ ಅಪಾರ್ಟ್ಮೆಂಟ್ ನಿವಾಸಿಗಳು ಮಳಿಗೆಯಲ್ಲಿ ಬೆಂಕಿ ಹತ್ತಿಕೊಂಡಿರುವುದನ್ನು ಕರೆ ಮಾಡಿ ತಿಳಿಸಿದ್ದಾರೆ. ನಾವು ಬಂದ ಬಳಿಕವೂ ಅಗ್ನಿಶಾಮಕ ಸಿಬಂದಿ ಬರುವಾಗ ಲೇಟ್ ಆಗಿತ್ತು. ಅಷ್ಟರಲ್ಲಿ ಬೆಂಕಿ ಹರಡಿದ್ದು ಒಳಭಾಗದ ಸೀಲಿಂಗ್ ಪೂರ್ತಿ ಸುಟ್ಟು ಹೋಗಿದ್ದು ಪ್ಲಾಸ್ಟಿಕ್ ಉರಿದು ಕೆಳಗೆ ಬಿದ್ದು ಕೆಳಭಾಗದಲ್ಲಿದ್ದ ಸಾಮಗ್ರಿಗಳು ಕೂಡ ಹಾಳಾಗಿವೆ ಎಂದು ಹೇಳಿದರು ಅಲ್ಲಿನ ಸಿಬಂದಿ.



ಒಂದು ಕೋಟಿ ನಷ್ಟ ಆಗಿರಬಹುದೆಂದು ಕೆಲವರು ಅಂದಾಜಿಸಿದ್ದಾರೆ. ಇನ್ಶೂರೆನ್ಸ್ ಕಂಪನಿಯವರು ಬಂದಿಲ್ಲ. ಇನ್ಶೂರೆನ್ಸ್ ಇದೆ. ಎಸಿಯಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆಯಿದೆ. ಆದರೆ, ನಾವು ರಾತ್ರಿ ವೇಳೆ ಎಸಿ ಸೇರಿದಂತೆ ಎಲ್ಲವನ್ನೂ ಆಫ್ ಮಾಡಿ ಹೋಗಿದ್ದೆವು. ಪ್ರಕರಣ ದಾಖಲಾಗಿದೆ, ನಷ್ಟ ಅಂದಾಜು ಮಾಡುತ್ತಿದ್ದಾರೆ ಎಂದರು ಇನ್ನೊಬ್ಬ ಸಿಬಂದಿ.
A short circuit has triggered fire Fieldstar HyperMartet at Ballalbagh in Mangalore here on Thursday April 15, leading to panic. It is estimated of one crore loss to the company.
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 05:45 pm
HK News Desk
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm