ಬ್ರೇಕಿಂಗ್ ನ್ಯೂಸ್
16-04-21 07:50 pm Mangalore Correspondent ಕರಾವಳಿ
ಮಂಗಳೂರು, ಎ.17: ಎ.8 ಮತ್ತು 9ರಂದು ಕಡಬ ತಾಲೂಕಿನ ಕುಂಜಾಡಿಯಲ್ಲಿ ನಡೆದಿದ್ದ ಭಾರೀ ಗೌಜಿಯ ಧರ್ಮನೇಮದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಪುತ್ತೂರು ವಿಭಾಗಾಧಿಕಾರಿ ಬಳಿ ವರದಿ ಕೇಳಿದ್ದಾರೆ.
ಕೋವಿಡ್ ನಿರ್ಬಂಧ ಇದ್ದರೂ, ಧರ್ಮನೇಮದಲ್ಲಿ ಐದಾರು ಸಾವಿರ ಮಂದಿ ಸೇರಿದ್ದಲ್ಲದೆ ಎರಡು ದಿನ ಭಾರೀ ಗೌಜಿಯಲ್ಲಿ ನಡೆದಿತ್ತು. ರಾಜ್ಯದ ಹಲವಾರು ಕಡೆಯಿಂದ ರಾಜಕಾರಣಿಗಳು, ಸಚಿವರು, ಶಾಸಕರು ತೆರಳಿ ಧರ್ಮನೇಮದಲ್ಲಿ ಕಾಣಿಸಿಕೊಂಡಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ತರವಾಡು ಮನೆಯಲ್ಲಿ ಧರ್ಮನೇಮ ನಡೆದಿದ್ದರಿಂದ ಇಡೀ ಸಮಾಜದ ಉತ್ಸವ ಎಂಬಂತೆ ಜಿಲ್ಲಾ ಬಿಜೆಪಿ ಪ್ರಮುಖರು ಅದನ್ನು ಸಂಭ್ರಮಿಸಿದ್ದರು.



ಇಡೀ ಜಿಲ್ಲೆಯಾದ್ಯಂತ ಪೋಸ್ಟರ್, ಕಟೌಟ್ ಹಾಕಿ, ಒಂದು ಕುಟುಂಬದ ವತಿಯಿಂದ ನಡೆದಿದ್ದ ಧರ್ಮನೇಮಕ್ಕೆ ಸಾರ್ವಜನಿಕ ನೆಲೆಯಲ್ಲಿ ಶುಭ ಹಾರೈಕೆಗಳಾಗಿದ್ದವು. ಗಲ್ಲಿ ಗಲ್ಲಿಯ ಬಿಜೆಪಿ ನಾಯಕರು ನಳಿನ್ ಕುಮಾರ್ ಮತ್ತು ತಮ್ಮ ಭಾವಚಿತ್ರಗಳನ್ನು ಹಾಕಿಸ್ಕೊಂಡು ಸಂಭ್ರಮಿಸಿದ್ದರು. ಧರ್ಮನೇಮ ನಡೆಯುತ್ತಿರುವಾಗಲೇ ಜಿಲ್ಲಾಧಿಕಾರಿ ರಾಜೇಂದ್ರ ಸ್ಥಳಕ್ಕೆ ತೆರಳಿದ್ದರು. ಅಲ್ಲದೆ, ಅಲ್ಲಿನ ವ್ಯವಸ್ಥೆ ಮತ್ತು ಸಾವಿರಾರು ಜನ ಸೇರಿದ್ದ ವಿಚಾರದಲ್ಲಿ ಗರಂ ಆಗಿದ್ದರು ಎನ್ನೋ ವಿಚಾರ ತಿಳಿದುಬಂದಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಯನ್ನೇ ಅಲ್ಲಿದ್ದ ಕೆಲವು ಬಿಜೆಪಿ ನಾಯಕರು ತರಾಟೆಗೆತ್ತಿಕೊಂಡಿದ್ದೂರು ಎಂದು ಹೇಳಲಾಗಿದೆ.
ಧರ್ಮನೇಮದಲ್ಲಿ ಜಿಲ್ಲಾಧಿಕಾರಿ ನಳಿನ್ ಕುಮಾರ್ ಜೊತೆಗೆ ನಿಂತು ತೆಗೆಸಿಕೊಂಡಿದ್ದ ಫೋಟೋ ಇಟ್ಟುಕೊಂಡು ಜಾಲತಾಣದಲ್ಲಿ ಟೀಕೆ ಮಾಡಲಾಗಿತ್ತು. ಜಾಲತಾಣದಲ್ಲಿ ಟೀಕೆ ಮತ್ತು ಪ್ರಶ್ನೆಗಳ ಸುರಿಮಳೆ ಕೇಳಿಬಂದ ಕಾರಣಕ್ಕೋ ಏನೋ, ಧರ್ಮನೇಮದ ವಿಚಾರದಲ್ಲಿ ಪುತ್ತೂರು ವಿಭಾಗಾಧಿಕಾರಿಯಿಂದ ಜಿಲ್ಲಾಧಿಕಾರಿ ವರದಿ ಕೇಳಿದ್ದಾರೆಂದು ತಿಳಿದುಬಂದಿದೆ. ಎಷ್ಟು ಜನ ಸೇರಿದ್ದರು, ಏನೆಲ್ಲಾ ವ್ಯವಸ್ಥೆ ಮಾಡಲಾಗಿತ್ತು. ಕೋವಿಡ್ ನಿಯಮಗಳನ್ನು ಪಾಲನೆ ಮಾಡಲಾಗಿತ್ತೇ ಇತ್ಯಾದಿ ವಿಚಾರದ ಬಗ್ಗೆ ಪುತ್ತೂರು ವಿಭಾಗಾಧಿಕಾರಿ ವರದಿ ಕೊಡಬೇಕಾಗಿದೆ.
Also Read: ಉಸ್ತುವಾರಿ ಸಚಿವರಿಗೆ ಪಾಸಿಟಿವ್ ; ಧರ್ಮನೇಮಕ್ಕೆ ತೆರಳಿದವರಿಗೆ ಕೋವಿಡ್ ಇರಲಿಕ್ಕಿಲ್ಲವೇ ಜಿಲ್ಲಾಧಿಕಾರಿಗಳೇ !?
Dharma Neema at Kunjady Taravadu of MP and State BJP president Nalin Kumar Kateel in Paltady of Kadaba taluk, Dakshina Kannada DC Rajendra Kumar demands report from Puttur Asst Commissioner about the details of the event.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm