ಬ್ರೇಕಿಂಗ್ ನ್ಯೂಸ್
15-04-21 04:57 pm Mangalore Correspondent ಕರಾವಳಿ
ಮಂಗಳೂರು, ಎ.15: ನಗರದ ಬಳ್ಳಾಲ್ ಬಾಗ್ ನಲ್ಲಿರುವ ಫೀಲ್ಡ್ ಸ್ಟಾರ್ ಹೈಪರ್ ಮಾರ್ಕೆಟ್ ಮಳಿಗೆ ಬೆಂಕಿಗೆ ಆಹುತಿಯಾಗಿದೆ. ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಬೆಂಕಿ ಬಿದ್ದಿದೆ ಎನ್ನಲಾಗುತ್ತಿದ್ದು, ಕ್ಷಣಮಾತ್ರದಲ್ಲಿ ಬೆಂಕಿ ಹರಡಿಕೊಂಡು ಮೇಲ್ಭಾಗದ ಫೋಮ್ ಸೀಲಿಂಗನ್ನು ಸುಟ್ಟು ಹಾಕಿದೆ.


ಫೀಲ್ಡ್ ಸ್ಟಾರ್ ಹೈಪರ್ ಮಾರ್ಕೆಟ್ ನಾಲ್ಕು ವರ್ಷಗಳ ಹಿಂದೆ ಆರಂಭಗೊಂಡ ಹೊಸ ರೀತಿಯ ಮಳಿಗೆ ಆಗಿತ್ತು. ಸಿಟಿ ಸೆಂಟರ್, ಬಿಗ್ ಬಝಾರ್ ನಲ್ಲಿರುವ ರೀತಿ ಎಲ್ಲವನ್ನೂ ಒಳಗೊಂಡ ಸೂಪರ್ ಮಾರ್ಕೆಟ್. ಆದರೆ, ಯಾವುದೇ ಬಿಲ್ಡಿಂಗ್ ಕಟ್ಟದೆ ನೆಲದಲ್ಲೇ ಅಷ್ಟು ದೊಡ್ಡ ಮಾದರಿಯಲ್ಲಿ ಹೈಪರ್ ಮಾರ್ಕೆಟ್ ಸ್ಥಾಪಿಸಿದ್ದು ಮಂಗಳೂರಿನಲ್ಲಿ ಅದೇ ಮೊದಲು. ಜೀನಸು, ತರಕಾರಿಯಿಂದ ತೊಡಗಿ ಮನೆ, ಕಚೇರಿಗೆ ಬೇಕಾಗುವ ಎಲ್ಲ ಸಾಮಗ್ರಿಗಳು ಅಲ್ಲಿ ದೊರೆಯುತ್ತಿದ್ದವು. ಹೀಗಾಗಿ ಕಡಿಮೆ ಅವಧಿಯಲ್ಲಿ ನಗರದ ಜನರ ಪಾಲಿಗೆ ಮೆಚ್ಚಿನ ಸೂಪರ್ ಮಾರ್ಕೆಟ್ ಆಗಿತ್ತು.



ಈಗ ಹತ್ತು ಗಂಟೆಗೆ ರಾತ್ರಿ ಕರ್ಫ್ಯೂ ವಿಧಿಸುವುದರಿಂದ ನಿನ್ನೆ ರಾತ್ರಿ 9.30ಕ್ಕೆ ಮಳಿಗೆ ಕ್ಲೋಸ್ ಮಾಡಿ ತೆರಳಿದ್ದೆವು. ಹತ್ತುವರೆ ಹೊತ್ತಿಗೆ ಹತ್ತಿರದ ಅಪಾರ್ಟ್ಮೆಂಟ್ ನಿವಾಸಿಗಳು ಮಳಿಗೆಯಲ್ಲಿ ಬೆಂಕಿ ಹತ್ತಿಕೊಂಡಿರುವುದನ್ನು ಕರೆ ಮಾಡಿ ತಿಳಿಸಿದ್ದಾರೆ. ನಾವು ಬಂದ ಬಳಿಕವೂ ಅಗ್ನಿಶಾಮಕ ಸಿಬಂದಿ ಬರುವಾಗ ಲೇಟ್ ಆಗಿತ್ತು. ಅಷ್ಟರಲ್ಲಿ ಬೆಂಕಿ ಹರಡಿದ್ದು ಒಳಭಾಗದ ಸೀಲಿಂಗ್ ಪೂರ್ತಿ ಸುಟ್ಟು ಹೋಗಿದ್ದು ಪ್ಲಾಸ್ಟಿಕ್ ಉರಿದು ಕೆಳಗೆ ಬಿದ್ದು ಕೆಳಭಾಗದಲ್ಲಿದ್ದ ಸಾಮಗ್ರಿಗಳು ಕೂಡ ಹಾಳಾಗಿವೆ ಎಂದು ಹೇಳಿದರು ಅಲ್ಲಿನ ಸಿಬಂದಿ.



ಒಂದು ಕೋಟಿ ನಷ್ಟ ಆಗಿರಬಹುದೆಂದು ಕೆಲವರು ಅಂದಾಜಿಸಿದ್ದಾರೆ. ಇನ್ಶೂರೆನ್ಸ್ ಕಂಪನಿಯವರು ಬಂದಿಲ್ಲ. ಇನ್ಶೂರೆನ್ಸ್ ಇದೆ. ಎಸಿಯಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆಯಿದೆ. ಆದರೆ, ನಾವು ರಾತ್ರಿ ವೇಳೆ ಎಸಿ ಸೇರಿದಂತೆ ಎಲ್ಲವನ್ನೂ ಆಫ್ ಮಾಡಿ ಹೋಗಿದ್ದೆವು. ಪ್ರಕರಣ ದಾಖಲಾಗಿದೆ, ನಷ್ಟ ಅಂದಾಜು ಮಾಡುತ್ತಿದ್ದಾರೆ ಎಂದರು ಇನ್ನೊಬ್ಬ ಸಿಬಂದಿ.
A short circuit has triggered fire Fieldstar HyperMartet at Ballalbagh in Mangalore here on Thursday April 15, leading to panic. It is estimated of one crore loss to the company.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm